Sign In

By signing in or creating an account, you agree with Associated Broadcasting Company's Terms & Conditions and Privacy Policy.

Human Milk Bank: ಹಾಸನದಲ್ಲಿ ತಾಯಿ ಹಾಲು ಸಂರಕ್ಷಣೆಗೆ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟನೆ

ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ತಾಯಿ ಹಾಲಿನ ಬ್ಯಾಂಕ್ ಉದ್ಘಾಟನೆ ಮಾಡಲಾಗಿದೆ. ಈ ಮಿಲ್ಕ್ ಬ್ಯಾಂಕ್​​ಗಳಲ್ಲಿ ತಾಯಿ ಹಾಲಿನ ಸಂಗ್ರಹ, ಪರೀಕ್ಷೆ, ಸಂಸ್ಕರಣೆ, ಶೇಖರಣೆ ಮತ್ತು ವಿತರಣೆ ಮಾಡಲಾಗುತ್ತೆ.

Human Milk Bank: ಹಾಸನದಲ್ಲಿ ತಾಯಿ ಹಾಲು ಸಂರಕ್ಷಣೆಗೆ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟನೆ
ತಾಯಿ ಹಾಲು
Follow us
TV9 Web
| Updated By: ಆಯೇಷಾ ಬಾನು

Updated on:Mar 15, 2023 | 8:40 AM

ಹಾಸನ: ತಾಯಿಯನ್ನು ದೇವರಿಗೆ ಹೋಲಿಸಲಾಗುತ್ತೆ. ಆಕೆಯ ಎದೆ ಹಾಲನ್ನು(Human Milk Bank) ಅಮೃತಕ್ಕೆ ಹೋಲಿಸಲಾಗುತ್ತೆ. ಸದ್ಯ ಇಂತಹ ಎದೆ ಹಾಲಿನ ಬ್ಯಾಂಕ್ ಹಾಸನದಲ್ಲಿ ತೆರೆಯಲಾಗಿದೆ. ಮಾರ್ಚ್ 13ರ ಸೋಮವಾರ ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾನವ ಹಾಲಿನ ಬ್ಯಾಂಕ್ ಉದ್ಘಾಟನೆ ಮಾಡಲಾಗಿದೆ.

ಈ ಮಿಲ್ಕ್ ಬ್ಯಾಂಕ್​​ಗಳಲ್ಲಿ ತಾಯಿ ಹಾಲಿನ ಸಂಗ್ರಹ, ಪರೀಕ್ಷೆ, ಸಂಸ್ಕರಣೆ, ಶೇಖರಣೆ ಮತ್ತು ವಿತರಣೆ ಮಾಡಲಾಗುತ್ತೆ. ಇದು ನಿರ್ಗತಿಕ ಶಿಶುಗಳಿಗೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ತಾಯಂದಿರ ಮಕ್ಕಳಿಗೆ ಬಹಳ ಅನುಕೂಲವಾಗಲಿದೆ. ಹ್ಯೂಮನ್ ಮಿಲ್ಕ್ ಬ್ಯಾಂಕ್ ಅನ್ನು ಅಬಕಾರಿ ಸಚಿವ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ. ಗೋಪಾಲಯ್ಯ ಅವರು ಉದ್ಘಾಟಿಸಿದರು. ಇನ್ನು ಈ ಬಗ್ಗೆ HIMS ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಸೌಲಭ್ಯವು ಶಿಶುಗಳು, ದತ್ತು ಪಡೆದ ಶಿಶುಗಳು ಮತ್ತು ಜನ್ಮ ನೀಡಿದ ನಂತರ ತಾಯಿ ಮರಣ ಹೊಂದಿದ ಶಿಶುಗಳಲ್ಲಿ ಅಪೌಷ್ಟಿಕತೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಗೊಂಡ ಹ್ಯೂಮನ್ ಮಿಲ್ಕ್ ಬ್ಯಾಂಕ್ ಅದೆಷ್ಟೋ ನವಜಾತ ಶಿಶುಗಳ ಜೀವ ಉಳಿಸಿದೆ! ಇಲ್ಲಿಯ ವಿಶೇಷತೆ ಓದಿ

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮತ್ತು HIMSನ ನಿರ್ದೇಶಕ ಡಾ.ಬಿ.ಸಿ. ರವಿ ಕುಮಾರ್ ಅವರು ಮಾತನಾಡಿ, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇನ್ನು ಎದೆ ಹಾಲಿನ ಬ್ಯಾಂಕ್ ಬಗ್ಗೆ ಮಾರ್ಚ್ 16 ರಿಂದ ಮೂರು ದಿನಗಳ ಕಾಲ ವೈದ್ಯಕೀಯ ಪ್ರದರ್ಶನವನ್ನು HIMS ನಡೆಸಲಿದೆ. ಎದೆ ಹಾಲಿನ ಬ್ಯಾಂಕ್​ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಕಾಲೇಜಿನ ಎಲ್ಲಾ ವಿಭಾಗಗಳು ಬೂತ್‌ಗಳನ್ನು ಸ್ಥಾಪಿಸಿ ಮಾನವ ದೇಹ ಮತ್ತು ಆರೋಗ್ಯದ ವಿವಿಧ ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಡಾ. ರವಿಕುಮಾರ್ ತಿಳಿಸಿದರು. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಈ ಪ್ರದರ್ಶನಕ್ಕೆ ಭೇಟಿ ನೀಡಬಹುದು ಎಂದರು.

ಹುಟ್ಟಿದ ಮಕ್ಕಳಿಗೆ ಕನಿಷ್ಠ ಒಂದು ವರ್ಷದ ವರೆಗೆ ತಾಯಿಯ ಎದೆಹಾಲನ್ನ ಕುಡಿಸೋದ್ರಿಂದ ಮಕ್ಕಳ ದೈಹಿಕ, ಮಾನಸಿಕ, ಬೆಳವಣಿಗೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತೆ. ಹಾಗಾಗಿ ಕಡ್ಡಾಯವಾಗಿ ಎಲ್ಲಾ ತಾಯಂದಿರು ಹುಟ್ಟಿದ ಮಕ್ಕಳಿಗೆ ಬೇರೆ ಯಾವುದೇ ಅಹಾರ ನೀಡದೆ ಎದೆಯ ಹಾಲನ್ನೆ ಕೊಡಬೇಕು ಎನ್ನೋ ಸಲಹೆಯನ್ನೂ ನೀಡ್ತಾರೆ. ಆದ್ರೆ ದುರಾದೃಷ್ಟವೋ, ಅಥವಾ ಹಲವು ಸಮಸ್ಯೆಯ ಕಾರಣವೋ ಏನೋ ಅದೆಷ್ಟೋ ಮಕ್ಕಳಿಗೆ ಹುಟ್ಟಿದ ಕೂಡಲೆ ತಾಯಿ ಹಾಲು ಸಿಗೋದಿಲ್ಲ ಎನ್ನೋದು ಒಂದೆಡೆಯಾದ್ರೆ. ಇನ್ನು ಕೆಲ ತಾಯಿಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಲಭ್ಯವಾಗದೆ ಸಮಸ್ಯೆ ಎದುರಾಗುತ್ತೆ. ಹಾಗಾಗಿ ಯಾರಿಗೆ ಹಾಲು ಲಭ್ಯತೆ ಇರೋದಿಲ್ಲವೂ ಅವರಿಗೆ ಲಭ್ಯತೆ ಇರೋ ತಾಯಂದಿರಿಂದ ಸಂಗ್ರಹಿಸಿದ ಎದೆ ಹಾಲನ್ನು ನೀಡೋ ಮೂಲಕ ಮಕ್ಕಳ ಬೆಳವಣಿಗೆ ನೆರವಾಗಬೇಕು ಎನ್ನುವ ದೃಷ್ಟಿಯಲ್ಲಿ ಹಿಮ್ಸ್ ಇಂತಹದೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Wed, 15 March 23

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ