AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

ಸರಿಯಾದ ಸಮಯಕ್ಕೆ ಲಸಿಕೆ ಸಿಗಲಿಲ್ಲ ಎಂದು ಬೇಸರಗೊಂಡ ಸಾರ್ವಜನಿಕರು ಹಾಸನ ಡಿಸಿ ಮನೆಗೆ ಮುತ್ತಿಗೆ ಹಾಕಿದ್ದಾರೆ. ನೂರಾರು ಜನರ ಗುಂಪು ಹಾಸನ ಡಿಸಿ ನಿವಾಸಕ್ಕೆ ಆಗಮಿಸಿ ಮುತ್ತಿಗೆ ಹಾಕಿ ಕೊವಿಡ್ ಲಸಿಕೆ ನೀಡುವಂತೆ ಆಗ್ರಹಿಸಿದ್ದಾರೆ.

Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ
ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ
TV9 Web
| Updated By: ಆಯೇಷಾ ಬಾನು|

Updated on: Aug 06, 2021 | 10:02 AM

Share

ಹಾಸನ: ಕರ್ನಾಟಕ ರಾಜ್ಯದಿಂದ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಕೊರೊನಾ ಲಸಿಕೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಕಡಿಮೆಯಾಗುತ್ತಿದೆ. ಹಾಗೂ ಲಸಿಕೆ ಪಡೆಯಲು ಜನ ತಿಂಗಳುಗಟ್ಟಲೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ರೆ ಹಾಸನದಲ್ಲಿ ಕೊವಿಡ್ ಲಸಿಕೆ ಸಿಗದಿದ್ದದಕ್ಕೆ ಸಾರ್ವಜನಿಕರು ರೊಚ್ಚಿಗೆದ್ದಿದ್ದಾರೆ.

ಸರಿಯಾದ ಸಮಯಕ್ಕೆ ಲಸಿಕೆ ಸಿಗಲಿಲ್ಲ ಎಂದು ಬೇಸರಗೊಂಡ ಸಾರ್ವಜನಿಕರು ಹಾಸನ ಡಿಸಿ ಮನೆಗೆ ಮುತ್ತಿಗೆ ಹಾಕಿದ್ದಾರೆ. ನೂರಾರು ಜನರ ಗುಂಪು ಹಾಸನ ಡಿಸಿ ನಿವಾಸಕ್ಕೆ ಆಗಮಿಸಿ ಮುತ್ತಿಗೆ ಹಾಕಿ ಕೊವಿಡ್ ಲಸಿಕೆ ನೀಡುವಂತೆ ಆಗ್ರಹಿಸಿದ್ದಾರೆ. ಲಸಿಕಾ ಕೇಂದ್ರದ ಸಿಬ್ಬಂದಿ ಇಂದು ಲಸಿಕೆ ಪಡೆಯಲು ನಿನ್ನೆ ಟೋಕನ್ ನೀಡಿದ್ದರು. ಆದ್ರೆ ಇಂದು ಲಸಿಕಾ ಕೇಂದ್ರಕ್ಕೆ ಹೋದರೆ ಲಸಿಕೆ ಇಲ್ಲ ಎನ್ನುತ್ತಿದ್ದಾರೆ. ಪ್ರತಿದಿನ ಲಸಿಕೆಗಾಗಿ ಕಾದುಕಾದು ಸುಸ್ತಾಗಿದೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ.

Corona vaccine shortage protest

ಲಸಿಕಾ ಕೇಂದ್ರದ ಮುಂದೆ ಕ್ಯೂ ನಿಂತ ಜನ

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣ ಲಸಿಕೆ ಬರುತ್ತಿಲ್ಲ. ಹೀಗಾಗಿ ಲಸಿಕೆ ಸಮಸ್ಯೆ ಎದುರಾಗಿದೆ. ಅದರಲ್ಲೂ ಮೂರನೇ ಅಲೆ ಎದುರಾಗುವ ಭೀತಿಯಲ್ಲಿರುವ ಜನ ಲಸಿಕೆ ಪಡೆಯಲು ಮುಗಿಬೀಳುತ್ತಿದ್ದಾರೆ. ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಇಲ್ಲದ ಕಾರಣ ಪ್ರತಿನಿತ್ಯ ಜನ ಕೇಂದ್ರಕ್ಕೆ ಬಂದು ಹೋಗುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಇನ್ನು ಜಿಲ್ಲೆಯಲ್ಲಿ 18 ವರ್ಷದವರು 14 ಲಕ್ಷ ಮಂದಿ ಇದ್ದು ಲಸಿಕೆ ಕೊರೆತಯಿಂದಾಗಿ ಕೇವಲ ಸೆಕೆಂಡ್ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಗೆ ಕೋವಿಡ್ ಶೀಲ್ಡ್ ಲಸಿಕೆ ಪೂರೈಕೆಯಾಗುತ್ತಿಲ್ಲ. ಕಡಿಮೆ ಲಸಿಕೆ ಇರುವುದರಿಂದ ಕಾದು ಕಾದು ಹಿಂತಿರುಗುತ್ತಿರುವ ಜನ ಆಕ್ರೋಶಗೊಂಡಿದ್ದಾರೆ. ನಿನ್ನೆ ಕೂಡ ಡಿಸಿ ಕಚೇರಿ ಎದುರು ಜನ ಪ್ರತಿಭಟನೆ ಮಾಡಿದ್ದರು. ಇಂದು ಡಿಸಿ ನಿವಾಸದ ಬಳಿ ಪ್ರತಿಭಟನೆ ಮಾಡಿದ್ದಾರೆ.

ಸದ್ಯ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚಿಸಿ ಸಮಸ್ಯೆ ಬಗೆ ಹರಿಸುವುದಾಗಿ ಡಿಸಿ ತಿಳಿಸಿದ್ದಾರೆ. ಹಾಗೂ ಮೊದಲ ಹಂತದ ಲಸಿಕೆ ಕೂಡ ಆರಂಭಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಪ್ರತಿಭಟನೆಗೆ ಬಂದಿದ್ದ ಸಾರ್ವಜನಿಕರು ಹಿಂತಿರುಗಿದ್ದಾರೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನನ್ನು ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ