AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರದೋ ತಪ್ಪಿನಿಂದಾಗಿ ಪ್ರೀತಂ ಗೌಡ ಗೆದ್ದಿದ್ದಾರೆ; ಬಂದಷ್ಟೇ ವೇಗದಲ್ಲಿ ಹೋಗುತ್ತಾರೆ ಬಿಡಿ- ಹೆಚ್‌ಡಿ ಕುಮಾರಸ್ವಾಮಿ ಹೇಳಿಕೆ

ಹಾಸನ: ಯಾರದೋ ತಪ್ಪಿನಿಂದಾಗಿ ಪ್ರೀತಂ ಗೌಡ ಗೆದ್ದಿದ್ದಾರೆ. ಶಾಸಕ ಪ್ರೀತಂಗೌಡ ಬಂದಷ್ಟೇ ವೇಗದಲ್ಲಿ ಹೋಗುತ್ತಾರೆ. ಅವರ ಬಗ್ಗೆ ನಾವು ಪ್ರಾಮುಖ್ಯತೆ ಕೊಡುವುದು ಬೇಡ ಎಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ. ಪ್ರೀತಂ ಗೌಡ ಬಗ್ಗೆ ಮತ್ತೆ ಮಾತಾಡುತ್ತೇನೆ ಎಂದ ಕುಮಾರಸ್ವಾಮಿ ನಾವು ವಿಶ್ವಾಸಕ್ಕೆ ದ್ರೋಹ ಮಾಡೋರು ಅನ್ನೋದಾದರೆ ಪದೇ ಪದೆ ನಮ್ಮ ಮನೆ ಬಾಗಿಲಿಗೆ ಏಕೆ ಬರ್ತಾರೆ? ಎಂದು ಶಾಸಕ ಪ್ರೀತಂಗೌಡ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು. […]

ಯಾರದೋ ತಪ್ಪಿನಿಂದಾಗಿ ಪ್ರೀತಂ ಗೌಡ ಗೆದ್ದಿದ್ದಾರೆ; ಬಂದಷ್ಟೇ ವೇಗದಲ್ಲಿ ಹೋಗುತ್ತಾರೆ ಬಿಡಿ- ಹೆಚ್‌ಡಿ ಕುಮಾರಸ್ವಾಮಿ ಹೇಳಿಕೆ
ಶಾಸಕ ಪ್ರೀತಂ ಗೌಡ, ಹೆಚ್‌ಡಿ ಕುಮಾರಸ್ವಾಮಿ
TV9 Web
| Edited By: |

Updated on:Oct 09, 2021 | 1:38 PM

Share

ಹಾಸನ: ಯಾರದೋ ತಪ್ಪಿನಿಂದಾಗಿ ಪ್ರೀತಂ ಗೌಡ ಗೆದ್ದಿದ್ದಾರೆ. ಶಾಸಕ ಪ್ರೀತಂಗೌಡ ಬಂದಷ್ಟೇ ವೇಗದಲ್ಲಿ ಹೋಗುತ್ತಾರೆ. ಅವರ ಬಗ್ಗೆ ನಾವು ಪ್ರಾಮುಖ್ಯತೆ ಕೊಡುವುದು ಬೇಡ ಎಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.

ಪ್ರೀತಂ ಗೌಡ ಬಗ್ಗೆ ಮತ್ತೆ ಮಾತಾಡುತ್ತೇನೆ ಎಂದ ಕುಮಾರಸ್ವಾಮಿ ನಾವು ವಿಶ್ವಾಸಕ್ಕೆ ದ್ರೋಹ ಮಾಡೋರು ಅನ್ನೋದಾದರೆ ಪದೇ ಪದೆ ನಮ್ಮ ಮನೆ ಬಾಗಿಲಿಗೆ ಏಕೆ ಬರ್ತಾರೆ? ಎಂದು ಶಾಸಕ ಪ್ರೀತಂಗೌಡ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು. ಇವರು ಯಾರೋ, ಯಾವುದೋ ತಪ್ಪಿನಿಂದ ಗೆದ್ದಿದ್ದಾರೆ. ಅವರು ಬಂದಷ್ಟೇ ವೇಗವಾಗಿ ಹೋಗ್ತಾರೆ. ಅವರ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಡಿ. ಆಕಸ್ಮಿಕವಾಗಿ ಏನೋ ಬಂದಿದಾರೆ ಅವರು, ಮುಂದೆ ಹೋಗ್ತಾರೆ ಬಿಡಿ ಎಂದು ಶಾಸಕ ಪ್ರೀತಂ ಗೌಡ ಹೇಳಿಕೆ ಬಗ್ಗೆ ಅವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಜನರು ಕುತ್ತಿಗೆ ಪಟ್ಟಿಗೆ ಕೈಹಾಕುತ್ತಾರೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಎಚ್ಚರಿಕೆ ಸುಳ್ಳು ಹೇಳಿಕೊಂಡು ಬಹಳ ದಿನ ನಡೆಯೋಕಾಗಲ್ಲ. ಮುಂದಿನ ದಿನಗಳಲ್ಲಿ ಜನರು ಕುತ್ತಿಗೆ ಪಟ್ಟಿಗೆ ಕೈಹಾಕುತ್ತಾರೆ. ಸಿದ್ದರಾಮಯ್ಯನವರೇ ನೀವೀಗ ವಿಪಕ್ಷ ನಾಯಕರಿದ್ದೀರಿ ಎಂದು ಮಾಜಿ ಸಿ ಎಂ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಇದೇ ವೇಳೆ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಜೊತೆಗಿನ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ 14 ತಿಂಗಳು ನಾನು ಕೆಲಸ ಮಾಡುವಾಗ ಸಿಎಂ ಆಗಿ ಕೆಲಸ ಮಾಡಲು ಅಧಿಕಾರವೇ ಇರಲಿಲ್ಲ. ಕೇವಲ ರೈತರ ಸಾಲಾ ಮನ್ನಾ ಮಾಡಲು ಮಾತ್ರ ಹೇಗೊ ಮಾಡಿ ಮುಗಿಸಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಎಸ್‌ವೈ ಅಧಿಕಾರ ಕಳೆದುಕೊಳ್ಳಲು ಆರ್​ಎಸ್​ಎಸ್​​ ಕಾರಣ; ಆರ್​ಎಸ್​ಎಸ್ ಬಗ್ಗೆ ನಿಜ ಏನೆಂದು ಜನರೇ ಚರ್ಚೆ ಮಾಡಲಿ: ಹೆಚ್‌ಡಿಕೆ ಆರ್​ಎಸ್​ಎಸ್ ಕುರಿತಾದ ತಮ್ಮ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಇಂದು ಮತ್ತೊಂದು ರಾಜಕೀಯ ಬಾಂಬ್​ ಸ್ಫೋಟಿಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಲು RSS ಕಾರಣ. RSS ಬಗ್ಗೆ ನನ್ನ ಹೇಳಿಕೆ ಹಿಟ್ ಆ್ಯಂಡ್ ರನ್ ಅಲ್ಲ. ನಾನು ಸೂಕ್ತ ಮಾಹಿತಿ ಇಟ್ಟುಕೊಂಡೇ ಮಾತನಾಡಿದ್ದೇನೆ. ನಿಜ ಏನೆಂದು ರಾಜ್ಯದ ಜನರೇ ಚರ್ಚೆ ಮಾಡಲಿ ಎಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. RSS ಹೇಳಿಕೆ ಬಗ್ಗೆ ಹೆಚ್‌ಡಿಕೆ ಜೊತೆ ಮಾತನಾಡುತ್ತೇನೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಿಎಸ್‌ವೈ ಅವರ ಅಧಿಕಾರ ಹೋಗಲು RSS ನವರೇ ಕಾರಣ ಅಲ್ಲವೇ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆ ವಿಚಾರದ ಬಗ್ಗೆ ಪಾಪ ಅವರು ಮಾತನಾಡ್ತರಂತಾ. RSS ಬಗ್ಗೆ ನಾನೇನು ಪ್ರಾರಂಭ ಮಾಡಿದ್ದೀನಿ ಅದು ಹಿಟ್ ಅಂಡ್ ರನ್ ಅಲ್ಲಾ. ಈ ಬಗ್ಗೆ ಸೂಕ್ತ ಮಾಹಿತಿ ಜೊತೆಗೆ ಮಾತಾಡಿದ್ದೀನಿ ಎಂದು ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ HDK ಪ್ರತಿಕ್ರಿಯೆ ನೀಡಿದರು.

ಮಿನಿಮಮ್ ಬಜೆಟ್​ನಲ್ಲಿ 48 ಮೆಗಾಪಿಕ್ಸಲ್ ಕ್ಯಾಮರಾ ಇರುವ ಫೋನ್ |48 MP Smartphones|TV9 GADGETS WORLD

Published On - 1:30 pm, Sat, 9 October 21

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು