AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ತಿಂಗಳಲ್ಲಿ ಭಾರತ – ಬಾಂಗ್ಲಾ ನೀರಿನ ಸಮಸ್ಯೆ ಬಗೆಹರಿಸಿದ್ದೆ ಆದರೆ; ಕಾವೇರಿ ವಿವಾದದ ಬಗ್ಗೆ ದೇವೇಗೌಡರು ಹೇಳಿದ್ದೇನು?

HD Deve Gowda Statement on Cauvery Dispute: ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮನ ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಪರೋಕ್ಷವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹತ್ತೇ ತಿಂಗಳಲ್ಲಿ ಭಾರತ - ಬಾಂಗ್ಲಾ ನೀರಿನ ಸಮಸ್ಯೆ ಬಗೆಹರಿಸಿದ್ದೆ ಆದರೆ; ಕಾವೇರಿ ವಿವಾದದ ಬಗ್ಗೆ ದೇವೇಗೌಡರು ಹೇಳಿದ್ದೇನು?
ಹೆಚ್​ಡಿ ದೇವೇಗೌಡ
ಮಂಜುನಾಥ ಕೆಬಿ
| Edited By: |

Updated on: Sep 26, 2023 | 3:50 PM

Share

ಹಾಸನ, ಸೆಪ್ಟೆಂಬರ್ 26: ಕೆಆರ್​​ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುಗಡೆ ಮಾಡುತ್ತಿರುವ ವಿಚಾರವಾಗಿ ಸೃಷ್ಟಿಯಾಗಿರುವ ವಿವಾದದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ಪ್ರತಿಕ್ರಿಯಿಸಿ ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ ಮತ್ತು ಈಗಿನ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಲಗಂಗಾಧರನಾಥಶ್ರೀ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ-ಬಾಂಗ್ಲಾ ನಡುವಿನ 30 ವರ್ಷದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನನಗೆ ಅಧಿಕಾರ ಸಿಕ್ಕಿದ್ದು ಹತ್ತೇ ಹತ್ತು ತಿಂಗಳು ಎಂದರು.

ಹಿಂದಿನ ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ 10 ವರ್ಷ ಆಡಳಿತ ನಡೆಸಿತ್ತು. ಈಗಿನ ಎನ್​ಡಿಎ ನೇತೃತ್ವದ ಸರ್ಕಾರ 2ನೇ ಬಾರಿ ಆಡಳಿತ ನಡೆಸುತ್ತಿದೆ. 10 ತಿಂಗಳಲ್ಲಿ ನಾನು 2 ದೇಶಗಳ 30 ವರ್ಷಗಳ ಇತಿಹಾಸವಿದ್ದ ಜಲ ವಿವಾದ ಬಗೆಹರಿಸಿದ್ದೆ ಎಂದು ಅವರು ಹೇಳಿದರು. ಈ ಮೂಲಕ ಪರೋಕ್ಷವಾಗಿ, ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮನ ಮಾಡಬೇಕು ಎಂದು ಅವರು ಕೇಂದ್ರದ ಮಧ್ಯಪ್ರವೇಶದ ಬಗ್ಗೆ ಸೂಚ್ಯವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಲಗಂಗಾಧರನಾಥ ಶ್ರೀಗಳನ್ನು ನೆನೆದು ಹೆಚ್​ಡಿಡಿ ಭಾವುಕರಾಗಿದ್ದು ಕಂಡುಬಂತು.

ಪ್ರಧಾನಿ ಮೋದಿ ಬಗ್ಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ತಮಿಳುನಾಡಿಗೆ ಮತ್ತೆ 18 ದಿನ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿರುವ ಬಗ್ಗೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ನದಿ ನೀರು ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

ಪ್ರಧಾನಮಂತ್ರಿ ಭೇಟಿಗೆ ರಾಜ್ಯ ಬಿಜೆಪಿ ನಾಯಕರು ಅವಕಾಶ ಕೇಳಲಿ. ಇವರೇನು ಮಾಡ್ತಿದ್ದಾರೆ, ಮೋದಿ ಬಳಿ ಹೋಗಿ ಮಾತಾಡಬಹುದಿತ್ತಲ್ವಾ? ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಸಭೆ ನಡೆಸಿ ಪ್ರಧಾನಮಂತ್ರಿ ಭೇಟಿಗೆ ಅಪಾಯಿಂಟ್​ಮೆಂಟ್ ಕೇಳಿದ್ದೇವೆ. ಆದರೆ ಬಿಜೆಪಿ ನಾಯಕರು ಅಸಹಾಯಕತೆ ವ್ಯಕ್ತಪಡಿಸಿದರು ಎಂದು ಖರ್ಗೆ ಆರೋಪಿಸಿದರು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!