AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾಗದ ಅರ್ಜುನ ಆನೆಯ ಸ್ಮಾರಕ; ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಪುತ್ಥಳಿ

ಹಾಸನದ ಸಕಲೇಶಪುರದ ದಬ್ಬಳ್ಳಿಕಟ್ಟೆಯಲ್ಲಿ ಹುತಾತ್ಮ ಕಾಡಾನೆ ಕ್ಯಾಪ್ಟನ್ ಅರ್ಜುನನ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದೆ. ದಸರಾದಲ್ಲಿ ಅಂಬಾರಿ ಹೊತ್ತ, ಕಾರ್ಯಾಚರಣೆಗಳಲ್ಲಿ ಪ್ರಾಣತ್ಯಾಗ ಮಾಡಿದ ಅರ್ಜುನನಿಗೆ ಗೌರವಾರ್ಥವಾಗಿ ನಿರ್ಮಿಸಿದ ಈ ಸ್ಮಾರಕದ ಉದ್ಘಾಟನೆಗೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸ್ಮಾರಕದಲ್ಲಿ ಮೂಲ ಸೌಕರ್ಯಗಳ ಕೊರತೆ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿ ಶೀಘ್ರ ಲೋಕಾರ್ಪಣೆಗೆ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಉದ್ಘಾಟನೆಯಾಗದ ಅರ್ಜುನ ಆನೆಯ ಸ್ಮಾರಕ; ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಪುತ್ಥಳಿ
ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಅರ್ಜುನನ ಪುತ್ಥಳಿ
ಮಂಜುನಾಥ ಕೆಬಿ
| Updated By: ಭಾವನಾ ಹೆಗಡೆ|

Updated on: Dec 02, 2025 | 8:49 AM

Share

ಹಾಸನ, ಡಿಸೆಂಬರ್ 02:  2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ  ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ (Captain Arjun) ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ ಅನುಮೋದನೆ ನೀಡಿತ್ತು. ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆಯ ಅರಣ್ಯದಲ್ಲಿ ಹುತಾತ್ಮ ಕಾಡಾನೆ ಅರ್ಜುನನ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದ್ದು, ಈಗ ಉದ್ಘಾಟನೆಗಾಗಿ ಸ್ಥಳೀಯರು ಸರ್ಕಾರಕ್ಕೆ  ಒತ್ತಾಯಿಸಿದ್ದಾರೆ.

ಅರ್ಜುನನ ಸ್ಮಾರಕದಲ್ಲಿ ಮೂಲ ಸೌಕರ್ಯಗಳ ಕೊರತೆ

ಸ್ಥಳೀಯರು 5 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದ್ದರು. ಸರ್ಕಾರ ಮೊದಲ ಹಂತದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಶುರುಮಾಡಿತ್ತು. ಇದೀಗ ಮೂಲ ಸೌಲಭ್ಯಗಳ ಕೊರತೆ ಇದ್ದರೂ ಸ್ಮಾರಕ ಉದ್ಘಾಟನೆಗೆ ಸಿದ್ದವಾಗಿದೆ. ಡಿಸೆಂಬರ್ 6 ರಂದು ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಮಾರಕ ಲೋಕಾರ್ಪಣೆ ಮಾಡಬೇಕೆಂಬ ಆಗ್ರಹ ಹೊರಹೊಮ್ಮಿದೆ. ಅರ್ಜುನ ಹುತಾತ್ಮನಾಗಿ ಎರಡು ವರ್ಷ ಪೂರ್ತಿಯಾಗುತ್ತಿರುವುದರಿಂದ ಪುತ್ಥಳಿಯ ಉದ್ಘಾಟನೆ ವಿಳಂಬವಾಗಬಾರದೆಂದು ಸ್ಥಳೀಯರು ಹೇಳುತ್ತಿದ್ದಾರೆ.

10 ತಿಂಗಳ ಹಿಂದೆಯೇ ತಯಾರಾಗಿರುವ ಪುತ್ಥಳಿ

ದಕ್ಷಿಣ ಕನ್ನಡ ಮೂಲದ ಶಿಲ್ಪಿ ಧನಂಜಯ್ ಪಡು ಅವರ ತಂಡ 10 ತಿಂಗಳ ಹಿಂದೆಯೇ 9.8 ಅಡಿ ಎತ್ತರ, 12.4 ಅಡಿ ಉದ್ದದ ಅರ್ಜುನನ ಪುತ್ಥಳಿ ನಿರ್ಮಾಣ ಪೂರ್ಣಗೊಳಿಸಿದೆ. ಅರ್ಜುನನ ಸಮಾದಿ ಮೇಲೆಯೇ ಮೂರ್ತಿಯನ್ನು ನಿಲ್ಲಿಸಲಾಗಿದೆ. ಸರ್ಕಾರ ಇದುವರೆಗೆ 50 ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕದ ಪ್ರಮುಖ ಭಾಗಗಳನ್ನು ನಿರ್ಮಿಸಿದ್ದು, ಇನ್ನೂ ಶೌಚಾಲಯ, ವಿಶ್ರಾಂತಿ ಗೃಹ, ಭದ್ರತಾ ಸಿಬ್ಬಂದಿ ಕೊಠಡಿ ಸೇರಿದಂತೆ ಹಲವಾರು ಮೂಲ ಸೌಲಭ್ಯಗಳು ಬಾಕಿ ಇವೆ ಎಂದು ತಿಳಿದು ಬಂದಿದೆ. ಈ ಕುರಿತು ಮಾತನಾಡಿರುವ ಶಾಸಕ ಸಿಮೆಂಟ್ ಮಂಜು, ಅರ್ಜುನ ಈ ದೇಶದ ಆಸ್ತಿ. ಅದಕ್ಕೆ ಗೌರವ ಇದ್ದರೆ ಸರ್ಕಾರ ಶೀಘ್ರ ಸ್ಮಾರಕ ಉದ್ಘಾಟನೆ ಮಾಡಬೇಕು. ಕಂಚಿನ ಪ್ರತಿಮೆ ಬೇಡಿಕೆ ಇದ್ದರೂ ಫೈಬರ್ ಮೂರ್ತಿ ನಿರ್ಮಾಣವಾಗಿದೆ. ಈ ವಿಷಯವನ್ನು ಅರಣ್ಯ ಸಚಿವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ ಹಾಸನ: ಕಾಡಾನೆ ಮತ್ತಿನಲ್ಲಿ ಇದ್ದರೂ ಕಾಳಗಕ್ಕಿಳಿದಿದ್ದ ಅರ್ಜುನ; ದಸರಾ ಆನೆ ಸಾವಿನ ಬಗ್ಗೆ ಡಿಎಫ್​ಓ ನೀಡಿದ ವಿವರ ಇಲ್ಲಿದೆ

ಮೈಸೂರಿನ ವಿಶ್ವವಿಖ್ಯಾತ ದಸರಾದಲ್ಲಿ 8 ಬಾರಿ ಚಾಮುಂಡೇಶ್ವರಿಯನ್ನು ಹೊತ್ತು ಅಂಬಾರಿ ಮೆರಗಿಸಿದ ಅರ್ಜುನ, ಕಾಡಾನೆ ಸೆರೆ ಕಾರ್ಯಾಚರಣೆಗಳಲ್ಲಿ ತನ್ನ ಶೌರ್ಯ ಪ್ರದರ್ಶಿಸಿದ್ದ. ತನ್ನ ಕೊನೆಯ ಕಾರ್ಯಾಚರಣೆಯಲ್ಲಿಯೇ ಕಾಡಾನೆ ವಿರುದ್ಧ ಹೋರಾಡಿ ಮಡಿದಿದ್ದರೂ ಹತ್ತಾರು ಜನರ ಜೀವ ಉಳಿಸಿದ್ದ. ಇದರಿಂದ ಅರ್ಜುನ ಕರ್ನಾಟಕದ ಕೋಟ್ಯಾಂತರ ಜನರ ಅಭಿಮಾನವನ್ನು ಗಳಿಸಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ