AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕುಮಾರಣ್ಣನಿಗೆ ಒಂದೂವರೆ ಲಕ್ಷ ಬೆಲೆಬಾಳುವ ಜೋಡೆತ್ತು ಗಿಫ್ಟ್ ಕೊಟ್ಟ ನಾಗರಹಳ್ಳಿ ಗ್ರಾಮಸ್ಥರು

ಪಂಚರತ್ನ ಯಾತ್ರೆ ವೇಳೆ ಗಂಡಸಿಗೆ ಬಂದ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ನಾಗರಹಳ್ಳಿಯ ಗ್ರಾಮಸ್ಥರು ಒಂದೂವರೆ ಲಕ್ಷ ಬೆಲೆಬಾಳುವ ಜೋಡೆತ್ತುಗಳನ್ನ ಗಿಫ್ಟ್ ಆಗಿ ನೀಡಿದ್ದಾರೆ.

ಹಾಸನ: ಕುಮಾರಣ್ಣನಿಗೆ ಒಂದೂವರೆ ಲಕ್ಷ ಬೆಲೆಬಾಳುವ ಜೋಡೆತ್ತು ಗಿಫ್ಟ್ ಕೊಟ್ಟ ನಾಗರಹಳ್ಳಿ ಗ್ರಾಮಸ್ಥರು
ಜೋಡೆತ್ತು
ಆಯೇಷಾ ಬಾನು
ಆಯೇಷಾ ಬಾನು|

Updated on:Mar 14, 2023 | 3:27 PM

Share

ಹಾಸನ: ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ನೇತೃತ್ವದಲ್ಲಿ ಪಂಚರತ್ನ ಯಾತ್ರೆ(Pancharatna Yatra) ನಡೆಯುತ್ತಿದ್ದು ರೈತರು ತಮ್ಮ ನೆಚ್ಚಿನ ನಾಯಕನಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಗಂಡಸಿ ಹೋಬಳಿಯ ನಾಗರಹಳ್ಳಿಯ ಗ್ರಾಮಸ್ಥರು ಒಂದೂವರೆ ಲಕ್ಷ ಬೆಲೆಬಾಳುವ ಜೋಡೆತ್ತುಗಳನ್ನ(Oxen) ಗಿಫ್ಟ್ ಆಗಿ ನೀಡಿದ್ದಾರೆ.

ಪಂಚರತ್ನ ಯಾತ್ರೆ ಗಂಡಸಿಗೆ ಬಂದಾಗ ಎತ್ತುಗಳನ್ನ ಅಲಂಕಾರ ಮಾಡಿ ಹೆಚ್​ಡಿ ಕುಮಾರಸ್ವಾಮಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಹಳ್ಳಿಕಾರ್ ತಳಿಯ ಜೋಡೆತ್ತುಗಳನ್ನೆ ರೈತನ ಮಗ ಕುಮಾರಸ್ವಾಮಿಗೆ ಗಿಫ್ಟ್ ಕೊಡಬೇಕೆಂದು ನಾಗರಹಳ್ಳಿ ಗ್ರಾಮದ ಜನರು ಒಟ್ಟಾಗಿ ಹಣ ಸಂಗ್ರಹ ಮಾಡಿ, ಎತ್ತುಗಳನ್ನು ಖರೀದಿ ಮಾಡಿದ್ದಾರೆ. ಕುಮಾರಸ್ವಾಮಿ ಮೇಲಿನ ಪ್ರೀತಿಯಿಂದ ಎತ್ತುಗಳನ್ನ ಉಡುಗೊರೆಯಾಗಿ ನೀಡಲು ತೀರ್ಮಾನ ಮಾಡಿದ ಗ್ರಾಮಸ್ಥರು, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಶುಭ ಹಾರೈಸಿ ಜಾನುವಾರುಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ಕಳ್ಳತನಕ್ಕೆ ಪೊಲೀಸ್ ಕಾನ್ಸ್​ಟೇಬಲ್​ನಿಂದ ಸಹಾಯ ಆರೋಪ; ಪೇದೆ ಯಲ್ಲಪ್ಪ ಸಸ್ಪೆಂಡ್

ಗಂಡಸಿಯಲ್ಲಿ ನೆರೆದಿದ್ದ ಸಹಸ್ರಾರು ಜನರ ಸಮ್ಮುಖದಲ್ಲಿ ನಡೆದ ಪಂಚರತ್ನ ಯಾತ್ರೆಯ ಪ್ರಚಾರ ಸಭೆ ಮುಗಿದ ಬಳಿಕ‌ ನಾಗರಹಳ್ಳಿ ಗ್ರಾಮಸ್ಥರು ಎತ್ತುಗಳನ್ನ ಕುಮಾರಸ್ವಾಮಿಗೆ ಹಸ್ತಾಂತರ ಮಾಡಿದ್ರು, ಎತ್ತುಗಳನ್ನ ಸ್ವೀಕಾರ ಮಾಡಿದ ಕುಮಾರಸ್ವಾಮಿ ರೈತರ ಅಭಿಮಾನಕ್ಕೆ ಧನ್ಯವಾದ ಹೇಳಿದರು. ಎತ್ತುಗಳನ್ನ ಕುಮಾರಸ್ವಾಮಿ ಅವರ ಕೇತಗಾನಹಳ್ಳಿಯ ತೋಟದ ಮನೆಗೆ ಬಿಟ್ಟು ಬರುವುದಾಗಿ ರೈತರು ಹೇಳಿದ್ದು, ಕುಮಾರಸ್ವಾಮಿ ಮುಂದಿನ ಸಿಎಂ ಆಗಲಿ ಎಂದು ಶುಭ ಹಾರೈಸಿದ್ದಾರೆ.

ವರದಿ: ಮಂಜುನಾಥ ಕೆಬಿ, ಟಿವಿ9 ಹಾಸನ

Published On - 3:27 pm, Tue, 14 March 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ