AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ಆರೋಪ; ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಅಕ್ರಮವಾಗಿ ಪ್ರಾರ್ಥನಾ ಕೇಂದ್ರ ತೆರೆದು ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಹಿಂದೂ ಪರ ಸಂಘಟನೆಗಳ ಮುಖಂಡರು ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಮತಾಂತರ ಆರೋಪ; ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಮಹಿಳೆಯರಿಂದ ಗಲಾಟೆ
TV9 Web
| Edited By: |

Updated on: Nov 29, 2021 | 9:40 AM

Share

ಹಾಸನ: ಹಿಂದೂ ಧರ್ಮದ ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪ್ರಾರ್ಥನಾ ಕೇಂದ್ರದ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರಾರ್ಥನಾ ನಿರತರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ನಾವು ಪ್ರಾರ್ಥನೆಗೆ ಬಂದಿದ್ದೇವೆ. ಅದನ್ನು ಕೇಳೋಕೆ ನೀವ್ಯಾರು ಅಂತ ಮಹಿಳೆಯರು ಗಲಾಟೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯಲ್ಲಿ ಈ ಘಟನೆ ನಡೆದಿದೆ.

ತಾಲೂಕಿನಲ್ಲಿ ಅಕ್ರಮವಾಗಿ ಪ್ರಾರ್ಥನಾ ಕೇಂದ್ರ ತೆರೆದು ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಹಿಂದೂ ಪರ ಸಂಘಟನೆಗಳ ಮುಖಂಡರು ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹ ಮತಾಂತರ ಕಾಯ್ದೆ ಜಾರಿ ವಿಚಾರವಾಗಿ ಚರ್ಚಿಸಲು ನವೆಂಬರ್ 12ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಶ್ರೀಗಳ ನಿಯೋಗ ಮತ್ತು ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದರು. ಕಾಯ್ದೆ ಜಾರಿಗೆ ತರುವಂತೆ ಸಿಎಂಗೆ ಮಾದಾರ ಚನ್ನಯ್ಯ, ಸೇವಾಲಾಲ್ ಸ್ವಾಮೀಜಿ, ಸಿದ್ದಲಿಂಗಶ್ರೀ ಹಾಗೂ ಸುಮಾರು 50ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಮನವಿ ಮಾಡಿದೆ. ಕಾಯ್ದೆ ಮಾಡದಿದ್ದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ.

ಮತಾಂತರ ದೇಶಾದ್ಯಂತ ನಡೆಯುತ್ತಿದೆ. ಇದು ಬ್ರಿಟೀಷರಿಂದ ಪ್ರಾರಂಭವಾಗಿದೆ. ನಿಷೇಧ ಕಾಯ್ದೆ ಮಾಡ್ತಾರೆ ಅಂತ ಗೊತ್ತಾಗ್ತಿದ್ದಂತೆ ಪಾದ್ರಿಗಳು ಸಿಎಂ ಭೇಟಿಯಾಗಿದ್ದಾರೆ. ಇದು ಸರಿಯಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ಇದನ್ನೂ ಓದಿ

ದೇವರ ಮಧ್ಯೆ ಪುನೀತ್​ ಫೋಟೋ ಇಟ್ಟು ಪೂಜೆ, ಸದ್ಯದಲ್ಲೇ ದೇವಸ್ಥಾನ ನವೀಕರಿಸಿ ನಿತ್ಯಪೂಜೆ; ಇದು ಅಪ್ಪು ಅಭಿಮಾನಿ ಅಭಿಲಾಷೆ

ಹುಬ್ಬಳ್ಳಿ: ಚರ್ಚ್​ನಲ್ಲಿ ಮತಾಂತರ ಆರೋಪ; ಆರೋಪಿಯನ್ನು ಬಂಧಿಸುವಂತೆ ಅರವಿಂದ್ ಬೆಲ್ಲದ್, ಹಿಂದೂ ಪರ ಸಂಘಟನೆ ಪ್ರತಿಭಟನೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು