AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ತುಮಕೂರಿನವ, ಆದ್ರೆ ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟರೋ ಗೊತ್ತಿಲ್ಲ! ಅಸಮಾಧಾನ ಹೊರಹಾಕಿದರಾ ಸಚಿವ ಕೆ.ಎನ್​. ರಾಜಣ್ಣ

ನಾನು ತುಮಕೂರಿನವ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಹಾಸನ ಜಿಲ್ಲಾ ಉಸ್ತುವಾರಿ ನೀಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಕೆಎನ್ ರಾಜಣ್ಣ ಹೇಳಿದ್ರು.

ಆಯೇಷಾ ಬಾನು
|

Updated on: Jun 17, 2023 | 1:27 PM

Share

ಹಾಸನ: ನಾನು ತುಮಕೂರಿನವ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಹಾಸನ(Hassan) ಜಿಲ್ಲಾ ಉಸ್ತುವಾರಿ ನೀಡುತ್ತಾರೆಂದು ನಿರೀಕ್ಷಿಸಿರಲಿಲ್ಲ. ಬೇರೆ ಯಾವುದಾದರೂ ಜಿಲ್ಲೆ ಕೊಡಬಹುದೆಂದುಕೊಂಡಿದ್ದೆ ಎಂದು ಹೇಳುವ ಮೂಲಕ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್​.ರಾಜಣ್ಣ(KN Rajanna) ಕಾಂಗ್ರೆಸ್(Congress) ನಿರ್ಧಾರದ ಬಗ್ಗೆ ಕೊಂಚ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಡಿಸಿ ಕಚೇರಿಯಲ್ಲಿ ಮಧುಗಿರಿ ಶಾಸಕ, ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಅವರು, ಮುಂಗಾರು ಬಿತ್ತನೆ ಹಿನ್ನೆಲೆಯಲ್ಲಿ ಕೈಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇನೆ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದಾರೊ ಗೊತ್ತಿಲ್ಲ. ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ, ಬಹುಶಃ ಬೇರೆ ಕಡೆ ಕೊಡಬಹುದು ಎಂದು ಕೊಂಡಿದ್ದೆ. ಶಿವಲಿಂಗೇಗೌಡ ಸಚಿವರಾಗಿದ್ರೆ ಅವರೇ ಉಸ್ತುವಾರಿ ಆಗೋರು. ಮುಂದೆ ಅವರೂ ಸಚಿವರು ಆಗಬಹುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಲ್ಲರಿಗು ಅನುಕೂಲ ಆಗಬೇಕು. ಜಿಲ್ಲೆ ಅಭಿವೃದ್ಧಿ ಆಗಿದೆ ಅದರ ಬಗ್ಗೆ ತಕರಾರು ಇಲ್ಲ. ಆದರೆ ಕಲವು ಕಡೆ ಸಾಕಷ್ಟು ಕೆಲಸ ಆಗಬೇಕು ಎಂದರು.

ಇದನ್ನೂ ಓದಿ:  Anti-encroachment drive: ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಾಗ ಸರ್ಕಾರಕ್ಕೆ ಕೇವಲ ಬಡವರ ಮನೆ ಮಾತ್ರ ಕಾಣಿಸುತ್ತವೆಯೇ?

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಮಾಡುತ್ತಿದೆ

ನಾನು ಪಕ್ಷಾತೀತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು ಎನ್ನೋದು ನಮ್ಮ ಪಕ್ಷದ ಉದ್ದೇಶ. ಚುನಾವಣೆ ವರೆಗೆ ಮಾತ್ರ ಪಕ್ಷ, ಈಗ ಎಲ್ಲರೂ ಒಂದೇ. ಕೇಂದ್ರ ಸರ್ಕಾರದ ನೀತಿಯ ವಿರುದ್ಧ ನಾವು ಹೋರಾಟಕ್ಕೆ ಕರೆ ಕೊಡಲಾಗಿದೆ. ಪಡಿತರ ನೀಡಲು ಹಿಂದೇಟು ಹಾಕುತ್ತಿರುವ ಬಗ್ಗೆ ಹೋರಾಟಕ್ಕೆ ಕರೆಕೊಡಲಾಗಿದೆ. ಅವರು ಅಕ್ಕಿ ಕೊಡಲಿಲ್ಲ ಎಂದರೆ ನಾವು ಸುಮ್ಮನೇ ಕೂರಲ್ಲ. ಬೇರೆ ಹಲವು ರಾಜ್ಯಗಳಲ್ಲಿ ಅಕ್ಕಿ ಇದೆ ಅಲ್ಲಿ ಖರೀದಿ ಮಾಡಿ ಜನರಿಗೆ ಕೊಡುತ್ತೇವೆ. ಕೇಂದ್ರ ಸರ್ಕಾರ ಚುನಾವಣಾ ಬಳಿಕ ಕರ್ನಾಟಕದ ಬಗ್ಗೆ ತಾರತಮ್ಯ ಮಾಡುತ್ತಿದೆ ಎಂದರು.

ಇನ್ನು ಇದೇ ವೇಳೆ ಸರ್ಕಾರ ಉಚಿತ ಅಕ್ಕಿ ಘೋಷಣೆ ವೇಳೆ ಎಫ್.ಸಿ.ಐ ಜೊತೆ ಚರ್ಚೆ ಮಾಡಿಲ್ಲ ಎಂಬ ವಿಚಾರಕ್ಕೆ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ನಾವು ಘೋಷಣೆ ಮಾಡಬೇಕಿಲ್ಲ. ಅವರೇನು ಪುಕ್ಕಟ್ಟೆ ಕೊಡ್ತಾರಾ ನಾವು ಖರೀದಿ ಮಾಡೋದು ಎಂದು ಎಫ್.ಸಿ.ಐ ಅಧಿಕಾರಿಗಳ ವಿರುದ್ಧ ಸಚಿವ ರಾಜಣ್ಣ ಆಕ್ರೋಶ ಹೊರ ಹಾಕಿದ್ರು. ಮೋದಿಯವರು ಎಲ್ಲರ ಖಾತೆಗೆ ಹದಿನೈದು ಲಕ್ಷ ಹಣ ಹಾಕ್ತೀನಿ ಅಂತಾ ಹೇಳಿದ್ರಲ್ವಾ. ಅವರು ಅನುಮತಿ ತಗೊಂಡು ಘೋಷಣೆ ಮಾಡಿದ್ರಾ ಎಂದು ಕಿಡಿಕಾರಿದ್ರು.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್