AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣ ಕುಟುಂಬಕ್ಕೆ ಮುಂದುವರಿದ ಕಂಟಕ: ಈಗೆಲ್ಲಿದ್ದಾರೆ ಹೆಚ್​ಡಿ ರೇವಣ್ಣ, ಭವಾನಿ, ಸೂರಜ್?

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ, ಅವರ ಪತ್ನಿ ಭವಾನಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದಾಗ್ಯೂ, ಅವರು ಹಾಸನ, ಕೆಆರ್​ ನಗರ ಪ್ರವೇಶಿಸುವಂತಿಲ್ಲ. ಈಗ ಸೂರಜ್ ವಿರುದ್ಧವೂ ಲೈಂಗಿಕ ದೌರ್ಜನ್ಯ ಪ್ರಕರಣ ಕೇಳಿಬಂದಿದೆ. ಈಗ ರೇವಣ್ಣ ಹಾಗೂ ಇತರರು ಎಲ್ಲಿದ್ದಾರೆ? ಇಲ್ಲಿದೆ ವಿವರ.

ರೇವಣ್ಣ ಕುಟುಂಬಕ್ಕೆ ಮುಂದುವರಿದ ಕಂಟಕ: ಈಗೆಲ್ಲಿದ್ದಾರೆ ಹೆಚ್​ಡಿ ರೇವಣ್ಣ, ಭವಾನಿ, ಸೂರಜ್?
ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.
ಮಂಜುನಾಥ ಕೆಬಿ
| Updated By: Ganapathi Sharma|

Updated on: Jun 22, 2024 | 6:17 PM

Share

ಹಾಸನ, ಜೂನ್ 22: ಮಾಜಿ ಸಚಿವ ಹೆಚ್​​ಡಿ ರೇವಣ್ಣ (HD Revanna) ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬಳಿಕ ಸೂರಜ್ ರೇವಣ್ಣ (Suraj Revanna) ಮೇಲೂ ಗಂಭೀರ ಆರೋಪ ಕೇಳಿಬಂದಿದೆ.‌ ಹಾಸನದ ಎಂಎಲ್​​​ಸಿ ವಿರುದ್ಧ ಅಸ್ವಾಭಾವಿಕ ಲೈಂಗಿಕ‌ ದೌರ್ಜನ್ಯ ಆರೋಪಿಸಿ ಅರಕಲಗೂಡು ಮೂಲದ ಯುವಕನೊಬ್ಬ ದೂರು ನೀಡಿದ್ದು, ಠಾಣೆಗೆ ಹಾಜರಾಗಿ ಹೇಳಿಕೆ ದಾಖಲು ಮಾಡಿದ್ದು ನ್ಯಾಯ ಒದಗಿಸುವಂತೆ ಸಿಎಂ, ಗೃಹಸಚಿವರು, ಡಿಐಜಿಗೆ ಕೂಡ ಮನವಿ ಮಾಡಿದ್ದಾರೆ. ಮತ್ತೊಂದೆಡೆ ಸಂತ್ರಸ್ತ ಯುವಕನ ಮೇಲೂ ಕೂಡ ಐದು ಕೋಟಿಗಾಗಿ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಇದ್ದಾರೆ. ಆದರೆ, ಹಾಸನ ಮತ್ತು ಕೆಆರ್​ ನಗರಕ್ಕೆ ತೆರಳದಂತೆ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಹೀಗಾಗಿ ಸದ್ಯ ರೇವಣ್ಣ ಅವರ ಹೊಳೆನರಸೀಪುರದಲ್ಲಿನ ನಿವಾಸ ಹಾಗೂ ಹಾಸನದಲ್ಲಿನ ಕ್ವಾರ್ಟರ್ಸ್​ನಲ್ಲಿ ಸಿಬ್ಬಂದಿ ಮಾತ್ರ ಇದ್ದಾರೆ. ನ್ಯಾಯಾಲಯದ ನಿರ್ಬಂಧದ ಕಾರಣ ಊರಿಗೆ ತೆರಳಲಾಗದೆ ಇರುವ ರೇವಣ್ಣ ಹಾಗೂ ಭವಾನಿ ಬೆಂಗಳೂರಿನ ನಿವಾಸದಲ್ಲಿದ್ದಾರೆ. ಮತ್ತೊಂದೆಡೆ, ಲೈಂಗಿಕ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೆಯೇ ಸೂರಜ್ ರೇವಣ್ಣ ಸಹ ಬೆಂಗಳೂರಿಗೆ ತೆರಳಿದ್ದಾರೆ.

ಸೂರಜ್ ವಿರುದ್ಧದ ದೂರಿನಲ್ಲೇನಿದೆ?

ಅರಕಲಗೂಡು ಮೂಲದ ಯುವಕ ನೀಡಿದ 14 ಪುಟದ ದೂರಿನಲ್ಲಿ ಗಂಭೀರವಾದ ಆರೋಪಗಳನ್ನು ಸೂರಜ್ ರೇವಣ್ಣ ಮೇಲೆ ಮಾಡಿದ್ದಾರೆ.‌ ಸೂರಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ, ಗೃಹಸಚಿವರು, ಡಿಐಜಿ ಕಚೇರಿ ಹಾಗೂ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸೂರಜ್ ಹಾಗೂ ನನಗೂ ಪರಿಚಯ ಆಯ್ತು, ಆಗ ನನ್ನ ಮೊಬೈಲ್ ನಂಬರನ್ನು ತೆಗೆದುಕೊಂಡು ವಾಟ್ಸಾಪ್ ನಲ್ಲಿ ಚಾಟಿಂಗ್ ಮಾಡ್ತಾ ಇದ್ರು. ಪ್ರತಿ ಬಾರಿ‌ ಮೆಸೇಜ್ ಮಾಡಿದಾಗಲೂ ಹಾರ್ಟ್ ಸಿಂಬಲ್ ಸೇರಿಸಿ ಸೂರಜ್ ಮೆಸೇಜ್ ಕಳಿಸ್ತಾ ಇದ್ದರು ಅಂತಾ ದೂರಿಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಭಾನುವಾರ ಜೂನ್ 16 ರಂದು ಮಾತನಾಡೋ ಸಲುವಾಗಿ ಗನ್ನಿಕಡ ತೋಟಕ್ಕೆ ಕರೆಸಿಕೊಂಡ ಸೂರಜ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ, ಸುದೀರ್ಘ ದೂರಿನಲ್ಲಿ ತಮ್ಮ ಮೇಲೆ ನಡೆದ ದೌರ್ಜನ್ಯ ವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿರೊ ಸಂತ್ರಸ್ತ, ವೀಡಿಯೋ ಹೇಳಿಕೆ ಬಿಡುಗಡೆ ಮಾಡೋ ಮೂಲಕವೂ ತನ್ನ ಮೇಲೆ ನಡೆದ ಅಮಾನುಷ ದೌರ್ಜನ್ಯ ವಿವರಿಸಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭ ಶುರುವಾದ ಸಮಸ್ಯೆ

ಲೋಕಸಭಾ ಚುನಾವಣಾ ವೇಳೆಯಲ್ಲಿ ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದ ಸಂತ್ರಸ್ತನಿಗೆ ಊರಿಗೆ ಸೂರಜ್ ಬಂದಿದ್ದ ವೇಳೆ ಪರಿಚಯ ಆಗಿದ್ದರಂತೆ. ಆ ಸಂದರ್ಭದಲ್ಲಿ ನಂಬರ್ ತೆಗೆದುಕೊಂಡಿದ್ದ ಸೂರಜ್ ಪದೆ ಪದೆ ಮೆಸೇಜ್ ಮಾಡುತ್ತಿದ್ದರು, ಮಾತನಾಡಲು ಕರೆಸಿ ದೌರ್ಜನ್ಯ ನಡೆಸಿದ್ದರು. ಇದನ್ನ ವಿರೋದಿಸಿದಾಗ ನನಗೇ ಬೆದರಿಸಿ ಕೊಲೆ ಮಾಡೊದಾಗಿ ಹೆದರಿಸಿದ್ದರು ಎಂದೂ ಕೂಡ ಆರೋಪಿಸಿದ್ದಾರೆ.

ಶುಕ್ರವಾರ ದೂರು ನೀಡಿದ್ದ ಸಂತ್ರಸ್ತ ಇಂದು ಸಂಜೆ 5 ಗಂಟೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಹಾಜರಾಗಿ ಹೇಳಿಕೆ ದಾಖಲು ಮಾಡಿದ್ದಾರೆ. ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನ್ಯಾಯಕ್ಕಾಗಿ ಹೋರಾಡಬೇಕು ಅಂತಾ ಬೆಂಗಳೂರಿಗೆ ಬಂದು ದೂರು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಯುವಕನ ಮೇಲೆ ಲೈಂಗಿಕ ಅತ್ಯಾಚಾರ ನಡೆದ ಸ್ಥಳ ಎನ್ನಲಾಗುತ್ತಿರುವ ಸೂರಜ್ ರೇವಣ್ಣ ಫಾರ್ಮ್ ಹೌಸ್ ದೃಶ್ಯಗಳು ಲಭ್ಯ

ಈ ಮಧ್ಯೆ, ಶುಕ್ರವಾರ ಸಂಜೆ ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದ ಎಂಎಲ್​​ಸಿ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತ ಯುವಕ ಕೆಲಸ ಕೇಳಿಕೊಂಡು ಸೂರಜ್ ಅವರ ತೋಟದ ಮನೆಗೆ ಹೋಗಿ ಕೆಲಸ ಕೊಡಿಸಲಿಲ್ಲ ಎಂದು ಸಿಟ್ಟಾಗಿ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡ್ತೇನೆ, ಮಾಡಬಾರದು ಎಂದರೆ ಐದು ಕೋಟಿ ರೂಪಾಯಿ ಹಣ ಕೊಡಿ ಎಂದು ಬ್ಲಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಿದ್ದಾರೆ. ಈ ದೂರು ಆದರಿಸಿ ನೆನ್ನೆಯೇ ಎಫ್​​ಐಆರ್ ಕೂಡ ದಾಖಲಾಗಿ ಈ ಕೇಸ್​​​ನಲ್ಲಿಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸೂರಜ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು ಅವರು ಶುಕ್ರವಾರವೇ ತಮ್ಮ ತೋಟದ ಮನೆಯಿಂದ ಬೆಂಗಳೂರಿಗೆ ಹೋಗಿದ್ದಾರೆ ಎಂದು ತೋಟದ ಮನೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!