AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಆರೋಪಿಗಳು!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಆಸ್ತಿ ಕಲಹಕ್ಕೆ ಕೆಎಸ್‌ಆರ್‌ಟಿಸಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಎರಡು ಎಕರೆ ಭೂಮಿ ವಿವಾದದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿ ಬಂದಿದ್ದ ವೀರಪ್ಪನನ್ನು ಕುಟುಂಬಸ್ಥರೇ ಕೊಲೆ ಮಾಡಿ, ದೇಹಕ್ಕೆ ಪೆಟ್ರೋಲ್ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 11 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆಲೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಆರೋಪಿಗಳು!
ಮೃತ ವೀರಪ್ಪ
ಮಂಜುನಾಥ ಕೆಬಿ
| Edited By: |

Updated on:Feb 18, 2026 | 11:29 AM

Share

ಹಾಸನ, ಫೆಬ್ರವರಿ 18: ಆಸ್ತಿ ಕಲಹಕ್ಕೆ ಸಂಬಂಧಿಸಿ ಸಾರಿಗೆ ಇಲಾಖೆ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ನಡೆದಿದೆ. ಎರಡು ಎಕರೆ ಆಸ್ತಿಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ಕೇಸ್ ಮುಗಿಸಿ ಬಂದ ಸಂಜೆಯೇ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಲೂರು ಪೊಲೀಸರು ತನಿಖೆ ನಡೆಸಿದ್ದಾರೆ.

ಕೋರ್ಟ್​ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ

ಮೃತ ವೀರಪ್ಪ (58)ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ ಹೊಂದುವ ಹಂತದಲ್ಲಿದ್ದರು. ಕೆಲ ವರ್ಷಗಳ ಹಿಂದೆ ವೀರಪ್ಪನ ಚಿಕ್ಕಪ್ಪ ಬಾಗಲಯ್ಯ ತನ್ನ 2 ಎಕರೆ ಆಸ್ತಿಯನ್ನು ಅವರಿಗೆ ಕೊಡುವುದಾಗಿ ದಾನಪತ್ರ ನೀಡಿದ್ದರು. ಚಿಕ್ಕಪ್ಪನ ನಿಧನದ ಬಳಿಕ ಆ ಆಸ್ತಿ ವೀರಪ್ಪನ ಹೆಸರಿಗೆ ರಿಜಿಸ್ಟರ್ ಆಗಿತ್ತು. ಆದರೆ ಆತನ ಮಕ್ಕಳಾದ ಮಲ್ಲಮ್ಮ ಹಾಗೂ ಮಹದೇವಮ್ಮ ಮತ್ತು ಅವರ ಕುಟುಂಬಸ್ಥರು ಆಸ್ತಿ ಹಂಚಿಕೆ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು.ಈ ಹಿನ್ನೆಲೆ ಮಂಗಳವಾರ ಆಲೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ವೀರಪ್ಪ ಹಾಜರಾಗಿದ್ದರು.

ಹೆಚ್ಚಿನ ಮಾಹಿತಿಗೆ ವೀಡಿಯೋ ನೋಡಿ

11 ಆರೋಪಿಗಳ ವಿರುದ್ಧ ಕೇಸ್

ವಿಚಾರಣೆ ಮುಗಿಸಿ ಜಮೀನಿನ ಬಳಿ ತೆರಳಿದ್ದ ವೀರಪ್ಪರನ್ನು ಹಿಂಬಾಲಿಸಿದ ಮಲ್ಲಮ್ಮನ ಮಕ್ಕಳಾದ ಹರೀಶ ಹಾಗು ಪ್ರಕಾಶ ಮತ್ತು ಮಹದೇವಮ್ಮನ ಮಗನಾದ ಮಹದೇವ, ಹಲ್ಲೆ ನಡೆಸಿ ಕೊಲೆಗೈದು, ಬಳಿಕ ಮೃತದೇಹಕ್ಕೆ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ವೀರಪ್ಪನ ಪುತ್ರ ವಿವೇಕ್ ನೀಡಿದ ದೂರಿನ ಮೇರೆಗೆ ಮಲ್ಲಮ್ಮ, ಮಹದೇವಮ್ಮ, ಹರೀಶ್, ಲೋಕೇಶ್, ಮಹದೇವ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಆಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:25 am, Wed, 18 February 26