AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ತಿಂಗಳಲ್ಲಿ ಭಾರತ – ಬಾಂಗ್ಲಾ ನೀರಿನ ಸಮಸ್ಯೆ ಬಗೆಹರಿಸಿದ್ದೆ ಆದರೆ; ಕಾವೇರಿ ವಿವಾದದ ಬಗ್ಗೆ ದೇವೇಗೌಡರು ಹೇಳಿದ್ದೇನು?

HD Deve Gowda Statement on Cauvery Dispute: ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮನ ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಪರೋಕ್ಷವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹತ್ತೇ ತಿಂಗಳಲ್ಲಿ ಭಾರತ - ಬಾಂಗ್ಲಾ ನೀರಿನ ಸಮಸ್ಯೆ ಬಗೆಹರಿಸಿದ್ದೆ ಆದರೆ; ಕಾವೇರಿ ವಿವಾದದ ಬಗ್ಗೆ ದೇವೇಗೌಡರು ಹೇಳಿದ್ದೇನು?
ಹೆಚ್​ಡಿ ದೇವೇಗೌಡ
ಮಂಜುನಾಥ ಕೆಬಿ
| Edited By: |

Updated on: Sep 26, 2023 | 3:50 PM

Share

ಹಾಸನ, ಸೆಪ್ಟೆಂಬರ್ 26: ಕೆಆರ್​​ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುಗಡೆ ಮಾಡುತ್ತಿರುವ ವಿಚಾರವಾಗಿ ಸೃಷ್ಟಿಯಾಗಿರುವ ವಿವಾದದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ಪ್ರತಿಕ್ರಿಯಿಸಿ ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ ಮತ್ತು ಈಗಿನ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಲಗಂಗಾಧರನಾಥಶ್ರೀ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ-ಬಾಂಗ್ಲಾ ನಡುವಿನ 30 ವರ್ಷದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನನಗೆ ಅಧಿಕಾರ ಸಿಕ್ಕಿದ್ದು ಹತ್ತೇ ಹತ್ತು ತಿಂಗಳು ಎಂದರು.

ಹಿಂದಿನ ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ 10 ವರ್ಷ ಆಡಳಿತ ನಡೆಸಿತ್ತು. ಈಗಿನ ಎನ್​ಡಿಎ ನೇತೃತ್ವದ ಸರ್ಕಾರ 2ನೇ ಬಾರಿ ಆಡಳಿತ ನಡೆಸುತ್ತಿದೆ. 10 ತಿಂಗಳಲ್ಲಿ ನಾನು 2 ದೇಶಗಳ 30 ವರ್ಷಗಳ ಇತಿಹಾಸವಿದ್ದ ಜಲ ವಿವಾದ ಬಗೆಹರಿಸಿದ್ದೆ ಎಂದು ಅವರು ಹೇಳಿದರು. ಈ ಮೂಲಕ ಪರೋಕ್ಷವಾಗಿ, ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮನ ಮಾಡಬೇಕು ಎಂದು ಅವರು ಕೇಂದ್ರದ ಮಧ್ಯಪ್ರವೇಶದ ಬಗ್ಗೆ ಸೂಚ್ಯವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಲಗಂಗಾಧರನಾಥ ಶ್ರೀಗಳನ್ನು ನೆನೆದು ಹೆಚ್​ಡಿಡಿ ಭಾವುಕರಾಗಿದ್ದು ಕಂಡುಬಂತು.

ಪ್ರಧಾನಿ ಮೋದಿ ಬಗ್ಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ತಮಿಳುನಾಡಿಗೆ ಮತ್ತೆ 18 ದಿನ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿರುವ ಬಗ್ಗೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ನದಿ ನೀರು ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

ಪ್ರಧಾನಮಂತ್ರಿ ಭೇಟಿಗೆ ರಾಜ್ಯ ಬಿಜೆಪಿ ನಾಯಕರು ಅವಕಾಶ ಕೇಳಲಿ. ಇವರೇನು ಮಾಡ್ತಿದ್ದಾರೆ, ಮೋದಿ ಬಳಿ ಹೋಗಿ ಮಾತಾಡಬಹುದಿತ್ತಲ್ವಾ? ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಸಭೆ ನಡೆಸಿ ಪ್ರಧಾನಮಂತ್ರಿ ಭೇಟಿಗೆ ಅಪಾಯಿಂಟ್​ಮೆಂಟ್ ಕೇಳಿದ್ದೇವೆ. ಆದರೆ ಬಿಜೆಪಿ ನಾಯಕರು ಅಸಹಾಯಕತೆ ವ್ಯಕ್ತಪಡಿಸಿದರು ಎಂದು ಖರ್ಗೆ ಆರೋಪಿಸಿದರು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ