Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ ಅಂಗಡಿ ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು
ಮೃತ ಮೆಡಿಕಲ್​ ಶಾಪ್​ ಮಾಲಿಕ ವಿರೂಪಾಕ್ಷ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 14, 2023 | 11:54 AM

ಹಾಸನ: ಇತ್ತೀಚಿಗೆ ಹೆಚ್ಚಾಗಿ ಚಿಕ್ಕ ವಯಸ್ಸಿನ ಮಕ್ಕಳಿಂದ ಹಿಡಿದು ಹರೆಯದ ಯುವ ಜನತೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿದ್ದಾರೆ. ಇದು ಸಮಾಜದಲ್ಲಿ ಆತಂಕ ಮೂಡಿಸಿದ್ದರೂ, ಈ ಹೃದಯಾಘಾತಕ್ಕೆ ನಿಖರವಾದ ಕಾರಣ ಮಾತ್ರ ತಿಳಿದಿಲ್ಲ. ಇದು ಪೋಷಕರಲ್ಲಿ ತೀರ್ವ ಆತಂಕ ಮೂಡಿಸಿದೆ ಮತ್ತು ವೈದ್ಯರಿಗೆ ಸವಾಲಿನ ಸಂಗತಿಯಾಗಿದೆ. ಜಿಲ್ಲೆಯ ಹೊಳೆನರಸೀಪುರದ (Holenarsipura) ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ (Medical Shop) ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೆಡಿಕಲ್ ಶಾಪ್ ಮಾಲೀಕ ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷ ಮೊಬೈಲ್​ನಲ್ಲಿ ಮಾತನಾಡುತ್ತಿರುವಾಗ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ:H3N2 ವೈರಸ್‌ನ ರೋಗ ಲಕ್ಷಣ, ಚಿಕಿತ್ಸೆ, ಜತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಯಾವುವು?

ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಮಡಿಕೇರಿ: ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೀರ್ತನ್ (12) ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ಜನವರಿ 7 ರಂದು ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಜನವರಿ 8 ರಂದು ಆಸ್ಪತ್ರೆಗೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Tue, 14 March 23