AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ

ಅದು ಗಂಡ-ಹೆಂಡತಿ, ಮಗಳು ಎಂದು ಸುಖವಾಗಿದ್ದ ಸಂಸಾರ, ದುಡಿಮೆಗಾಗಿ ಎರಡು ಕಾರು, ವಾಸಕ್ಕೆ ಸ್ವಂತ ಮನೆ, ಗಂಡನ ದುಡಿಮೆಗೆ ಸಾಥ್ ನೀಡಿದ್ದ ಮಡದಿ, ಇನ್ನೇನು ಬೇಕಿತ್ತು ಹೇಳಿ. ಆದರೆ ಆನ್ಲೈನ್ ಗೇಮ್ ಗೀಳಿಗೆ ಬಿದ್ದ ಮನೆಯ ಯಜಮಾನನ ಯಡವಟ್ಟಿಗೆ ಇಡೀ ಕುಟುಂಬವೇ ಸರ್ವನಾಶವಾಗಿದೆ. ಆಟವಾಡಿ ಮಾಡಿದ ಸಾಲ ಮಾಡಿ ತೀರಿಸಲಾಗದೆ ಏನೂ ಅರಿಯದ ಮಗಳು, ಮಡದಿಯೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ  ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ
ಚನ್ನರಾಯಪಟ್ಟಣದಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ
ಮಂಜುನಾಥ ಕೆಬಿ
| Edited By: |

Updated on: Aug 15, 2024 | 6:59 PM

Share

ಹಾಸನ, ಆ.15: ಜಿಲ್ಲೆಯ ಚನ್ನರಾಯಪಟ್ಟಣ(Channarayapatna)ದ ಶ್ರೀನಿವಾಸ್(43) ಆನ್ಲೈನ್ ಗೇಮ್ ಹುಚ್ಚಿಗೆ ಬಿದ್ದು ಇದ್ದ ಬದ್ದ ಆಸ್ತಿ ಮಾರಾಟ ಮಾಡಿ, ಮೈತುಂಬ ಸಾಲಮಾಡಿಕೊಂಡು ಕಡೆಗೆ ಸಾಲ ತೀರಿಸಲಾಗದೆ ಪತ್ನಿ ಶ್ವೇತಾ(36) ಹಾಗೂ ಮಗಳು ನಾಗಶ್ರೀ(13) ಜೊತೆಗೆ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಶನಿವಾರದಿಂದಲೇ ಶ್ರೀನಿವಾಸ್ ಪತ್ನಿ ಮಗಳ ಜೊತೆಗೆ ಕಾಣೆಯಾಗಿದ್ದರು. ಕುಟುಂಬ ಸದಸ್ಯರ ಸಂಪರ್ಕಕ್ಕೆ ಸಿಗದಿದ್ದಾಗ ಅನುಮಾನಗೊಡು ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೊಟ್ಟಿದ್ದಾರೆ. ಕೇಸ್ ದಾಖಲಿಸಿಕೊಂಡು ಕಾಣೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ನಿನ್ನೆ(ಆ.14) ಸಂಜೆ ನುಗ್ಗೆಹಳ್ಳೀ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ಲಾಪುರ ಹೇಮಾವತಿ ನಾಲೆಯಲ್ಲಿ ಗಂಡ-ಹೆಂಡತಿ ಶವ ಪತ್ತೆಯಾಗಿದ್ದು, ಇಂದು ಪುತ್ರಿ ಶವ ಕೂಡ ಪತ್ತೆಯಾಗಿದೆ.

ಆನ್ಲೈನ್ ರಮ್ಮಿ ಗೇಮ್ ಗೀಳಿಗೆ ಬಿದ್ದಿದ್ದ ಮನೆ ಯಜಮಾನ

ಎರಡು ಸ್ವಂತದ ಕಾರ್ ಇಟ್ಟುಕೊಂಡು ಚಾಲಕನಾಗಿ ಚೆನ್ನಾಗಿಯೇ ಜೀವನ ಸಾಗಿಸುತ್ತಾ ಬೆಂಗಳೂರಿನಲ್ಲಿದ್ದ ಶ್ರೀನಿವಾಸ್​ಗೆ ಶಿಕ್ಷಕಿಯಾಗಿದ್ದ ಪತ್ನಿ ಕೂಡ ದುಡಿಮೆಗೆ ಸಾಥ್ ಕೊಟ್ಟಿದ್ದರು. ವಾಸಕ್ಕೆ ಚನ್ನರಾಯಪಟ್ಟಣದಲ್ಲಿ ಒಂದು ಸ್ವಂತ ಮನೆ ಕೂಡ ಇತ್ತು. ಆದ್ರೆ, ಮೊಬೈಲ್ ಜಾಹೀರಾತು ನೋಡಿ ಆನ್ಲೈನ್ ರಮ್ಮಿ ಗೇಮ್ ಗೀಳಿಗೆ ಬಿದ್ದ ಶ್ರೀನಿವಾಸ್, ಕಾರು ಮತ್ತು ಮನೆ ಎಲ್ಲವನ್ನು ಮಾರಿಕೊಂಡು ಬೀದಿಪಾಲಾಗಿದ್ದ, ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿ ಆಟ ಆಡುವುದಕ್ಕೆ ಶುರುಮಾಡಿದ್ದ. ಕೆಲಸಬಿಟ್ಟು ಆನ್ಲೈನ್ ಗೇಮ್​ಗೆ ಸೀಮಿತವಾಗಿ ಸಾಲ ಹೆಚ್ಚಾದಾಗ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ಇತ್ತೀಚಿನವರೆಗೂ ಬೆಂಗಳೂರಿನಲ್ಲಿ ಸೆಟಲ್ ಆಗಿದ್ದ ಶ್ರೀನಿವಾಸ್ ಕುಟುಂಬ ಚನ್ನಾಗಿಯೇ ಇತ್ತು. ಕೈತುಂಬ ದುಡಿದು ಸಂಸಾರ ಸಾಗಿಸುತ್ತಿದ್ದ ಶ್ರೀನಿವಾಸ್, ಇತ್ತೀಚೆಗೆ ಆನ್ಲೈನ್ ರಮ್ಮಿ ಗೀಳಿಗೆ ಬಿದ್ದಿದ್ದ. ಅಲ್ಪ ಅವಧಿಯಲ್ಲಿ ಲಕ್ಷ ಲಕ್ಷ ಹಣ ಗಳಿಸುವ ದುರಾಸೆಯ ಜಾಹೀರಾತಿನ ಕರಾಮತ್ತಿಗೆ ಮರುಳಾಗಿ ಇದ್ದಿದೆಲ್ಲವನ್ನು ಕಳೆದುಕೊಂಡು ಬರಿಗೈ ಆಗಿದ್ದ. ಕಾರು, ಮನೆ ಎಲ್ಲವನ್ನು ಮಾರಾಟ ಮಾಡಿ ದುಡಿಯೋದನ್ನೆ ನಿಲ್ಲಿಸಿಬಿಟ್ಟಿದ್ದ. ಬೆಂಗಳೂರು ಬಿಟ್ಟು ಚನ್ನರಾಯಪಟ್ಟಣಕ್ಕೆ ಬಂದು ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಸೇರಿಕೊಂಡಿದ್ದ ಪತ್ನಿ ಶ್ವೇತಾ, ದುಡಿದು ಸಂಸಾರ ಸಾಗಿಸುತ್ತಿದ್ದರು. ಆದ್ರೆ, ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿ ಆನ್ಲೈನ್ ಗೇಮ್ ಆಡಿ ಸಾಲಗಾರನಾದ ಶ್ರೀನಿವಾಸ್, ಸಾಲಗಾರರ ಕಾಟ ಹೆಚ್ಚಾದಾಗ ನೆಮ್ಮದಿ ಕಳೆದುಕೊಂಡಿದ್ದ. ಮಾಡಿದ ಸಾಲ ತೀರಿಸಲಾಗದೆ ಮಡದಿ ಹಾಗೂ ಮಗಳ ಜೊತೆಗೆ ಮನೆಬಿಟ್ಟು ಹೋಗಿ ಹೇಮಾವತಿ ಕಾಲುವೆಗೆ ಬಿದ್ದಿದ್ದಾನೆ.

ಶನಿವಾರದಿಂದಲೇ ಶ್ರೀನಿವಾಸ್ ಕುಟುಂಬ ಕಾಣುತ್ತಿಲ್ಲ ಎನ್ನುವುದನ್ನ ತಿಳಿದಾಗ ಮನೆಯವರು ಮಂಗಳವಾರ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಮೃತದೇಹಗಳು ಪತ್ತೆಯಾಗಿದ್ದು, ಮೊದಲು ಮಿಸ್ಸಿಂಗ್ ದೂರು ಕೊಟ್ಟಿದ್ದ ಸಂಬಂಧಿಕರು ಇದೀಗ ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರು ನೀಡಿದ್ದಾರೆ. ಸಾಲ ಕೊಟ್ಟವರು ಯಾರಾದರೂ ಕಿರುಕುಳ ಕೊಟ್ಟಿದ್ದರಾ?, ಅಥವಾ ಬೇರೆ ಏನಾದರೂ ಒತ್ತಡ ಇತ್ತೇ ಎನ್ನುವುದು ಸೇರಿ ಎಲ್ಲ ಆ್ಯಂಗಲ್​ನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನ ಹೊರ ತೆಗೆದು ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ.

ಒಟ್ಟಿನಲ್ಲಿ ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಮರುಳಾಗಿ ಕಷ್ಟಪಟ್ಡು ದುಡಿಯೋದು ಬಿಟ್ಟು, ಮೊಬೈಲ್ ಹಿಡಿದು ಆಟಕ್ಕೆ ಕುಂತ ಮನೆ ಯಜಮಾನ ಎಲ್ಲವನ್ನು ಕಳೆದುಕೊಂಡು ಬರಿಗೈ ಆಗಿದ್ದ. ಮಾಡಿದ ಸಾಲಕ್ಕೆ ಇದ್ದದ್ದನ್ನೆಲ್ಲಾ ಮಾರಾಟ ಮಾಡಿದವನು ಕುಟುಂಬ ಸಮೇತವಾಗಿ ಜೀವವನ್ನು ಕಳೆದುಕೊಂಡಿದ್ದಾನೆ. ಆನ್ಲೈನ್ ಗೇಮ್​ಗಳ ಹಾವಳಿಗೆ ಹಲವು ಕುಟುಂಬಗಳು ಬೀದಿಪಾಲಾಗ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ