AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಹೆಚ್​ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌; ಎರಡು ರಾಷ್ಟ್ರೀಯ ‌ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು ವಾಗ್ದಾಳಿ

ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಈ ಸಂಬಂಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿರೋದು. ಎರಡು ರಾಷ್ಟ್ರೀಯ ‌ಪಕ್ಷಗಳು ಸೇರಿ ಈ ಪಕ್ಷ ಮುಗಿಸೋದಕ್ಕೆ ಹೊರಟಿದ್ರೆ ಏನ್‌ ಮಾಡೋಕಾಗುತ್ತೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಹೆಚ್​ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌; ಎರಡು ರಾಷ್ಟ್ರೀಯ ‌ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು ವಾಗ್ದಾಳಿ
ಮಾಜಿ ಸಚಿವ ಹೆಚ್​ ಡಿ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: Sep 04, 2023 | 3:57 PM

Share

ಹಾಸನ, ಸೆ.04: ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಅನರ್ಹಗೊಂಡ ಬೆನ್ನಲ್ಲೇ ಶಾಸಕ ಹೆಚ್​ಡಿ ರೇವಣ್ಣ (HD Revanna) ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಚುನಾವಣಾ ಅಕ್ರಮಕ್ಕೆ (Election malpractices) ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ (High Court summons) ಜಾರಿ ಮಾಡಿದೆ. ಈ ಸಂಬಂಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿರೋದು. ಎರಡು ರಾಷ್ಟ್ರೀಯ ‌ಪಕ್ಷಗಳು ಸೇರಿ ಈ ಪಕ್ಷ ಮುಗಿಸೋದಕ್ಕೆ ಹೊರಟಿದ್ರೆ ಏನ್‌ ಮಾಡೋಕಾಗುತ್ತೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಚ್​ಡಿ ದೇವೇಗೌಡರು ಮುಖ್ಯಮಂತ್ರಿ, ‌ಪ್ರಧಾನ ಮಂತ್ರಿ ಎಲ್ಲವೂ ಆದ್ರಪ್ಪ. ನನಗೆ ಕೋರ್ಟ್ ನೋಟಿಸ್ ಕೊಟ್ಟರೆ ನಮ್ಮ ವಕೀಲರ ಮೂಲಕ ಉತ್ತರ ಕೊಡುತ್ತೇನೆ ಎಂದರು. ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸುಪ್ರೀಂಕೋರ್ಟ್​ನಲ್ಲಿ ತಡೆ ಸಿಗುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹೆಚ್​ಡಿ ರೇವಣ್ಣ, ಮುಂಚಿತವಾಗಿ ನಾನ್ಯಾಕೆ ಅದರ ಬಗ್ಗೆ ಹೇಳಲಿ. ಪ್ರಜ್ವಲ್ ಸುಪ್ರೀಂಕೋರ್ಟ್​ಗೆ ಹಾಕ್ತಾರೋ ಏನ್‌ ಮಾಡ್ತಾರೋ. ಅದು ಅವರಿಗೆ ಬಿಟ್ಟಿದ್ದು, ಅವರ ಕೇಸ್ ಅದು. ಅವರ ಕೇಸ್‌ನಲ್ಲಿ ಏನಾಗುತ್ತೋ ನಾನು ಏನ್ ಹೇಳಲಿ. ಕೆಲವರು ಭವಿಷ್ಯ ನುಡಿಯೋರು ಇದ್ದಾರೆ, ಅದನ್ನ ನಾನ್ಯಾಕೆ ಹೇಳಲಿ. ಕಾನೂನು ಏನಿದೆ ಅದನ್ನ ಪ್ರಜ್ವಲ್‌ರವರು ಮಾಡಿಕೊಳ್ತಾರೆ. ಪ್ರಜ್ವಲ್‌ರವರಿಗೇನು ಏಜ್ ಇಲ್ವಾ? ಅವರು ಏನ್ ಮಾಡಿದ್ದಾರೆ? ಎಂತು ಮಾಡಿದ್ದಾರೆ ಗೊತ್ತಿಲ್ಲ ನನಗೆ. ಅದನ್ನೆಲ್ಲಾ ತಿಳ್ಕೊಂಡು ಎಲ್ಲಾ ಆದ ಮೇಲೆ ಸವಿಸ್ತಾರವಾಗಿ ಹೇಳುತ್ತೇನೆ. ನಮ್ಮ ಜೀವನದಲ್ಲಿ ನಾವು ಯಾವ ಆಸ್ತಿಯನ್ನು ಮುಚ್ಚಿಟ್ಟಿಲ್ಲ. ಐಟಿ ರಿಪೋರ್ಟ್ ಅನ್ನು ನಾನು ಕೊಡ್ತೀನಿ ನನ್ನ ಹೆಂಡತಿನೂ ಕೊಡ್ತಾರೆ. ಪಡುವಲ ಹಿಪ್ಪೆ ಬಳಿ ತೆಂಗು, ಅಡಿಕೆ, ಸಪೋಟ, ಮಾವಿನ ತೋಟವು ಇದೆ. ಎಲ್ಲವನ್ನು ಚೆಕ್ ಮೇಲೆ ತೆಗೆದುಕೊಂಡಿರೋದು. ನನ್ನದೆಲ್ಲ ಚೆಕ್ ವ್ಯವಹಾರನೆ. ಪ್ರತಿ ಹಂತ ಹಂತದಲ್ಲೂ ಇನ್ಕಮ್ ಟ್ಯಾಕ್ಸ್​ಗೆ ಮಾಹಿತಿ ಕೊಡುತ್ತಿದ್ದೇನೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದರು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ರಾಜ್ಯದ ಏಕೈಕ ಸಂಸತ್ ಸ್ಥಾನ ಹೊಂದಿದ್ದ ಜೆಡಿಎಸ್​ಗೆ ಹೈಕೋರ್ಟ್ ತೀರ್ಪು ಬಿಗ್ ಶಾಕ್ ನೀಡಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಮಾಣ ಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟಿದ್ದಾರೆಂಬ ಆರೋಪದದಲ್ಲಿ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸದಸ್ಯತ್ವವನ್ನೇ ಅಸಿಂಧುಗೊಳಿಸಿ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ತಮ್ಮ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದಾರೆ. ಇದರ ನಡುವೆ ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!