AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜನರೆದುರೇ ತಾ.ಪಂ. ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಜಿಲ್ಲಾಧಿಕಾರಿಗೂ ವಾರ್ನ್ ಮಾಡಿದ ಜೆಡಿಎಸ್​ ಶಾಸಕ ರೇವಣ್ಣ

ಹಾಸನ: ಹಾಸನ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗೆ (ಇಒ) ಜೆಡಿಎಸ್​ ಶಾಸಕ ಹೆಚ್​ ಡಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡು, ಜಿಲ್ಲಾಧಿಕಾರಿಗೆ ಖಡಕ್ ವಾರ್ನಿಂಗ್​ ಕೊಟ್ಟ ಪ್ರಸಂಗ ನಡೆದಿದೆ. ಏಯ್ ಬಾರೋ ಇಲ್ಲಿ, ಯಾವನು ಇಓ ಎಂದು ಏಕವಚನದಲ್ಲಿ ಕಾರ್ಯ ನಿರ್ವಹಣಾಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕರೀ ರಿ, ಅವನ್ಯಾರು ಇಓ? ಎಂದು ಡಿಸಿಗೆ ವಾರ್ನ್ ಮಾಡಿದ್ದಾರೆ ರೇವಣ್ಣ. ಜಿಲ್ಲಾಧಿಕಾರಿ ಕಛೇರಿ ಎದುರು ರೇವಣ್ಣ ಕೆಂಡಾಮಂಡಲರಾದ ಪ್ರಸಂಗ ನಡೆಯಿತು. ಸಂದರ್ಭ: ಕೆಂಚಟ್ಟಹಳ್ಳಿ ಬಳಿ ಟ್ರಕ್ ಟರ್ಮಿನಲ್ ನಿರ್ಮಾಣ […]

ಹಾಸನ ಜನರೆದುರೇ ತಾ.ಪಂ. ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಜಿಲ್ಲಾಧಿಕಾರಿಗೂ ವಾರ್ನ್ ಮಾಡಿದ ಜೆಡಿಎಸ್​ ಶಾಸಕ ರೇವಣ್ಣ
ಹಾಸನ: ತಾಲ್ಲೂಕು ಪಂಚಾಯ್ತಿ ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಡಿಸಿಗೆ ವಾರ್ನ್ ಮಾಡಿದ ರೇವಣ್ಣ
TV9 Web
| Edited By: |

Updated on:Apr 26, 2022 | 3:16 PM

Share

ಹಾಸನ: ಹಾಸನ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗೆ (ಇಒ) ಜೆಡಿಎಸ್​ ಶಾಸಕ ಹೆಚ್​ ಡಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡು, ಜಿಲ್ಲಾಧಿಕಾರಿಗೆ ಖಡಕ್ ವಾರ್ನಿಂಗ್​ ಕೊಟ್ಟ ಪ್ರಸಂಗ ನಡೆದಿದೆ. ಏಯ್ ಬಾರೋ ಇಲ್ಲಿ, ಯಾವನು ಇಓ ಎಂದು ಏಕವಚನದಲ್ಲಿ ಕಾರ್ಯ ನಿರ್ವಹಣಾಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕರೀ ರಿ, ಅವನ್ಯಾರು ಇಓ? ಎಂದು ಡಿಸಿಗೆ ವಾರ್ನ್ ಮಾಡಿದ್ದಾರೆ ರೇವಣ್ಣ. ಜಿಲ್ಲಾಧಿಕಾರಿ ಕಛೇರಿ ಎದುರು ರೇವಣ್ಣ ಕೆಂಡಾಮಂಡಲರಾದ ಪ್ರಸಂಗ ನಡೆಯಿತು.

ಸಂದರ್ಭ: ಕೆಂಚಟ್ಟಹಳ್ಳಿ ಬಳಿ ಟ್ರಕ್ ಟರ್ಮಿನಲ್ ನಿರ್ಮಾಣ ವಿಚಾರ. ವಿವಿ ಕ್ಯಾಂಪಸ್ ಬಳಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಹೆಚ್​ ಡಿ ರೇವಣ್ಣ ಕಿಡಿ ಕಿಡಿಯಾದರು. ಏಯ್ ನೀನು ದನ ಕಾಯೋಕೆ ಹೋಗು. ಹೆಣ್ಮಕ್ಕಳ ಕಾಲೇಜು ಬಳಿ ಇದನ್ನು ಮಾಡೋಕೆ ಬಿಟ್ಟಿದ್ದಾರಾ? ಡಿಸಿ ಯಾರದ್ದಾದರೂ ಮನೆಗೆ ನುಗ್ಗು ಅಂದ್ರೆ ನುಗ್ತೀಯಾ? ಲೈಸೆನ್ಸ್ ತಗೊಳದೆ ಕಟ್ಟಡ ಕಟ್ಟೋಕೆ ಹೇಗೆ ಬಿಟ್ಟಿದ್ದೀಯಾ? PDO ಹೆದರಿಸಿ ನೀನು ಲೈಸೆನ್ಸ್ ಕೊಡೋಕೆ ಹೊರಟಿದ್ದೀಯಾ? ನೀವು, ಡಿಸಿ ಅದೆಷ್ಟು ಹೆಣ ಬೀಳಿಸ್ತೀರೋ ಬೀಳಿಸಿ ನೋಡೋಣ. ಬರೀ ಜನ ವಿರೋಧಿ ಯೋಜನೆ ಮಾಡ್ತೀರಾ ಎಂದು ರೇವಣ್ಣ ಕಿಡಿಯಾದರು. ನಿಮಗೆ ಕೇಳೋರಿಲ್ಲ ಹೇಳೋರಿಲ್ಲ ಎಂಬಂತಾಗಿದೆ ಎಂದು ಡಿಸಿ ಕಚೇರಿಯಲ್ಲಿ ಜನರ ಎದುರೇ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ಡಿಸಿ ಕಛೇರಿ ಎದುರು ಕೆಂಡಾಮಂಡಲರಾದ ರೇವಣ್ಣ ಎಯ್ ನೀನು ದನ ಕಾಯೋಕೆ ಹೋಗು, ನೀನು ದನದ ಡಾಕ್ಟರ್ ನೀನು. ಅವನ್ಯಾರೋ ಕರಿಯಯ್ಯ ಡಿಸಿನಾ. ನಾನ್ ತಂದು ಹಾಕಿರೋದು ನಿನ್ನನ್ನು. ನೀನು ದನದ ಡಾಕ್ಟರ್. ದನಕ್ಕೆ ಇಂಜೆಕ್ಷನ್‌ ಕೊಡೋನು ನೀನು, ನಿನಗೇನು ಗೊತ್ತಿದೆ? ಟ್ರಕ್ ಟರ್ಮಿನಲ್ ಗೆ ಭೂಮಿ ಮಂಜೂರಾಗಿರೊ ಬಗ್ಗೆ ವಿವರಿಸಲು ಮುಂದಾದ ಇಒ ಯಶ್ವಂತ್ ಅವರನ್ನು ಹಿಗ್ಗಾಮುಗ್ಗ ಬೈಗುಳ ಸುರಿಸಿದರು. ಪಿಡಿಒ ಹೆದರಿಸಿ ನೀನು ಲೈಸೆನ್ಸ್ ಕೊಡೋಕೆ ಹೊರಟಿದ್ದೀಯಾ ಎಂದು ಗುಡುಗಿದರು. ಕೊನೆಗೆ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೂತು ಚರ್ಚೆ ಮಾಡೊಣ ಎಂದು ರೇವಣ್ಣರನ್ನ ಸಮಾಧಾನಪಡಿಸಿದರು ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿದರು.

ಯಾವಂದಾರು ಮನೆಗೆ ಹೋಗಿ ಜೀತಕ್ಕೆ ಇದ್ದುಬಿಡಿ ಎಂದು ಅಸಮಧಾನ ಹೊರಹಾಕಿದ ರೇವಣ್ಣ, ಅನುಮತಿಯೇ ಇಲ್ಲದೆ ಅದೆಂಗೆ ಖಾಸಗಿಯವರು ಅಲ್ಲಿ ಕೆಲಸ ಮಾಡ್ತಾರೆ? ವಿವಿ ಕೇಂದ್ರದವರು ಅರ್ಜಿ ಕೊಟ್ಟರೂ ಯಾಕೆ ಭೂಮಿ ಮಂಜೂರು ಮಾಡಿಲ್ಲ? ಇವರು ಅರ್ಜಿ ಹಾಕಿದ ತಕ್ಷಣ ಹೇಗೆ ಮಂಜೂರು ಮಾಡಿದಿರಾ? ಎಂದು ಆಕ್ರೋಶ ಹೊರಹಾಕಿದ ರೇವಣ್ಣ ಉಸ್ತುವಾರಿ ಸಚಿವರು ಬರೋವರೆಗೆ ಕೆಲಸ ನಿಲ್ಲಿಸಿ ಎಂದು ಆಗ್ರಹ ಮಾಡಿದರು.

Hassan DC ಮುಂದೆನೇ EO ಗೆ H.D Revanna ತರಾಟೆ, DC ಗೂ ಕ್ಲಾಸ್

Published On - 6:49 pm, Mon, 25 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!