AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು

ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವವರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ ಹಾಸನ ಜಿಲ್ಲೆಯ ಬೇಲೂರು(Belur) ತಾಲ್ಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು
ಬೇಲೂರು ತಾಲೂಕಿನಲ್ಲಿ ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 15, 2024 | 7:32 PM

Share

ಹಾಸನ, ಆ.15: ಕೆರೆಯಲ್ಲಿ ಮುಳುಗಿ ಓರ್ವ ಅಪ್ರಾಪ್ತ ಸೇರಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು(Belur) ತಾಲ್ಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ನಡೆದಿದೆ.  ಶ್ರೀಕಾಂತ್ (15) ಹಾಗೂ ವಿಜಯ್ (18) ಮೃತ ದುರ್ದೈವಿಗಳು. ಕೆರೆಗೆ ಮೀನು ಹಿಡಿಯಲು ತೆರಳಿದ್ದ ವೇಳೆ ದಿಢೀರ್ ಮಳೆ ಬಂದಿದೆ. ತಕ್ಷಣ ರಕ್ಷಣೆ ಪಡೆಯಲು ಕೆರೆಯ ಪಕ್ಕದಲ್ಲಿದ್ದ ಮರದ ಕೆಳಗೆ ಇಬ್ಬರು ನಿಂತಿದ್ದರು.

ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು

ಈ ಸಂದರ್ಭದಲ್ಲಿ ವಿಜಯ್ ಎಂಬಾತನ ಒಂದು ಕಾಲಿನ ಚಪ್ಪಲಿ ಕೆರೆಗೆ ಬಿದ್ದಿದ್ದು, ಶ್ರೀಕಾಂತ್ ಚಪ್ಪಲಿ ತೆಗೆದುಕೊಳ್ಳಲು ನೀರಿಗೆ ಇಳಿದಿದ್ದಾನೆ. ಕೆರೆಯಲ್ಲಿ ಹೂಳು, ಗಿಡ, ಗಂಟೆಗಳು ಬೆಳೆದಿದ್ದರಿಂದ ಕೆರೆಯ ನೀರಲ್ಲಿ ಶ್ರೀಕಾಂತ್ ಸಿಲುಕಿ ಒದ್ದಾಡಿದ್ದಾನೆ. ಕೂಡಲೇ ಶ್ರೀಕಾಂತ್ ರಕ್ಷಣೆಗೆ ವಿಜಯ್ ತೆರಳಿದ್ದು, ಈಜು ಬಾರದಿದ್ದರಿಂದ ಕೆರೆಯಲ್ಲಿ ಮುಳುಗಿ ಇಬ್ಬರು ಅಸುನೀಗಿದ್ದಾರೆ. ಇದೀಗ ಮುಳುಗು ತಜ್ಞರು ಸ್ಥಳಕ್ಕಾಗಮಿಸಿ ಇಬ್ಬರ ಮೃತದೇಹವನ್ನ ಹೊರತೆಗೆಯಲಾಗಿದೆ. ಇನ್ನು ಮಕ್ಕಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ

ರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ಇಂಡಿಕಾ ಕಾರು

ಆನೇಕಲ್: ಗ್ಯಾರೇಜ್​ನಿಂದ ಮನೆಗೆ ಟಾಟಾ ಇಂಡಿಕಾ ಕಾರು ತರುವಾಗ ಹೊತ್ತಿ ಉರಿದ ಘಟನೆ ಆನೇಕಲ್​ನ ಕೋರ್ಟ್ ಹಿಂಭಾಗದಲ್ಲಿ ನಡೆದಿದೆ. ಕೋರ್ಟ್ ಹಿಂಭಾಗದ ಸರ್ಕಾರಿ ಸಾರ್ವಜನಿಕ ಬಾಲಕರ ವಿಧ್ಯಾರ್ಥಿ ನಿಲಯದ ಬಳಿ ಬರುತ್ತಿದ್ದಂತೆ ಧಿಡೀರನೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಧಗಧಗನೇ ಸುಟ್ಟು ಕರಕಲಾಗಿದೆ. ಕಾರಿನಿಂದ ಇಳಿದು ಚಾಲಕ ಬಚಾವ್ ಆಗಿದ್ದಾನೆ. ಗ್ಯಾರೇಜ್ ನಿಂದ ಮನೆಗೆ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಠಾಣಾ ತಂಡ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Thu, 15 August 24

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ