AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಅರ್ಪಿತಾ ಕಿಡ್ನಾಪ್​ ಕೇಸ್​: ಸೊಸೆಯನ್ನ ಅಪಹರಿಸಿ ಕಾರಿನಲ್ಲಿ ತಾಳಿ ಕಟ್ಟಲು ಯತ್ನಿಸಿದ ಮಾವ, ಮುಂದೇನಾಯ್ತ? ಇಲ್ಲಿದೆ ಓದಿ

ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅರ್ಪಿತಾರನ್ನು ಅಪಹರಣ ಮಾಡಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ಹಾಸನ ಪೊಲೀಸರು ಏಳೇ ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದಾರೆ. ಹಾಗಾದರೆ ಈ ಏಳು ಗಂಟೆ ಏನೆಲ್ಲಾ ಆಯ್ತು ಇಲ್ಲಿ ಓದಿ

ಹಾಸನ ಅರ್ಪಿತಾ ಕಿಡ್ನಾಪ್​ ಕೇಸ್​: ಸೊಸೆಯನ್ನ ಅಪಹರಿಸಿ ಕಾರಿನಲ್ಲಿ ತಾಳಿ ಕಟ್ಟಲು ಯತ್ನಿಸಿದ ಮಾವ, ಮುಂದೇನಾಯ್ತ? ಇಲ್ಲಿದೆ ಓದಿ
ಅರ್ಪಿತಾ (ಎಡಚಿತ್ರ) ಆರೋಪಿ ರಾಮು (ಬಲಚಿತ್ರ)
ಮಂಜುನಾಥ ಕೆಬಿ
| Edited By: |

Updated on: Dec 01, 2023 | 9:51 AM

Share

ಹಾಸನ ಡಿ.01: ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಘಟನೆ ನಡೆದ ಏಳೇ ಗಂಟೆಗಳಲ್ಲಿ ಪೊಲೀಸರು (Police) ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಬಂಧಿತ ಆರೋಪಿ ರಾಮು ಹಲವು ವಿಚಾರಗಳನ್ನು ಬಾಯಿ ಬಿಟ್ಟಿದ್ದಾನೆ. ಶಿಕ್ಷಕಿ (Teacher) ಅರ್ಪಿತಾ ಅವರಿಗೆ ಆರೋಪಿ ರಾಮು ಮಾವನಾಗಬೇಕು. ಹೀಗಾಗಿ ಆರೋಪಿ ರಾಮು ಮತ್ತು ಆತನ ಪೋಷಕರು 15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಅರ್ಪಿತಾ ಮನೆಗೆ ಬಂದಿದ್ದರು. ಆದರೆ ಅರ್ಪಿತಾ ಮತ್ತು ಆಕೆಯ ಪೋಷಕರು ಇದಕ್ಕೆ ಒಪ್ಪಿರಲಿಲ್ಲ.

ಇದರಿಂದ ಕೋಪಗೊಂಡ ಆರೋಪಿ ರಾಮು ಹೇಗಾದರು ಸರಿ ಅರ್ಪಿತಾಳನ್ನು ಮದುವೆಯಾಗಲೇ ಬೇಕೆಂದು ಗುರುವಾರ (ನ.30) ಬೆಳಿಗ್ಗೆ 8 ಗಂಟೆಗೆ 5 ನಿಮಿಷಕ್ಕೆ ಶಾಲೆಗೆ ಹೋಗುತ್ತಿದ್ದ ಅರ್ಪಿತಾರನ್ನು ಇನ್ನೋವಾ ಕಾರ್​​ ಅಪಹರಣ ಮಾಡಿದ್ದನು. ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಯತ್ನಿಸಿದ್ದಾನೆ. ಆದರೆ ಯುವತಿ ಇದಕ್ಕೆ ಒಪ್ಪಲಿಲ್ಲ.

ಇದನ್ನೂ ಓದಿ: ತನ್ನ ಪ್ರೀತಿ ಸಾಬೀತು ಮಾಡಲು ಪ್ರೇಯಸಿಗೆ ವೀಡಿಯೋ ಕಾಲ್ ಮಾಡಿ ಹಳೆ ಲವರ್​ ಮೇಲೆ ಮಾರಣಾಂತಿಕ ಹಲ್ಲೆ

ಇತ್ತ ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಆಕ್ಟಿವ್​ ಆದ ಹಾಸನ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿದ್ದಾರೆ ಎಂಬ ವಿಚಾರ ಪೊಲೀಸರಿಗೆ ತಿಳಿಯುತ್ತದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಬೆನ್ನು ಹತ್ತುತ್ತಾರೆ. ಪೊಲೀಸರು ಬೆನ್ನ ಹತ್ತುತ್ತಲೇ ಕಾರಿನಲ್ಲಿ ರಾಮುನನ್ನು ಮಾತ್ರ ಬಿಟ್ಟು ಉಳಿದವರು ಎಸ್ಕೇಪ್ ಆಗುತ್ತಾರೆ.

ಕೊನೆಗೆ ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಆರೋಪಿ ರಾಮುನನ್ನು ಬಂಧಿಸುತ್ತಾರೆ. ಪೊಲೀಸರು ರಾತ್ರಿ ಅರ್ಪಿತಾರನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಹಾಸನ ನಗರ ಪೊಲೀಸರ ಕಾರ್ಯಾಚರಣೆಗೆ ಕುಟುಂಬ ಸದಸ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೇಫಾಗಿ ಮಗಳು ಮನೆ‌ ಸೇರಿದ್ದಕ್ಕೆ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ