AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು

ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರದ ಸೇತುವೆಯ ಮೇಲಿಂದ ಬಿದ್ದು ಪೂಜಾ ಮೃತಪಟ್ಟಿದ್ದರು. ನಂತರ ನಾಲ್ಕು ದಿನಗಳ ಹುಡುಕಾಟದ ಬಳಿಕ ಹೇಮಾವತಿ ನದಿಯಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ ಪೂಜಾಳ ಮೃತದೇಹ ಪತ್ತೆ ಹಚ್ಚಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು
ವರದಕ್ಷಿಣೆ ಕಿರುಕುಳ ಆರೋಪ; ನವವಿವಾಹಿತೆ ಅನುಮಾನಾಸ್ಪದ ಸಾವು, ಮೃತದೇಹ ಕಂಡು ಪೋಷಕರ ಕಣ್ಣೀರು
TV9 Web
| Edited By: |

Updated on: Aug 08, 2021 | 11:18 AM

Share

ಹಾಸನ: ವರದಕ್ಷಿಣೆ ಕಿರುಕುಳ ಆರೋಪ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಪೂಜಾ(22) ಮೃತ ಮಹಿಳೆ.

ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರದ ಸೇತುವೆಯ ಮೇಲಿಂದ ಬಿದ್ದು ಪೂಜಾ ಮೃತಪಟ್ಟಿದ್ದರು. ನಂತರ ನಾಲ್ಕು ದಿನಗಳ ಹುಡುಕಾಟದ ಬಳಿಕ ಹೇಮಾವತಿ ನದಿಯಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ ಪೂಜಾಳ ಮೃತದೇಹ ಪತ್ತೆ ಹಚ್ಚಿದ್ದಾರೆ. ಮಗಳ ಮೃತದೇಹ ಸಿಗದ ವೇಳೆ ದಿನವೂ ನದಿಯ ಬಳಿ ಬಂದು ಪೂಜಾಳ ಪೋಷಕರು ಕಣ್ಣೀರಿಡುತ್ತಿದ್ದರು. ಸದ್ಯ ನಾಲ್ಕು ದಿನಗಳ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ಮಗಳ ಮೃತದೇಹ ನೋಡಿದ ಪೋಷಕರ ಆಕ್ರಂದನ ಮುಗಿಳು ಮುಟ್ಟಿದೆ.

ಮಗಳನ್ನ ಅಳಿಯ ಅಶ್ವತ್ಥ್ ನದಿಗೆ ತಳ್ಳಿ‌ ಕೊಲೆ ಮಾಡಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಪೂಜಾಳ ಸಾವಿನ ಕೆಲ ದಿನಗಳ ಹಿಂದೆ ಪತಿ ಮನೆಯವರಿಂದ ಕಿರುಕುಳವಾಗ್ತಿದೆ ಎಂದು ಪೂಜಾ ತನ್ನ ಮನೆಯವರ ಬಳಿ ಹೇಳಿಕೊಂಡು ಕಣ್ಣೀರು ಹಾಕಿದ್ದಳಂತೆ. ಹೀಗಾಗಿ ಇದೇ ವಿಚಾರವಾಗಿ ಮಾತನಾಡಲು ಪೂಜಾ ಪತಿ ಅಶ್ವತ್ಥ್ ಮನೆಗೆ ಪೋಷಕರು ಬಂದಿದ್ದರು. ಪೋಷಕರು ಮನೆಗೆ ಬರುತ್ತಿದ್ದಂತೆ ಅಶ್ವತ್ಥ್ ಮನೆ ಬಿಟ್ಟು ಓಡಿಹೋಗಿದ್ದ. ಈ ವೇಳೆ ಅಶ್ವತ್ಥ್‌ನನ್ನು ಕರೆತರುವುದಾಗಿ ಹೇಳಿ ಪೂಜಾ, ಪತಿಯನ್ನು ಹಿಂಬಾಲಿಸಿ ಹೋಗಿದ್ದಳು. ಈ ವೇಳೆ ಪತಿಯೇ ಪೂಜಾಳನ್ನು ನದಿಗೆ ತಳ್ಳಿದ್ದಾಗಿ ಪೋಷಕರು ಆರೋಪ ಮಾಡಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ ಹಾಗೂ ಸಕಲೇಶಪುರ ತಾಲೂಕಿನ ರಾಮನ ಹಳ್ಳಿ ಗ್ರಾಮದ ಅಶ್ವಥ್ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮಗಳ ಮೃತದೇಹ ಕಂಡು ಪೂಜಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ