AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಪತ್ನಿ ಚೆನ್ನಮ್ಮಗೆ ಐಟಿ ನೋಟಿಸ್: ಕಬ್ಬಿನ ಗದ್ದೆ ನೋಡಬೇಕಿತ್ತು ಎಂದ ರೇವಣ್ಣ

ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ. ಅದನ್ನು ನೋಡದೆ ನಮ್ಮ ತಾಯಿಗೆ ನೊಟೀಸ್ ಕೊಟ್ಟಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್​.ಡಿ.ರೇವಣ್ಣ ಹೇಳಿದರು.

ದೇವೇಗೌಡರ ಪತ್ನಿ ಚೆನ್ನಮ್ಮಗೆ ಐಟಿ ನೋಟಿಸ್: ಕಬ್ಬಿನ ಗದ್ದೆ ನೋಡಬೇಕಿತ್ತು ಎಂದ ರೇವಣ್ಣ
ಪತ್ನಿ ಚೆನ್ನಮ್ಮ ಅವರೊಂದಿಗೆ ಎಚ್​.ಡಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 29, 2022 | 7:56 AM

Share

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (HD Devegowda Wife Chennamma) ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ ಎಂದು ಶಾಸಕ ಎಚ್.ಡಿ.ರೇವಣ್ಣ (HD Revanna) ಹೇಳಿದರು. ‘ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ. ಅದನ್ನು ನೋಡದೆ ನಮ್ಮ ತಾಯಿಗೆ ನೊಟೀಸ್ ಕೊಟ್ಟಿದ್ದಾರೆ. ಆರ್‌ಟಿಒದಲ್ಲಿ ನೂರಾರು ಕೋಟಿ ರೂಪಾಯಿ ಆಸ್ತಿ ಸಂಪಾದನೆ ಮಾಡಿರುವವರಿಗೆ ಏಕೆ ನೋಟಿಸ್ ಕೊಟ್ಟಿಲ್ಲ. ನಾವ್ಯಾರೂ ಅಕ್ರಮ ಮಾರ್ಗದಲ್ಲಿ ಆಸ್ತಿ ಸಂಪಾದಿಸಿಲ್ಲ. ಈ ನೊಟೀಸ್​ಗೆ ಕಾನೂನು ಪ್ರಕಾರ ಉತ್ತರ ನೀಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಅಸ್ತಿ ವಿವರದ ಬಗ್ಗೆ ಮಾಹಿತಿ ಕೇಳಿ ಐಟಿ ನೋಟಿಸ್ ನೀಡಿದ್ದಾರೆ. ನಾನು ಆಲೂಗಡ್ಡೆ ಬೆಳೆದಿದ್ದೆ, ಈಗ ಕಬ್ಬು ಬೆಳೆದಿದ್ದೇನೆ. ಬೇಕಿದ್ದರೆ ನನಗೆ ಐಟಿ ನೋಟಿಸ್ ಕೊಡಲಿ ಅದಕ್ಕೇನೂ ಇಲ್ಲ ಎಂದು ನುಡಿದರು. ಒಬ್ಬೊಬ್ಬ ಆರ್​ಟಿಒ ನೂರು ಇನ್ನೂರು ಕೋಟಿಗಟ್ಟಲೆ ದುಡಿದಿದ್ದಾರೆ. ಇವರು ಕೆಲಸಕ್ಕೆ ಸೇರಿದಾಗ ಎಷ್ಟು ಆಸ್ತಿ ಇತ್ತು? ಆಮೇಲೆ ಎಷ್ಟಾಯ್ತು? ಅವರಿಗೆ ನೋಟಿಸ್ ಯಾರು ಕೊಡೋದು? ದ್ವೇಷದ ರಾಜಕಾರಣ ಯಾವ ಮಟ್ಟಿಗೆ ಇದೆ ನೋಡಿ ಎಂದು ಕಿಡಿಕಾರಿದರು.

ಜೆಡಿಎಸ್​ನವರನ್ನು ಹುಡುಕಿ ನೊಟೀಸ್ ಕೊಡುತ್ತಿದ್ದಾರೆ. ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಗುಡುಗಿದರು. ಜಿಲ್ಲೆಯ ದೊಡ್ಡಪುರ, ಪಡುವಲಹಿಪ್ಪೆ ಸಮೀಪದ ಗದ್ದೆಯಲ್ಲಿ ನಮ್ಮ ಗದ್ದೆಯಿದೆ. ಡ್ರೋಣ್ ಸರ್ವೆ ಮಾಡಿಸಿ, ನಾವು ಏನು ಬೆಳೆಯುತ್ತಿದ್ದೇವೆ ಎನ್ನುವುದನ್ನು ಕಂಡುಕೊಳ್ಳಲಿ ಎಂದು ಸವಾಲು ಹಾಕಿದರು.

ನಾವೇನೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿಲ್ಲ. ಕಾನೂನು ಪ್ರಕಾರ ನಡೆದುಕೊಂಡರೆ ನನಗೆ ಯಾವ ಅಭ್ಯಂತರವೂ ಇಲ್ಲ. ನಾನೂ ಅದೇ ರೀತಿಯಲ್ಲಿ ಉತ್ತರ ಕೊಡುತ್ತೇನೆ. ಆರ್​ಟಿಒದಲ್ಲಿ ಲೂಟಿ ಮಾಡಿ, ಈಗ ರಾಜೀನಾಮೆ ಕೊಟ್ಟು ರಾಜಕೀಯಕ್ಕೆ ಕೆಲವರು ಬಂದಿದ್ದಾರೆ. ಅವರು ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಗುಡುಗಿದರು.

ನನಗೇನೂ ಗೊತ್ತಿಲ್ಲ: ಎಚ್​ಡಿಕೆ

ತಮ್ಮ ತಾಯಿಗೆ ನೊಟೀಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ‘ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಇದ್ದಂತೆ. ದೇವೇಗೌಡರು ಎಂದೂ ಹಣಕ್ಕೆ ಮಹತ್ವ ಕೊಟ್ಟವರಲ್ಲ. ನೊಟೀಸ್​ಗೆ ಉತ್ತರ ಕೊಡುತ್ತೇವೆ. ಇದರಲ್ಲಿ ರಾಜಕೀಯ ಮಾಡಬಾರದು’ ಎಂದರು.

ಇದನ್ನೂ ಓದಿ: ಹಿಂದೂ ಮುಸ್ಲಿಂ ಎಂದು ಯಾರಾದ್ರು ಅಡೆತಡೆ ಮಾಡಿದ್ರೆ..: ಹಾಸನದಲ್ಲಿ ಗುಡುಗಿದ ಹೆಚ್.ಡಿ ರೇವಣ್ಣ

ಇದನ್ನೂ ಓದಿ: ಸಂಸದರಾಗಿ ಮಂಡ್ಯಕ್ಕೆ ಸುಮಲತಾರ ಕೊಡುಗೆ ಏನು: ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

Published On - 7:45 am, Tue, 29 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ