AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮೇಲೆ ಅನುಮಾನಗೊಂಡ ಪತಿ ಆಕೆ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆಗೆ ಯತ್ನ; ತನಿಖೆ ವೇಳೆ ಬಯಲಾಯ್ತು ಸತ್ಯ

ಪ್ರೀತಿಸಿ ಮದುವೆಯಾಗಿದ್ದ ಮಡದಿ ಮೇಲಿನ ಅನುಮಾನದಿಂದ ಆಕೆ ಮಲಗಿದ್ದ ವೇಳೆ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಮಹಿಳೆ ದೇಹ ಶೇಕಡಾ 70 ರಷ್ಟು ಸುಟ್ಟು ಹೋಗಿದೆ. ಐದು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಸತೀಶ್ ಮತ್ತು ಭವ್ಯ ಇಬ್ಬರೂ ಮದುವೆಯಾಗಿದ್ದರು.

ಪತ್ನಿ ಮೇಲೆ ಅನುಮಾನಗೊಂಡ ಪತಿ ಆಕೆ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆಗೆ ಯತ್ನ; ತನಿಖೆ ವೇಳೆ ಬಯಲಾಯ್ತು ಸತ್ಯ
ಪತ್ನಿ ಮೇಲೆ ಅನುಮಾನಗೊಂಡ ಪತಿ ಆಕೆ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆಗೆ ಯತ್ನ; ತನಿಖೆ ವೇಳೆ ಬಯಲಾಯ್ತು ಸತ್ಯ
TV9 Web
| Edited By: |

Updated on: Mar 07, 2022 | 3:50 PM

Share

ಹಾಸನ: ಅನುಮಾನ ಎಂಬುವುದು ಜೀವನವನ್ನು ಹೇಗೆ ನರಕ ಮಾಡುತ್ತೆ ಎಂಬುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಪ್ರೀತಿಸಿ ಮದುವೆಯಾದವಳಿಗೆ(Love Marriage) ಪತಿಯೇ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ದೇಹ ಬಹುತೇಕ ಸುಟ್ಟು ಹೋಗಿದ್ದು ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಗ್ರಾಮದ ಸತೀಶ್ ಎಂಬಾತ ಪತ್ನಿ ಭವ್ಯ(22) ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದಾನೆ. ಪ್ರೀತಿಸಿ ಮದುವೆಯಾಗಿದ್ದ ಮಡದಿ ಮೇಲಿನ ಅನುಮಾನದಿಂದ ಆಕೆ ಮಲಗಿದ್ದ ವೇಳೆ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ.

ಮಹಿಳೆ ದೇಹ ಶೇಕಡಾ 70 ರಷ್ಟು ಸುಟ್ಟು ಹೋಗಿದೆ. ಐದು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಸತೀಶ್ ಮತ್ತು ಭವ್ಯ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಕೆಲವೇ ವರ್ಷದಲ್ಲಿ ಪತ್ನಿ ಮೇಲೆ ಪತಿಗೆ ಅನುಮಾನ ಹುಟ್ಟುಕೊಂಡಿದೆ. ಇದೇ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಮಾರ್ಚ್ 5 ರ ಶನಿವಾರ ಪತ್ನಿ ಹತ್ಯೆಗೆ ಸತೀಶ್ ಸಂಚು ರೂಪಿಸಿದ್ದಾನೆ. ಪತ್ನಿ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆ ಮಾಡಲು ಮುಂದಾಗಿದ್ದಾನೆ. ಅದೃಷ್ಟವಶಾತ್ ಆಕೆ ಉಸಿರಾಡುತ್ತಿದ್ದು ಆಕೆ ಬದುಕುಳಿದಾಗ ಗ್ಯಾಸ್ ಲೀಕ್ ಆಗಿ ಬೆಂಕಿ ಬಿದ್ದಿದ್ದಾಗಿ ಹೇಳಿಕೆ ನೀಡುವಂತೆ ಪತ್ನಿಯನ್ನು ಬೆದರಿಸಿ ಹೇಳಿಕೆ ಕೊಡಿಸಿದ್ದಾನೆ.

ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಬಗ್ಗೆ ಭವ್ಯ ಹೇಳಿಕೆ ನೀಡಿದ್ದರು. ಆದ್ರೆ ಘಟನೆ ಬಗ್ಗೆ ಅನುಮಾನದಿಂದ ತನಿಖೆ ನಡೆಸಿದಾಗ ಪೊಲೀಸರಿಗೆ ಘಟನೆ ಹಿಂದಿನ ಮರ್ಮದ ಸತ್ಯ ತಿಳಿದಿದೆ. ಅನುಮಾನದ ಪತಿಯ ರಹಸ್ಯ ಬಯಲಾಗಿದೆ. ಸದ್ಯ ಆರೋಪಿ ಪತಿ ಸತೀಶ್ನನ್ನ ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿನಿ ಸಾಧನೆ ಕೂಡ ಟ್ರೋಲ್

ಚಿರಂಜೀವಿ ಸಿನಿಮಾ ಪ್ರೇರಣೆಯಿಂದ ಉಕ್ರೇನ್​ನಲ್ಲಿ ಪ್ರಾಣಿಗಳ ಸಾಕುತ್ತಿರುವ ಹೈದರಾಬಾದ್ ವೈದ್ಯ ಜಪ್ಪಯ್ಯ ಅಂದರೂ ವಾಪಸ್​ ಬರೋಲ್ವಂತೆ!

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್