ನನಗೆ ದೇವರ ಆಶೀರ್ವಾದ ಇದೆ, ಜಿಲ್ಲೆಯ ಜನರು ಆತಂಕಪಡುವ ಅವಶ್ಯಕತೆ ಇಲ್ಲ; ಹೆಚ್​ಡಿ ರೇವಣ್ಣ

ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಡೆ ಬಂದಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಮೊದಲ ಬಾರಿಗೆ ಸ್ವ ಕ್ಷೇತ್ರ ಹಾಸನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಹೌದು, ‘ನಾನು ಹಾಸನ ಜಿಲ್ಲೆಯ ಜನತೆಗೆ ಋಣಿಯಾಗಿ ಇದ್ದೇನೆ. ಅಧಿಕಾರ ಇರಲಿ‌, ಇಲ್ಲದಿರಲಿ. ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ನನಗೆ ದೇವರ ಆಶೀರ್ವಾದ ಇದೆ. ಜಿಲ್ಲೆಯ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ನನಗೆ ದೇವರ ಆಶೀರ್ವಾದ ಇದೆ, ಜಿಲ್ಲೆಯ ಜನರು ಆತಂಕಪಡುವ ಅವಶ್ಯಕತೆ ಇಲ್ಲ; ಹೆಚ್​ಡಿ ರೇವಣ್ಣ
ಹೆಚ್​ಡಿ ರೇವಣ್ಣ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 22, 2024 | 3:52 PM

ಹಾಸನ, ಮೇ.22: ‘ನನಗೆ ದೇವರ ಆಶೀರ್ವಾದ ಇದೆ. ಹಾಸನ(Hassan) ಜಿಲ್ಲೆಯ ಜನರು ಯಾರೂ ಕೂಡ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ(HD Revanna) ಹೇಳಿದರು. ‘ನಾನು ಜಿಲ್ಲೆಯ ಜನತೆಗೆ ಋಣಿಯಾಗಿ ಇದ್ದೇನೆ. ಅಧಿಕಾರ ಇರಲಿ‌, ಇಲ್ಲದಿರಲಿ, ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲುವು-ಸೋಲು ಸಹಜ. ನಮ್ಮ ತಂದೆ  ದೇವೇಗೌಡರು ರಾಜಕೀಯವಾಗಿ ನೆಲೆ‌ ಊರಲು ಈ ಜಿಲ್ಲೆಯೇ ಕಾರಣ ಎಂದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಹಾಸನದಲ್ಲಿ ಶಾಸಕರಾದ ಎ ಮಂಜು, ಸ್ವರೂಪ್ ಪ್ರಕಾಶ್ ಹಾಗೂ ಅಭ್ಯರ್ಥಿ ವಿವೇಕಾನಂದ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ನಿನ್ನೆ ಮೈಸೂರಿನಲ್ಲಿ ಸಭೆ ನಡೆಸಲಾಗಿದೆ. ಶಿಕ್ಷಣಕ್ಕೆ ಈ ರಾಜ್ಯದಲ್ಲಿ ಒತ್ತುಕೊಟ್ಟು ಹೊಸ ಪದವಿ , ಹೈಸ್ಕೂಲ್, ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಿದ್ದು ಮಾಜಿ ಸಿಎಂ ಕುಮಾರಸ್ವಾಮಿ. ಶಾಲಾ ಶಿಕ್ಣಕರು, ಪದವಿ ಉಪನ್ಯಾಸ ಕರ ನೇಮಕ ಮಾಡಿದ್ದೂ ಕೂಡ ಕುಮಾರಸ್ವಾಮಿ ಅವರ ಕಾಲದಲ್ಲಿ. ಜೊತೆಗೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಸೇರಿ ಶಿಕ್ಷಣಕ್ಕೆ ಕ್ರಾಂತಿಕಾರಕ ಬದಲಾವಣೆ ಮಾಡಿದ್ದರು.

ಇದನ್ನೂ ಓದಿ:ಪುತ್ರ ಪ್ರಜ್ವಲ್​​ ವಿರುದ್ಧದ ಆರೋಪದ ಕುರಿತು ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಹೇಳಿದ್ದಿಷ್ಟು

ಈ ಹಿಂದೆ ಇದ್ದವರು ಗೆಲ್ಲಿಸಿದ ಬಳಿಕ ತಿರುಗಿ ನೋಡ್ತಾ ಇರಲಿಲ್ಲ. ಈಗ ನಮ್ಮ ಅಭ್ಯರ್ಥಿ, ತಮ್ಮ ಸಂಬಳ ಸೇರಿದಂತೆ ಸಂಪೂರ್ಣ ಅನುದಾನ ಶಿಕ್ಷಕರಿಗೆ ಮೀಸಲಿಡೊದಾಗಿ ಹೇಳಿದ್ದಾರೆ. ಹೀಗೆ ಘೋಷಣೆ ಮಾಡಿದ ವ್ಯಕ್ತಿ ಹಿಂದೆ ಯಾರು ಇರಲಿಲ್ಲ ಎಂದು ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಈ ಸರ್ಕಾರ ಬಂದ ಬಳಿಕ ಶಿಕ್ಷಣ ಕ್ಷೇತ್ರ ಕುಸಿದಿದೆ

ಈಗ ಕಾಂಗ್ರೆಸ್​ನಿಂದ ನಿಂತಿರುವ ವ್ಯಕ್ತಿ ಇಲ್ಲೇ ಇದ್ದು, ಸಕಲ ಸವಲತ್ತು ಅನುಭವಿಸಿದರು. ಈ ಜಿಲ್ಲೆಗೆ ಅವರ ಕೊಡುಗೆ ಏನು? ಈ ಸರ್ಕಾರ ಬಂದ ಬಳಿಕ ಶಿಕ್ಷಣ ಕ್ಷೇತ್ರ ಕುಸಿಯುತ್ತಿದೆ. ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದಗೆ ಮತ ನೀಡಿ ಎಂದು ಮನವಿ ಮಾಡಿದರು. ಇನ್ನು ಶೀಘ್ರವಾಗಿ ಬಿಜೆಪಿ-ಜೆಡಿಎಸ್ ನಾಯಕರ ಜಂಟಿ ಸಭೆ ನಡೆಸುತ್ತೇವೆ. ನಮ್ಮ ಜಿಲ್ಲೆಗೆ ಕಾಂಗ್ರೆಸ್​ನಿಂದ ಐಐಟಿ ತಪ್ಪಿ ಹೋಗಿದೆ. ಅವರು ಅಂದು ನಮ್ಮ ಜಿಲ್ಲೆಯ ಪಟ್ಟಿ ಕಳಿಸಿದ್ರೆ ಆಗಿರೋದು. ರಾಜಕಾರಣದಲ್ಲಿ ಕೃತಜ್ಞತೆ ಇರಬೇಕು. ಓರ್ವ ಸಾಮಾನ್ಯನನ್ನ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದರು ಎಂದು ಹೆಸರು ಹೇಳದೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ವಿರುದ್ಧ ರೇವಣ್ಣ ಟೀಕೆ ಮಾಡಿದ್ದಾರೆ.

ಈ ಸರ್ಕಾರ ಬಂದು ಒಂದು ವರ್ಷ ಆಗಿದೆ. ವರ್ಷದಲ್ಲಿ ಸರ್ಕಾರದ ಕೊಡುಗೆ ಏನಿದೆ? ಶಿಕ್ಷಣ ಇಲಾಖೆಯಲ್ಲಿ ಗೊಂದಲ ಎಬ್ಬಿಸಲಾಗಿದೆ. ಸಚಿವರೇ ದಮ್ಕಿ ಹಾಕ್ತಾರೆ ಎನ್ನುವ ಮಾತಿದೆ. ಯಾರೂ ಕೂಡ ಹೆದರಬೇಕಾಗಿಲ್ಲ. ನಿನ್ನೆ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಹಾಗಾಗಿ ನಾನು ಹೇಳಿದ್ದೇನೆ. ನಾನು ಯಾವ ಸಚಿವರ ಹೆಸರನ್ನು ಹೇಳೋದಿಲ್ಲ. ನಮ್ಮಲ್ಲೆ ಇದ್ದವರು ಹೋಗಿದ್ದಾರೆ. ಅವರು ಆಡಳಿತ ಪಕ್ಷಕ್ಕೆ ಸೇರಿ ವರ್ಷ ಆಯ್ತಲ್ಲ. ಶಿಕ್ಣಣ ಕ್ಷೇತ್ರಕ್ಕೆ, ಶಿಕ್ಷಕರಿಗೆ ಕೊಡುಗೆ ಏನಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ