AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna: ದೇವಾಲಯ ಉದ್ಘಾಟನೆ ವೇಳೆ ಬೆಂಬಲಿಗರಿಗೆ ನಿಂಬೆಹಣ್ಣು ಹಂಚಿದ ಹೆಚ್ಡಿ ರೇವಣ್ಣ

ಶಿವಲಿಂಗೇಗೌಡ ವೇದಿಕೆ ಮೇಲಿದ್ದ ನಿಂಬೆಹಣ್ಣು ನೋಡುತ್ತಲೆ ಕೈಗೆತ್ತಿಕೊಂಡು ಎಲ್ಲರಿಗೂ ಕೊಡುವಂತೆ ತಮಾಷೆ ಮಾಡಿದ್ರು. ಆಗ ರೇವಣ್ಣ ತಾವೇ ನಿಂಬೆಹಣ್ಣು ಎತ್ತಿಕೊಂಡು ತಮ್ಮ ಕಾರ್ಯಕರ್ತರ ಕಡೆಗೆ ಉರುಳಿಸಿದ್ರು.

HD Revanna: ದೇವಾಲಯ ಉದ್ಘಾಟನೆ ವೇಳೆ ಬೆಂಬಲಿಗರಿಗೆ ನಿಂಬೆಹಣ್ಣು ಹಂಚಿದ ಹೆಚ್ಡಿ ರೇವಣ್ಣ
ಶಾಸಕ ಶಿವಲಿಂಗೇಗೌಡ, ಹೆಚ್ಡಿ ರೇವಣ್ಣ
TV9 Web
| Updated By: ಆಯೇಷಾ ಬಾನು|

Updated on: Feb 11, 2022 | 7:38 AM

Share

ಹಾಸನ: ಹೆಚ್ಡಿ ರೇವಣ್ಣ(HD Revanna) ಮತ್ತು ನಿಂಬೆ ಹಣ್ಣು(lemon) ಜೋಡಿ ನಿಮಗೆಲ್ಲಾ ಗೊತ್ತೇ ಇದೆ. ಹೆಚ್ಡಿ ರೇವಣ್ಣ ತಮ್ಮ ಜೀವನದಲ್ಲಿ ನಿಂಬೆಹಣ್ಣಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದಾರೆ. ಶುಭ ಸಂಭ್ರಮದ ಸಮಯ ಅಂತಲ್ಲ, ಕಷ್ಟದ ಸಮಯ ಅಂತಲ್ಲ – ಎಲ್ಲಾ ಸಮಯದಲ್ಲೂ ಅವರು ನಿಂಬೆ ಹಣ್ಣಿನ ಮೊರೆ ಹೋಗ್ತಾರೆ. ಸದ್ಯ ಈಗ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರೇವಣ್ಣ ನಿಂಬೆಹಣ್ಣು ವಿತರಿಸಿದ್ದಾರೆ. ವೇದಿಕೆ ಮೇಲೆ ಬುಟ್ಟಿಯಲ್ಲಿದ್ದ ನಿಂಬೆಹಣ್ಣುಗಳನ್ನ ಅಭಿಮಾನಿಗಳಿಗೆ ನೀಡಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ತಿರುಮಲ ದೇವಾಲಯದ ಉದ್ಘಾಟನಾ ಕಾರ್ಯಕ್ರಮ ನಡೀತು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹಾಗೂ ಶಿವಲಿಂಗೇಗೌಡ ಭಾಗಿಯಾಗಿದ್ದರು. ಜೊತೆಗೆ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಶಾಸಕ ಶಿವಲಿಂಗೇಗೌಡ ವೇದಿಕೆ ಮೇಲಿದ್ದ ನಿಂಬೆಹಣ್ಣು ನೋಡುತ್ತಲೆ ಕೈಗೆತ್ತಿಕೊಂಡು ಎಲ್ಲರಿಗೂ ಕೊಡುವಂತೆ ತಮಾಷೆ ಮಾಡಿದ್ರು. ಆಗ ರೇವಣ್ಣ ತಾವೇ ನಿಂಬೆಹಣ್ಣು ಎತ್ತಿಕೊಂಡು ತಮ್ಮ ಕಾರ್ಯಕರ್ತರ ಕಡೆಗೆ ಉರುಳಿಸಿದ್ರು. ಇದನ್ನು ನೋಡಿ ನಿಂಬೆಹಣ್ಣುಗಳನ್ನು ಜನರಿಗೆ ಕೊಡುವಂತೆ ಶಾಸಕ ಶಿವಲಿಂಗೇಗೌಡ ಮನವಿ ಮಾಡಿದ್ರು. ಬಳಿಕ ಶಾಸಕರ ಮಾತಿನಂತೆ ರೇವಣ್ಣ ಒಂದೊಂದೇ ನಿಂಬೆಹಣ್ಣನ್ನು ತಮ್ಮ ಬೆಂಬಲಿಗರಿಗೆ ನೀಡಿದ್ರು. ರೇವಣ್ಣ ನಿಂಬೆಹಣ್ಣು ನೀಡುತ್ತಿರುವುದನ್ನು ನೋಡಿ ಶಾಸಕ ಶಿವಲಿಂಗೇಗೌಡ ನಗೆಬೀರಿದ್ರು.

HD Kumaraswamy

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶಿವಲಿಂಗೇಗೌಡ

HD Revanna

ಶಾಸಕ ಶಿವಲಿಂಗೇಗೌಡ, ಹೆಚ್ಡಿ ರೇವಣ್ಣ

ಇದನ್ನೂ ಓದಿ:  ಬರಿಗಾಲಿನಲ್ಲಿ ವಾಕ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ; ಇದರಿಂದಾಗುವ ಆರೋಗ್ಯಯುತ ಬದಲಾವಣೆ ಇಲ್ಲಿದೆ ನೋಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ