AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಪ್ರಿಯಕರನೊಂದಿಗೆ ಸೇರಿ ಸ್ವಂತ ಮನೆಗೆ ಕನ್ನ ಹಾಕಿದ ಸೊಸೆ; ಸಿಕ್ಕಿಬಿದ್ದಿದ್ಹೇಗೆ?

Hassan robbery: ಹಾಸನ ತಾಲೂಕಿನ ದೊಡ್ಡಹೊನ್ನೇನಹಳ್ಳಿ ಗ್ರಾಮದಲ್ಲಿ ಶನಿವಾರ ಹಾಡ ಹಗಲೇ ನಡೆದಿದ್ದ ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ ಒಂದೇ ದಿನದಲ್ಲಿ ಪತ್ತೆ ಹಚ್ಚಿದ್ದಾರೆ. ಮನೆಯ ಸೊಸೆಯೇ ತನ್ನ ಪ್ರಿಯಕರನೊಂದಿಗೆ ಸೇರಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಸದ್ಯ ಇಬ್ಬರನ್ನು ಬಂಧಿಸಿದ್ದಾರೆ.

ಹಾಸನ: ಪ್ರಿಯಕರನೊಂದಿಗೆ ಸೇರಿ ಸ್ವಂತ ಮನೆಗೆ ಕನ್ನ ಹಾಕಿದ ಸೊಸೆ; ಸಿಕ್ಕಿಬಿದ್ದಿದ್ಹೇಗೆ?
ಪ್ರಾತಿನಿಧಿಕ ಚಿತ್ರImage Credit source: Getty images
ಮಂಜುನಾಥ ಕೆಬಿ
| Edited By: |

Updated on:Jul 27, 2026 | 3:34 PM

Share

ಹಾಸನ, ಜುಲೈ 27: ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೋಚಿದ್ದ (robbery) ಪ್ರಕರಣವನ್ನು ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಒಂದೇ ದಿನದಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕೇಶವೇಗೌಡ ಅವರ ಸೊಸೆ ಅಮೃತಾ ಹಾಗೂ ಆಕೆಯ ಪ್ರಿಯಕರ ಪರಮೇಶ್ ಅಲಿಯಾಸ್ ಚೇತನ್​​ನನ್ನು ಪೊಲೀಸರು ಬಂಧಿಸಿದ್ದು, ಒಟ್ಟು 56,16,000 ಮೌಲ್ಯದ 441.5 ಗ್ರಾಂ ಚಿನ್ನಾಭರಣ ಹಾಗೂ 13,40,000 ರೂ ಹಣ ವಶಪಡಿಸಿಕೊಂಡಿದ್ದಾರೆ.

ನಡೆದಿದ್ದೇನು?

ಹಾಸನ ತಾಲೂಕಿನ ದೊಡ್ಡಹೊನ್ನೇನಹಳ್ಳಿ ಗ್ರಾಮದಲ್ಲಿ ಶನಿವಾರ ಹಾಡುಹಗಲೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೇಶವೇಗೌಡ, ಅವರ ಪತ್ನಿ ಜಯಲಕ್ಷ್ಮೀ ಹಾಗೂ ಮಗ ವೇಣುಗೋಪಾಲ್ ಜಮೀನಿನ ಕೆಲಸಕ್ಕೆ ತೆರಳಿದ್ದರು. ಮಗನನ್ನು ಶಾಲೆಗೆ ಕಳುಹಿಸಿ ಮನೆಯಲ್ಲೇ ಇದ್ದ ಸೊಸೆ ಅಮೃತಾ, ಸಂಚು ರೂಪಿಸಿ ತನ್ನ ಪ್ರಿಯಕರ ಪರಮೇಶ್‌ನನ್ನು ಮನೆಗೆ ಕರೆಸಿಕೊಂಡು ಕೃತ್ಯವೆಸಗಿದ್ದಾಳೆ.

ಕಳ್ಳತನಕ್ಕೆ ಪ್ರಿಯಕರ ಸಾಥ್​

ಮೂಲತಃ ಕೆ.ಹಿರೀಹಳ್ಳಿ ಗ್ರಾಮದವರಾದ ಅಮೃತಾ ಹಾಗೂ ಪ್ರಿಯಕರ ಪರಮೇಶ್​​ ಹಲವು ವರ್ಷಗಳಿಂದ ಪರಿಚಯವಿದ್ಧರು. ಮನೆಗೆ ಬಂದ ಪರಮೇಶ್​​ಗೆ ಬೀರುವಿನಲ್ಲಿದ್ದ ಚಿನ್ನ ಮತ್ತು ಹಣವನ್ನು ಆತನಿಗೆ ನೀಡಿದ್ದಾಳೆ. ನಂತರ ತನಗೇನೂ ತಿಳಿಯದಂತೆ ಮನೆಯ ಮುಂಬಾಗಿಲಿಗೆ ಬೀಗ ಹಾಕದೆ, ಕೊಟ್ಟಿಗೆಗೆ ಬೀಗ ಹಾಕಿಕೊಂಡು ಜಮೀನಿನತ್ತ ತೆರಳಿದ್ದಾಳೆ.

ಇದನ್ನೂ ಓದಿ: ಗದಗ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತಾರಾಜ್ಯ ಕಳ್ಳರ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

ಇತ್ತ ಸಂಜೆ ಜಮೀನಿನ ಕೆಲಸ ಮುಗಿಸಿಕೊಂಡು ಕೇಶವೇಗೌಡ ದಂಪತಿ ಮನೆಗೆ ಹಿಂತಿರುಗಿದಾಗ ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ ಹಣ ಕಳುವಾಗಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಅಮೃತಾ ಕಳ್ಳತನವಾಗಿರುವ ಬಗ್ಗೆ ತನಗೇನೂ ಗೊತ್ತಿಲ್ಲವೆಂಬಂತೆ ನಾಟಕವಾಡಿದ್ದಾಳೆ.

ಇದನ್ನೂ ಓದಿ: ಸರ್ಕಾರಿ ಕೆಲಸದ ಆಮಿಷ ಒಡ್ಡಿ ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್!

ಇನ್ನು ಈ ಹಿಂದೆ ಕೂಡ ಅಮೃತಾ ತನ್ನ ಅತ್ತೆ ಜೊತೆಗೆ ಜಗಳವಾಡಿ 100 ಗ್ರಾಂ ಚಿನ್ನಾಭರಣವನ್ನು ತೆಗೆದುಕೊಂಡು ಹೋಗಿದ್ದಳು. ಇನ್ನು ಘಟನೆ ನಡೆದಾಗ ಮನೆಯಲ್ಲಿ ಒಬ್ಬಳೇ ಇದ್ದ ಕಾರಣ ಅನುಮಾನ ವ್ಯಕ್ತವಾಗಿದೆ. ಹಿಗಾಗಿ ತನಿಖೆ ಕೈಗೆತ್ತಿಕೊಂಡ ಹಾಸನ ಗ್ರಾಮಾಂತರ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಓರ್ವ ವ್ಯಕ್ತಿ ಮನೆಗೆ ಬಂದು ಹೋಗಿರುವುದು ಪತ್ತೆ ಆಗಿದೆ. ಹಾಗಾಗಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದ್ದು, ಅಮೃತಾ ಸೇರಿ ಪ್ರಿಯಕರ ಪರಮೇಶ್‌ನನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:31 pm, Mon, 27 July 26

Follow Us