AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕಾಫಿತೋಟದಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಕಾಡಾನೆ ದಾಳಿ; ಓರ್ವನ ಕಾಲುಮುರಿತ, ಮತ್ತೋರ್ವನಿಗೆ ಗಾಯ

ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕನೋರ್ವ ಒಂಟಿ ಸಲಗದ ದಾಳಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಜ.04 ರಂದು ನಡೆದಿತ್ತು. ಇದೀಗ ಸಕಲೇಶಪುರ(Sakleshpur) ತಾಲ್ಲೂಕಿನ ಕಲ್ಕುಂದ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ.

ಹಾಸನ: ಕಾಫಿತೋಟದಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಕಾಡಾನೆ ದಾಳಿ; ಓರ್ವನ ಕಾಲುಮುರಿತ, ಮತ್ತೋರ್ವನಿಗೆ ಗಾಯ
ಹಾಸನದಲ್ಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 5:49 PM

Share

ಹಾಸನ, ಫೆ.07: ಜನವರಿ 4 ರಂದು ಬೇಲೂರು ತಾಲ್ಲೂಕಿನ ಮತ್ತಾವರದ ಬಳಿ ದಾಳಿ ಮಾಡಿ ಕಾರ್ಮಿಕನ ಬಲಿಪಡೆದಿದ್ದ ಒಂಟಿ ಸಲಗ, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲ್ಲೂಕಿನ ಕಲ್ಕುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡಾನೆ ದಾಳಿ(Wild Elephant) ಮಾಡಿದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವನ ಕಾಲುಮುರಿತವಾಗಿದ್ದು, ಮತ್ತೋರ್ವನಿಗೆ  ಗಾಯವಾಗಿದೆ. ರಮೇಶ್ ಹಾಗೂ ಶಾಶ್ವತ್ ಕಾಡಾನೆ ದಾಳಿಯಿಂದ ಗಾಯಗೊಂಡವರು. ಕೂಡಲೇ ಇಬ್ಬರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರು

ಕಾಫಿ ಕೊಯ್ಲು ಮಾಡಿದ್ದು, ಚೀಲಗಳನ್ನು ತರಲು ಹೋಗಿದ್ದ ರಮೇಶ್ ಹಾಗೂ ಶಾಶ್ವತ್ ಎಂಬುವವರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿತ್ತು. ಕಾಡಾನೆ ದಾಳಿ ಮಾಡುತ್ತಿದ್ದಂತೆ ತಪ್ಪಿಸಿಕೊಳ್ಳಲು ಓಡಿ ಹೋಗುವಾಗ ಬಿದ್ದು ಶಾಶ್ವತ್ ಗಾಯಗೊಂಡಿದ್ದಾನೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ವಿಚಾರಿಸಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಮಲೆನಾಡು ಭಾಗದ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗ ಹಂತಕ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಾಡಾನೆ ದಾಳಿಯಿಂದ ಕಾರ್ಮಿಕನ ಸಾವು, ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್

ಒಂಟಿ ಸಲಗದ ದಾಳಿಗೆ ಬಲಿಯಾಗಿದ್ದ ಅಮಾಯಕ ಕಾರ್ಮಿಕ

ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಜನವರಿ 04 ರಂದು ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕ ಕಾರ್ಮಿಕ ವಸಂತ್ (45), ಒಂಟಿ ಸಲಗದ ದಾಳಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದ. ಒಂಟಿ ಸಲಗ ವಸಂತ್ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿದ್ದ. ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಮೃತದೇಹ ಮೇಲೆತ್ತಲು ಬಿಡದೆ ಸ್ಥಳೀಯರು ಅಹೋರಾತ್ರಿ ಪ್ರತಿಭಟನೆ ಶುರುಮಾಡಿದ್ದರು. ಇಲ್ಲಿ ನಿರಂತರವಾಗಿ ಆನೆ ದಾಳಿಗಳಿಗೆ ಜನರು ಬಲಿಯಾಗುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೂ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡಲ್ಲ ಎಂದು ಜನರು ಪ್ರತಿಭಟನೆ ಆರಂಭಿಸಿದ್ದರು. ಆದರೀಗ ಸ್ವಲ್ಪದರಲ್ಲೇ ಓರ್ವ ಕಾರ್ಮಿಕ ಬಚಾವ್​ ಆಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Wed, 7 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!