AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​.ಡಿ.ರೇವಣ್ಣ ಆಪ್ತನ ಹತ್ಯೆಗೆ ಯತ್ನ ಪ್ರಕರಣ: ಓರ್ವ ಇನ್ಸ್​ಪೆಕ್ಟರ್ ಸೇರಿದಂತೆ 6 ಆರೋಪಿಗಳ ಬಂಧನ

ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಆಪ್ತ ಅಶ್ವತ್ಥ್ ನಾರಾಯಣಗೌಡ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಆರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಓರ್ವ ಇನ್ಸ್​ಪೆಕ್ಟರ್​ ಸೇರಿ 6 ಆರೋಪಿಗಳನ್ನು ಬಂಧಿಸುವಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಚ್​.ಡಿ.ರೇವಣ್ಣ ಆಪ್ತನ ಹತ್ಯೆಗೆ ಯತ್ನ ಪ್ರಕರಣ: ಓರ್ವ ಇನ್ಸ್​ಪೆಕ್ಟರ್ ಸೇರಿದಂತೆ 6 ಆರೋಪಿಗಳ ಬಂಧನ
ಮಂಜುನಾಥ ಕೆಬಿ
| Edited By: |

Updated on:Oct 22, 2023 | 3:33 PM

Share

ಹಾಸನ, (ಅಕ್ಟೋಬರ್ 22): ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಆಪ್ತ ಅಶ್ವತ್ಥ್ ನಾರಾಯಣಗೌಡ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಆರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಓರ್ವ ಇನ್ಸ್​ಪೆಕ್ಟರ್​ ಸೇರಿ 6 ಆರೋಪಿಗಳನ್ನು ಬಂಧಿಸುವಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ SID ವಿಭಾಗದ ಇನ್ಸ್​​ಪೆಕ್ಟರ್​ ಅಶೋಕ್, ಸತೀಶ್, ತೇಜಸ್ವಿ, ಮುರುಗನ್, ಮಧುಸೂದನ್, ಅಶೋಕ್, ಅರವಿಂದ್ ಬಂಧಿತರು. ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಲ್ಲಿ ಕೋಲಾರ ಎಸ್​ಐಡಿ ವಿಭಾಗದ ಇನ್ಸ್​ಪೆಕ್ಟರ್ ಅಶೋಕ್​ ಅವರನ್ನು ಬಂಧಿಸಲಾಗಿದೆ.

ಇನ್ನು ಬಂಧಿತರಿಂದ ಒಂದು ಇನ್ನೋವಾ ಕಾರು, ಒಂದು ಐ10 ಕಾರು, ಫೋರ್ಡ್ ಕಾರು, 8 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಕೇಸ್​ನಲ್ಲಿ ಲೋಹಿತ್, ಪ್ರವೀಣ್ ಕೂಡ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನ

ಮಾಜಿ ಸಚಿವ ರೇವಣ್ಣರ ಹೊಳೆನರಸೀಪುರ ನಿವಾಸದಿಂದ ತಮ್ಮ ಮನೆ ಇರುವ ಚನ್ನರಾಯಪಟ್ಟಣದ ಕಡೆಗೆ ಹೋಗುವ ಮಾರ್ಗದ ಸೂರನಹಳ್ಳಿ ಬಳಿ ಅಕ್ಟೋಬರ್ 10ರಂದು ವಾಹನ ಅಡ್ಡಗಟ್ಟಿ ಕೊಲೆಯತ್ನ ನಡೆದಿತ್ತು. ಈ ಬಗ್ಗೆ ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ದುಷ್ಕರ್ಮಿಗಳು ಪದೇಪದೆ ರೇವಣ್ಣ ಅವರ ಆಪ್ತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಆಗಸ್ಟ್ 9 ರಂದು ರೇವಣ್ಣ ಅವರ ಆಪ್ತ ಕೃಷ್ಣೇಗೌಡ ಅವರನ್ನು ಕೊಲೆ ಮಾಡಲಾಗಿತ್ತು. ಇವರು ಗ್ರಾನೈಟ್ ಉದ್ಯಮಿ ಮತ್ತು ಗುತ್ತಿಗೆದಾರರಾಗಿದ್ದರು. ಇಂದು ಮತ್ತೊಬ್ಬ ಆಪ್ತ ಹಾಗೂ ಗುತ್ತಿಗೆದಾರನ ಮೇಲೆ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

Published On - 3:32 pm, Sun, 22 October 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ