AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಅವನು ಒಳ್ಳೆ ಹುಡುಗ ಎಂದ ರೇವಣ್ಣ: ಜೈಲಿನಲ್ಲಿರುವ ಮಗನ ಕುರಿತು ತಂದೆಯ ಮರುಕ

ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ನೆನೆದು ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಮರುಕ ವ್ಯಕ್ತಪಡಿಸಿದ್ದಾರೆ. ಹಾಗೇ ಪ್ರತಿಕಾರದ ಮಾತುಗಳನ್ನೂ ಆಡಿದ್ದಾರೆ.

ಮಂಜುನಾಥ ಕೆಬಿ
| Edited By: |

Updated on:Sep 20, 2024 | 10:53 AM

Share

ಹಾಸನ, ಸೆಪ್ಟೆಂಬರ್​ 20: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ವಿಚಾರವಾಗಿ ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಮರುಕ ವ್ಯಕ್ತಪಡಿಸಿದ್ದಾರೆ. “ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಅವನು ಒಳ್ಳೆ ಹುಡುಗ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ” ಎಂದು ಪ್ರತಿಕಾರದ ಮಾತುಗಳನ್ನು ಆಡಿದ್ದಾರೆ.

ಹಾಸನದ ಆಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅವರು ನನ್ನ ಕೈಗೆ ಸಿಗ್ದಲೆ ಎಲ್ಲಿ ಹೋಗುತ್ತಾರೆ. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ ಎಂದರು.

ಇದನ್ನೂ ಓದಿ: ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜಿ.ಪಂ ಮಾಜಿ ಸದಸ್ಯೆಗೆ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ

ಹಾಸನದಲ್ಲಿ ಜೆಡಿಎಸ್​ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್‌ ಅವರನ್ನು ನಾಲ್ಕು ಬಾರಿ ಜನ ಗೆಲ್ಲಿಸಿದ್ದಾರೆ. ಆದರೆ, 2013ರಲ್ಲಿ ಅಲ್ಪಸಂಖ್ಯಾತರಿಂದ ಹೆಚ್​ಎಸ್​ ಪ್ರಕಾಶ್ ಸೋತರು. 2023ರ ಚುನಾವಣೆಯಲ್ಲಿ ಹಾಸನದಲ್ಲಿ 50 ಸಾವಿರ ಓಟಿಗೆ ಒಂದು ಓಟು ಕಡಿಮೆಯಾದರೆ ರಾಜೀನಾಮೆ ಕೊಡುತ್ತೇನೆ ಅಂಥ ಸವಾಲು ಇತ್ತು.

ಹೀಗಾಗಿ, ನಾನೇ (ಹೆಚ್​ಡಿ ರೇವಣ್ಣ) ಹಾಸನ ಕ್ಷೇತ್ರದಿಂದ ನಿಲ್ಲಬೇಕು ಎಂದು ಒತ್ತಾಯ ಬಂತು. ಕೊನೆಗೆ ಸ್ವರೂಪ್ ರೇವಣ್ಣ ಅವರನ್ನು ಕಣಕ್ಕೆ ಇಳಿಸಲಾಯ್ತು. ಈ ಹಿನ್ನೆಲೆಯಲ್ಲಿ ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:31 am, Fri, 20 September 24