AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​.ಡಿ.ರೇವಣ್ಣ ಆಪ್ತನ ಹತ್ಯೆಗೆ ಯತ್ನ ಪ್ರಕರಣ: ಓರ್ವ ಇನ್ಸ್​ಪೆಕ್ಟರ್ ಸೇರಿದಂತೆ 6 ಆರೋಪಿಗಳ ಬಂಧನ

ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಆಪ್ತ ಅಶ್ವತ್ಥ್ ನಾರಾಯಣಗೌಡ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಆರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಓರ್ವ ಇನ್ಸ್​ಪೆಕ್ಟರ್​ ಸೇರಿ 6 ಆರೋಪಿಗಳನ್ನು ಬಂಧಿಸುವಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಚ್​.ಡಿ.ರೇವಣ್ಣ ಆಪ್ತನ ಹತ್ಯೆಗೆ ಯತ್ನ ಪ್ರಕರಣ: ಓರ್ವ ಇನ್ಸ್​ಪೆಕ್ಟರ್ ಸೇರಿದಂತೆ 6 ಆರೋಪಿಗಳ ಬಂಧನ
ಮಂಜುನಾಥ ಕೆಬಿ
| Edited By: |

Updated on:Oct 22, 2023 | 3:33 PM

Share

ಹಾಸನ, (ಅಕ್ಟೋಬರ್ 22): ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಆಪ್ತ ಅಶ್ವತ್ಥ್ ನಾರಾಯಣಗೌಡ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಆರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಓರ್ವ ಇನ್ಸ್​ಪೆಕ್ಟರ್​ ಸೇರಿ 6 ಆರೋಪಿಗಳನ್ನು ಬಂಧಿಸುವಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ SID ವಿಭಾಗದ ಇನ್ಸ್​​ಪೆಕ್ಟರ್​ ಅಶೋಕ್, ಸತೀಶ್, ತೇಜಸ್ವಿ, ಮುರುಗನ್, ಮಧುಸೂದನ್, ಅಶೋಕ್, ಅರವಿಂದ್ ಬಂಧಿತರು. ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಲ್ಲಿ ಕೋಲಾರ ಎಸ್​ಐಡಿ ವಿಭಾಗದ ಇನ್ಸ್​ಪೆಕ್ಟರ್ ಅಶೋಕ್​ ಅವರನ್ನು ಬಂಧಿಸಲಾಗಿದೆ.

ಇನ್ನು ಬಂಧಿತರಿಂದ ಒಂದು ಇನ್ನೋವಾ ಕಾರು, ಒಂದು ಐ10 ಕಾರು, ಫೋರ್ಡ್ ಕಾರು, 8 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಕೇಸ್​ನಲ್ಲಿ ಲೋಹಿತ್, ಪ್ರವೀಣ್ ಕೂಡ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನ

ಮಾಜಿ ಸಚಿವ ರೇವಣ್ಣರ ಹೊಳೆನರಸೀಪುರ ನಿವಾಸದಿಂದ ತಮ್ಮ ಮನೆ ಇರುವ ಚನ್ನರಾಯಪಟ್ಟಣದ ಕಡೆಗೆ ಹೋಗುವ ಮಾರ್ಗದ ಸೂರನಹಳ್ಳಿ ಬಳಿ ಅಕ್ಟೋಬರ್ 10ರಂದು ವಾಹನ ಅಡ್ಡಗಟ್ಟಿ ಕೊಲೆಯತ್ನ ನಡೆದಿತ್ತು. ಈ ಬಗ್ಗೆ ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ದುಷ್ಕರ್ಮಿಗಳು ಪದೇಪದೆ ರೇವಣ್ಣ ಅವರ ಆಪ್ತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಆಗಸ್ಟ್ 9 ರಂದು ರೇವಣ್ಣ ಅವರ ಆಪ್ತ ಕೃಷ್ಣೇಗೌಡ ಅವರನ್ನು ಕೊಲೆ ಮಾಡಲಾಗಿತ್ತು. ಇವರು ಗ್ರಾನೈಟ್ ಉದ್ಯಮಿ ಮತ್ತು ಗುತ್ತಿಗೆದಾರರಾಗಿದ್ದರು. ಇಂದು ಮತ್ತೊಬ್ಬ ಆಪ್ತ ಹಾಗೂ ಗುತ್ತಿಗೆದಾರನ ಮೇಲೆ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

Published On - 3:32 pm, Sun, 22 October 23

Follow Us
Manjunath KB
Manjunath KB
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ