AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪಾನ ಪ್ರಿಯರಿಗೂ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು: ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ಒತ್ತಾಯ

ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹಿಸಿದ್ದಾರೆ.

ಮದ್ಯಪಾನ ಪ್ರಿಯರಿಗೂ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು: ಮದ್ಯಪಾನ ಪ್ರಿಯರ  ಹೋರಾಟ ಸಂಘದ ಅಧ್ಯಕ್ಷ ಒತ್ತಾಯ
ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 24, 2022 | 9:27 PM

ಹಾಸನ: ಮದ್ಯಪಾನಿಗಳಿಗು ಸರ್ಕಾರ (Government) ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ (Alcohol) ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ.

ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು, ಮದ್ಯಪ್ರಿಯರು ಎಂದು ಕರೆಯಬೇಕು ಎಂದು ಒತ್ತಾಯಿಸಿದರು. ಮದ್ಯಪಾನ ಪ್ರಿಯರಿಗೆ ಇನ್ಶೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು. ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು, ಅಕಸ್ಮಾತ್ ಕುಡಿದು ಹೆಚ್ಚಾಗಿ ಬಾರ್‌ನಲ್ಲಿ ಮಲಗಿದರೆ ಅವರನ್ನು ಹೊರಗೆ ಕಳುಹಿಸಬಾರದು, ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ಅವಕಾಶ ನೀಡಬೇಕು ಎಂದು ತಮ್ಮ ಹಕ್ಕೊತ್ತಾಯ ಮಾಡಿದರು.

ಇದನ್ನೂ ಓದಿ:  ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ

ಇದಿಷ್ಟೇ ಅಲ್ಲದೆ ರಾಜ್ಯದಲ್ಲಿ ಮದ್ಯಪಾನ ನಿಗಮ ಮಂಡಳಿ ರಚಿಸಬೇಕು, ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸಬೇಕು. ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:52 pm, Sat, 24 December 22

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?