AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಡಾನೆಗಳ ದಾಂಧಲೆ: ಕಾಳಗದಲ್ಲಿ ದಂತ ಮುರಿದುಕೊಂಡ ಭೀಮ

ಹಾಸನ ಜಿಲ್ಲೆಯಲ್ಲಿ ಕಾಡಾನೆ ಭೀಮನ ಹಾವಳಿ ಹೆಚ್ಚಿದೆ. ಮತ್ತೊಂದು ಆನೆ ಜೊತೆಗಿನ ಕಾಳಗದಲ್ಲಿ ಭೀಮ ತನ್ನ ದಂತ ಮುರಿದುಕೊಂಡಿದೆ. ಗ್ರಾಮಗಳಲ್ಲಿ ಭೀತಿ ಸೃಷ್ಟಿಸಿರುವ ಮದವೇರಿದ ಭೀಮ, ಅರಣ್ಯ ಇಲಾಖೆಗೆ ಸವಾಲಾಗಿದೆ. ಹಿಂದೆ ಚಿಕಿತ್ಸೆ ವೇಳೆ ಶಾರ್ಪ್ ಶೂಟರ್ ವೆಂಕಟೇಶ್‌ರನ್ನು ಕೊಂದ ಬಳಿಕ ಗಾಯ ಗುಣಮುಖವಾಗಿ ಎಲ್ಲಿಯೂ ಕಾಣಿಸಿಕೊಳ್ಳದೆ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಮದವೇರಿದ ಕಾರಣ ಊರೂರು ಒಳಗೆ ಅಡ್ಡಾಡುತ್ತಾ ದಾಂದಲೆನಡೆಸುತ್ತಿದೆ.

ಹಾಸನದಲ್ಲಿ ಕಾಡಾನೆಗಳ ದಾಂಧಲೆ: ಕಾಳಗದಲ್ಲಿ ದಂತ ಮುರಿದುಕೊಂಡ ಭೀಮ
ದಂತ ಮುರಿದರೂ ಅರಣ್ಯ ಇಲಾಖೆಯ ಕೈಗೆ ಸಿಗದೆ ಕಾಡಿಸುತ್ತಿರುವ ಭೀಮ
ಮಂಜುನಾಥ ಕೆಬಿ
| Edited By: |

Updated on: Nov 09, 2025 | 5:34 PM

Share

ಹಾಸನ, ನವೆಂಬರ್ 9: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ (Hassan wild elephant rampage) ದಿನೇ ದಿನೇ ಹೆಚ್ಚುತ್ತಿದೆ. ಜನರ ಬಳಿಯೇ ಓಡಾಡುತ್ತಾ ಯಾರಿಗೂ ಏನೂ ಮಾಡುವುದಿಲ್ಲ ಎಂಬ ನಂಬಿಕೆ ಮೂಡಿಸಿದ್ದ ಭೀಮ, ಈಗ ಊರಿನ ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ. ಗ್ರಾಮದೊಳಗೆ ಸಿಕ್ಕ ಸಿಕ್ಕದ್ದನ್ನು ಪುಡಿಗಟ್ಟಿ ಅಟ್ಟಹಾಸ ಮೆರೆಯುತ್ತಿರುವ ಬೃಹತ್ ಸಲಗ ಮತ್ತೊಂದು ಮದವೇರಿದ ಕಾಡಾನೆ ಜೊತೆಗಿನ ಕಾಳಗದಲ್ಲಿ ಒಂದು ದಂತವನ್ನೇ ಮುರಿದುಕೊಂಡಿದೆ.  ಇದೀಗ ಭೀಮ ನಡೆಸುತ್ತಿರುವ ದಾಂಧಲೆ ಅರಣ್ಯ ಇಲಾಖೆಗೆ ದೊಡ್ಡ ತಲೆನೋವು ತರಿಸಿದೆ.

ಮದವೇರಿದ ಆನೆಯ ಹುಚ್ಚಾಟ

ಕಳೆದ ಐದಾರು ವರ್ಷಗಳಿಂದ ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬೇಲೂರು ತಾಲ್ಲೂಕಿನ ವಿವಿದೆಡೆ ಸಂಚಾರ ಮಾಡುತ್ತಾ, ಶಾಂತವಾಗಿ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲೇ ನಡೆದು ಹೋಗಿದ್ದ ಭೀಮ, ಇಂದು ಮತ್ತೊಂದು ದೈತ್ಯಾಕಾರದ ಕ್ಯಾಫ್ಟನ್ ಹೆಸರಿನ ಕಾಡಾನೆ ಜೊತೆಗೆ ಓಡಾಡುತ್ತಾ ಭೀತಿ ಸೃಷ್ಟಿಸಿದೆ.

ಇಂದು ಬೆಳಿಗ್ಗೆ ಬೇಲೂರು ತಾಲ್ಲೂಕಿನ ಜಗಬೋರನಹಳ್ಳೀ ಗ್ರಾಮದಲ್ಲಿ ಎರಡೂ ಆನೆಗಳು ಕಾಳಗ ಶುರುಮಾಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ರೋಷಾವೇಶದಿಂದ ಗ್ರಾಮದೊಳಗೆ ಎಂಟ್ರಿಯಾದ ಭೀಮ, ನೀರಿನ ಟ್ಯಾಂಕರ್ ಪುಡಿಗಟ್ಟಿ, ಎತ್ತಿನ ಗಾಡಿಯಲ್ಲ ಎತ್ತಿ ಬಿಸಾಡಿ ರೌದ್ರಾವತಾರ ಪ್​ರದರ್ಶನ ಮಾಡಿದೆ.ಕಾಡಾನೆ ಗ್ರಾಮದೊಳಗೆ ಬಂದಾಗ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಹಿಂಬಾಲಿಸಿದರೂ ಸಹ ಪಟಾಕಿ ಇಲ್ಲದೆ ಆನೆಯನ್ನು ಓಡಿಸಲು ಪರದಾಡಬೇಕಾಯಿತು.

ಕಾಡಾನೆಯೊಂದಿಗಿನ ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ

ಕ್ಯಾಫ್ಟನ್ ಜೊತೆಗಿನ ಕಾದಾಟದಲ್ಲಿ ಭೀಮನ ಬಲಬಾಗದ ದಂತ ಸಂಪೂರ್ಣ ಮುರಿದು ಬಿದ್ದಿದ್ದು, ಮತ್ತೊಂದು ಆನೆಗೂ ಗಾಯಗಳಾಗಿವೆ. ಸದ್ಯ ದಂತ ಮುರಿದುಕೊಂಡು ಕಾಫಿತೋಟದಲ್ಲಿ ಸೇರಿಕೊಂಡಿರುವ ಸಲಗ ನರಳಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಬೆನ್ನಟ್ಟಿ ಜನರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದಾರೆ.

ಶಾರ್ಪ್ ಶೂಟರ್ ಕೊಂದಿದ್ದ ಭೀಮ

2023ರ ಆಗಸ್ಟ್ ತಿಂಗಳಲ್ಲಿ ಬೆನ್ನಿನ ಕೆಳಬಾಗದಲ್ಲಿ ದೊಡ್ಡ ಗಾಯವಾಗಿ ನರಳಾಡಿದ್ದ ಭೀಮನಿಗೆ ಸೆಪ್ಟೆಂಬರ್ 25ರಂದು ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಿದ್ದರು. ಆದರೆ ಅದು ಪರಿಣಾಮಕಾರಿಯಾಗದ್ದರಿಂದ ಆಗಸ್ಟ್ 31ರಂದು ಭೀಮನಿಗೆ ಅರವಳಿಕೆ ಮದ್ದು ನೀಡಿ ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ನಡೆಸುತ್ತಿದ್ದ ವೇಳೆ ಮದವೇರಿದ್ದ ಭೀಮ ಏಕಾ ಏಕಿ ಅಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ದಾಳಿ ಮಾಡಿ ಕೊಂದಿತ್ತು. ಬಳಿಕ ಗಾಯ ಗುಣಮುಖವಾಗಿ ಎಲ್ಲಿಯೂ ಕಾಣಿಸಿಕೊಳ್ಳದೆ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಮದವೇರಿದ ಕಾರಣ ಊರೂರು ಒಳಗೆ ಅಡ್ಡಾಡುತ್ತಾ ದಾಂದಲೆನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ