AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು

ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರದ ಸೇತುವೆಯ ಮೇಲಿಂದ ಬಿದ್ದು ಪೂಜಾ ಮೃತಪಟ್ಟಿದ್ದರು. ನಂತರ ನಾಲ್ಕು ದಿನಗಳ ಹುಡುಕಾಟದ ಬಳಿಕ ಹೇಮಾವತಿ ನದಿಯಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ ಪೂಜಾಳ ಮೃತದೇಹ ಪತ್ತೆ ಹಚ್ಚಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು
ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು
TV9 Web
| Edited By: |

Updated on: Aug 08, 2021 | 11:18 AM

Share

ಹಾಸನ: ವರದಕ್ಷಿಣೆ ಕಿರುಕುಳ ಆರೋಪ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಪೂಜಾ(22) ಮೃತ ಮಹಿಳೆ.

ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರದ ಸೇತುವೆಯ ಮೇಲಿಂದ ಬಿದ್ದು ಪೂಜಾ ಮೃತಪಟ್ಟಿದ್ದರು. ನಂತರ ನಾಲ್ಕು ದಿನಗಳ ಹುಡುಕಾಟದ ಬಳಿಕ ಹೇಮಾವತಿ ನದಿಯಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ ಪೂಜಾಳ ಮೃತದೇಹ ಪತ್ತೆ ಹಚ್ಚಿದ್ದಾರೆ. ಮಗಳ ಮೃತದೇಹ ಸಿಗದ ವೇಳೆ ದಿನವೂ ನದಿಯ ಬಳಿ ಬಂದು ಪೂಜಾಳ ಪೋಷಕರು ಕಣ್ಣೀರಿಡುತ್ತಿದ್ದರು. ಸದ್ಯ ನಾಲ್ಕು ದಿನಗಳ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ಮಗಳ ಮೃತದೇಹ ನೋಡಿದ ಪೋಷಕರ ಆಕ್ರಂದನ ಮುಗಿಳು ಮುಟ್ಟಿದೆ.

ಮಗಳನ್ನ ಅಳಿಯ ಅಶ್ವತ್ಥ್ ನದಿಗೆ ತಳ್ಳಿ‌ ಕೊಲೆ ಮಾಡಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಪೂಜಾಳ ಸಾವಿನ ಕೆಲ ದಿನಗಳ ಹಿಂದೆ ಪತಿ ಮನೆಯವರಿಂದ ಕಿರುಕುಳವಾಗ್ತಿದೆ ಎಂದು ಪೂಜಾ ತನ್ನ ಮನೆಯವರ ಬಳಿ ಹೇಳಿಕೊಂಡು ಕಣ್ಣೀರು ಹಾಕಿದ್ದಳಂತೆ. ಹೀಗಾಗಿ ಇದೇ ವಿಚಾರವಾಗಿ ಮಾತನಾಡಲು ಪೂಜಾ ಪತಿ ಅಶ್ವತ್ಥ್ ಮನೆಗೆ ಪೋಷಕರು ಬಂದಿದ್ದರು. ಪೋಷಕರು ಮನೆಗೆ ಬರುತ್ತಿದ್ದಂತೆ ಅಶ್ವತ್ಥ್ ಮನೆ ಬಿಟ್ಟು ಓಡಿಹೋಗಿದ್ದ. ಈ ವೇಳೆ ಅಶ್ವತ್ಥ್‌ನನ್ನು ಕರೆತರುವುದಾಗಿ ಹೇಳಿ ಪೂಜಾ, ಪತಿಯನ್ನು ಹಿಂಬಾಲಿಸಿ ಹೋಗಿದ್ದಳು. ಈ ವೇಳೆ ಪತಿಯೇ ಪೂಜಾಳನ್ನು ನದಿಗೆ ತಳ್ಳಿದ್ದಾಗಿ ಪೋಷಕರು ಆರೋಪ ಮಾಡಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ ಹಾಗೂ ಸಕಲೇಶಪುರ ತಾಲೂಕಿನ ರಾಮನ ಹಳ್ಳಿ ಗ್ರಾಮದ ಅಶ್ವಥ್ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮಗಳ ಮೃತದೇಹ ಕಂಡು ಪೂಜಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?