AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ

ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಬಗರ್ ಹುಕುಂ ಭೂಮಿ ಮಂಜೂರಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ
Jds Ex Mla Lingesh
ಮಂಜುನಾಥ ಕೆಬಿ
| Edited By: |

Updated on:Jun 19, 2026 | 2:56 PM

Share

ಹಾಸನ, (ಜೂನ್ 19): ಅಕ್ರಮವಾಗಿ ಬಗರ್ ಹುಕುಂ ಜಮೀನು (bagar hukum Land) ಮಂಜೂರಾತಿ ಮಾಡಿ ಆರೋಪದಲ್ಲಿ ಹಾಸನ (Hassan) ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು, ಇಂದು (ಜೂನ್ 19) ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲೇ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಖ್ಯಾಂಶಗಳು

  • ಬೇಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶಕ್ಕೆ
  • ಬೆಂಗಳೂರಿನಿಂದ ಬಂದು ವಿಚಾರಣೆಗೆ ಕರೆದೊಯ್ದ ಸಿಐಡಿ ಪೊಲೀಸರು
  • ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ಆರೋಪ
  • ಅಕ್ರಮವಾಗಿ ಮಾಜಿ ಶಾಸಕ ಲಿಂಗೇಶ್ ಭೂಮಂಜೂರಾತಿ ಆರೋಪ
  • ಬೇಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
  • ಕೋಲಾರದ RTI ಕಾರ್ಯಕರ್ತ ರಮೇಶ್‌ಕುಮಾರ್ ನೀಡಿದ್ದ ದೂರು

2018ರಲ್ಲಿ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್, ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತಿರಿಸಲಾಗಿತ್ತು.

ದೂರಿನಲ್ಲಿ ಸುಮಾರು 2750 ಎಕರೆ ಸರ್ಕಾರಿ ಜಮೀನನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ವಿವಿಧ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರದ ಬಂಧನ ಭೀತಿ ಎದುರಾಗುತ್ತಿದ್ದಂತೆಯೇ ಲಿಂಗೇಶ್ ಹಾಗೂ ಇತರರು ಅವರು ತಮ್ಮ ವಿರುದ್ಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Fri, 19 June 26

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್