AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮುನಿಸಿಗೆ ಬ್ರೇಕ್: ಪ್ರಜ್ವಲ್ ಪರ ಪ್ರಚಾರ ಆರಂಭಿಸಿದ ಪ್ರೀತಂ ಗೌಡ

ಬೂತ್ ಮಟ್ಟದ ಪ್ರಚಾರವನ್ನು ಈಗಲೇ ಆರಂಭಿಸುತ್ತಿದ್ದೇವೆ. ಈವರೆಗೆ ಯಾರೂ ಬೂತ್ ಮಟ್ಟದ ಪ್ರಚಾರ ಹಾಸನದಲ್ಲಿ ಶುರು ಮಾಡಿರಲಿಲ್ಲ. ನಾವು ಶುರು ಮಾಡಿದ್ದೇವೆ. ಎನ್​ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ ಎಂದು ಪ್ರೀತಂ ಗೌಡ ಹೇಳಿದ್ದಾರೆ.

ಹಾಸನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮುನಿಸಿಗೆ ಬ್ರೇಕ್: ಪ್ರಜ್ವಲ್ ಪರ ಪ್ರಚಾರ ಆರಂಭಿಸಿದ ಪ್ರೀತಂ ಗೌಡ
ಪ್ರೀತಂ ಗೌಡ
ಮಂಜುನಾಥ ಕೆಬಿ
| Edited By: |

Updated on: Apr 10, 2024 | 12:10 PM

Share

ಹಾಸನ, ಏಪ್ರಿಲ್ 10: ಲೋಕಸಭೆ ಚುನಾವಣೆಗೆ (Lok Sabha Elections) ದಿನಗಣನೆ ಆರಂಭವಾಗಿದ್ದು, ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ (BJP JDS Alliance) ಎದುರಾಗಿರುವ ಸಂಕಷ್ಟವನ್ನು ನಿವಾರಿಸುವಲ್ಲಿ ಬಿಜೆಪಿ (BJP) ನಾಯಕರು ಕೊನೆಗೂ ಯಶಸ್ವಿಯಾಗಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಜಿ ಶಾಸಕ ಪ್ರೀತಂ ಗೌಡ ಮುನಿಸನ್ನು ತಣಿಸುವಲ್ಲಿ ರಾಜ್ಯ ಹಾಗೂ ಹೈಕಮಾಂಡ್ ನಾಯಕರು ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ಮೈತ್ರಿ ಅಭ್ಯರ್ಥಿ ಪ್ರೀತಂ ಗೌಡ ಪರ ಪ್ರಚಾರ ಆರಂಬಿಸಿದ್ದಾರೆ.

ಪ್ರೀತಂ ಗೌಡ ಹಾಸನದ ವಿದ್ಯಾನಗರದಲ್ಲಿ ಮನೆ ಮನೆ ಪ್ರಚಾರ ಆರಂಭಿಸಿದರು. ಬೆಂಬಲಿಗರ ಜೊತೆ ಪ್ರಜ್ವಲ್ ಪರ ಪ್ರಚಾರ ಶುರು ಮಾಡಿದ ಪ್ರೀತಂ ಗೌಡ, ಇದೇ ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಕರ ಪತ್ರ ನೀಡಿ ಪ್ರಚಾರ ಶುರು ಮಾಡಿದರು.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಇಲ್ಲಿ ಪ್ರೀತಂ ಗೌಡ ಅಥವಾ ಇನ್ನೊಬ್ಬ ಎಂಬ ವಿಷಯ ಮುಖ್ಯವಲ್ಲ. ಎನ್​ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮ ವಹಿಸಿ ಕೆಲಸ ಮಾಡುತ್ತೇವೆ. ಹೊಳೆನರಸಿಪುರ ವಿಧಾನಸಭಾ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿಗೆ ಕಾಂಗ್ರೆಸ್ಸಿಗಿಂತ ಎಷ್ಟು ಹೆಚ್ಚು ಮತ ದೊರೆಯುತ್ತದೆಯೋ ಅದಕ್ಕಿಂತ ಒಂದು ಮತ ಹೆಚ್ಚು ದೊರೆಯುವಂತೆ ಹಾಸನದಲ್ಲಿ ನಾವು ಮಾಡುತ್ತೇವೆ. ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಬೂತ್ ಮಟ್ಟದ ಪ್ರಚಾರವನ್ನು ಈಗಲೇ ಆರಂಭಿಸುತ್ತಿದ್ದೇವೆ. ಈವರೆಗೆ ಯಾರೂ ಬೂತ್ ಮಟ್ಟದ ಪ್ರಚಾರ ಹಾಸನದಲ್ಲಿ ಶುರು ಮಾಡಿರಲಿಲ್ಲ. ನಾವು ಶುರು ಮಾಡಿದ್ದೇವೆ. ಎನ್​ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಇದರಲ್ಲಿ ಜೆಡಿಎಸ್, ಬಿಜೆಪಿ ಎಂಬುದು ಬರುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿ ಪ್ರಾಮಾಣಿಕವಾಗಿ ಎನ್​ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿಗೆ ಮೈತ್ರಿ ಮುನಿಸಿನ ಸಂಕಷ್ಟ, ಕಾಂಗ್ರೆಸ್​ಗೆ ಬಣ ರಾಜಕೀಯದ ಬಿಸಿ: ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ

ಈವರೆಗೆ ಪ್ರೀತಂ ಗೌಡ ಹಾಸನದಲ್ಲಿ ಪ್ರಚಾರದ ಕಣಕ್ಕೆ ಧುಮುಕಿರಲಿಲ್ಲ. ಬದಲಿಗೆ ಮೈಸೂರಿನಲ್ಲಷ್ಟೇ ಕಾರ್ಯಪ್ರವೃತ್ತರಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ‌ ವಿಜಯೆಂದ್ರ ಅತ್ಯಾಪ್ತ ಬಳಗದಲ್ಲಿದ್ದರೂ ಪ್ರೀತಂ ಗೌಡ ಮನವೊಲಿಸಲು ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅಗರವಾಲ್ ಪರದಾಟ ಪಡುವಂತಾಗಿತ್ತು. ಇದು ಪಕ್ಷದ ಹೈಕಮಾಂಡ್​ಗೂ ತಲೆನೋವು ತಂದೊಡ್ಡಿತ್ತು. ಆದಾಗ್ಯೂ, ಇದೀಗ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು