AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂ‘ಹಾಸನ’ಕ್ಕೆ ಟಿಕೆಟ್ ಫೈಟ್: ಭವಾನಿ ರೇವಣ್ಣ ಕಿತ್ತಾಟದ ಮಧ್ಯೆ ಹೆಚ್.ಪಿ. ಸ್ವರೂಪ್ ಫುಲ್ ಆ್ಯಕ್ಟಿವ್! ಹೆಚ್​ಡಿಕೆ ತಥಾಸ್ತು ಅಂದ್ರಾ?​

ಜೆಡಿಎಸ್ ಪಕ್ಷದ ಪ್ರಮುಖ ಟಿಕೆಟ್ ಆಕಾಂಕ್ಷಿ ಹೆಚ್.ಪಿ. ಸ್ವರೂಪ್​ ಅವರು ಹಗಲು, ರಾತ್ರಿ ಎನ್ನದೆ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

ಸಿಂ‘ಹಾಸನ’ಕ್ಕೆ ಟಿಕೆಟ್ ಫೈಟ್: ಭವಾನಿ ರೇವಣ್ಣ ಕಿತ್ತಾಟದ ಮಧ್ಯೆ ಹೆಚ್.ಪಿ. ಸ್ವರೂಪ್  ಫುಲ್ ಆ್ಯಕ್ಟಿವ್! ಹೆಚ್​ಡಿಕೆ ತಥಾಸ್ತು ಅಂದ್ರಾ?​
TV9 Web
| Edited By: |

Updated on:Feb 01, 2023 | 11:27 AM

Share

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್​ಗಾಗಿ ಕದನ ಜೋರಾಗಿ ನಡೆಯುತ್ತಿದೆ. ಹೆಚ್​ಡಿ ಕುಮಾರಸ್ವಾಮಿಗೆ ಒತ್ತಡ ತಂತ್ರ ಫಲ ನೀಡದಿದ್ದಾಗ ಹೆಚ್​ಡಿ ದೇವೇಗೌಡರನ್ನ ಮನವೊಲಿಸಲು ರೇವಣ್ಣ ಫ್ಯಾಮಿಲಿ ಪ್ಲಾನ್ ಮಾಡಿಕೊಳ್ಳುತ್ತಿದೆ. ಆದ್ರೆ ಇದರೆಲ್ಲದರ ನಡುವೆ ಹೆಚ್.ಪಿ.ಸ್ವರೂಪ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಸ್ವರೂಪ್‌ಗೆ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಸಿಕ್ತಾ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಜೆಡಿಎಸ್ ಪಕ್ಷದ ಪ್ರಮುಖ ಟಿಕೆಟ್ ಆಕಾಂಕ್ಷಿ ಹೆಚ್.ಪಿ. ಸ್ವರೂಪ್​ ಅವರು ಹಗಲು, ರಾತ್ರಿ ಎನ್ನದೆ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಗ್ಯಾರಳ್ಳಿ, ಮಾವಿನಹಳ್ಳಿ, ದೊಡ್ಡಕೊಂಡಗುಳ ಗ್ರಾಮಗಳಿಗೆ ಕಳೆದ ರಾತ್ರಿ ಭೇಟಿ ನೀಡಿ ಗ್ರಾಮಸ್ಥರ ಜೊತೆ ಚರ್ಚೆ ಮಾಡಿದ್ದಾರೆ. ಈ ವೇಳೆ ಗ್ರಾಮಸ್ಥರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವರೂಪ್ ರನ್ನು ಬರಮಾಡಿಕೊಂಡಿದ್ದಾರೆ.

ದೊಡ್ಡಕೊಂಡಗುಳ ಗ್ರಾಮದ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸ್ವರೂಪ್ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸದ್ಯ ಸ್ವರೂಪ್ ಸಂಚಾರ ತೀವ್ರ ಕುತೂಹಲ ಕೆರಳಿಸಿದೆ. ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಭವಾನಿ ರೇವಣ್ಣ ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಜ.28 ರಂದು ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ರರ ಜೊತೆ ಭಾಗವಹಿಸಿದ್ದ ಭವಾನಿ ರೇವಣ್ಣ ಆ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಸನದ ಅರಳೀಕಟ್ಟೆ ಸರ್ಕಲ್‌ನಲ್ಲಿ ಭಾರತೀಯ ಮಜ್ದೂರ್ ಆಟೋ ರಿಕ್ಷಾ ಚಾಲಕರ ಸಂಘದ (ರಿ) ವತಿಯಿಂದ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ. ಟಿಕೆಟ್ ಯಾರಿಗೆ ಎನ್ನೊದು ಖಾತ್ರಿಯಾಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ನಾಯಕರ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Assembly Polls | ಜೆಡಿಎಸ್ ಟಿಕೆಟ್​ಗೋಸ್ಕರ ಯಾರೇ ಆಕಾಂಕ್ಷಿಗಳಾಗಿದ್ದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಣಯವೇ ಅಂತಿಮ: ಅನಿತಾ ಕುಮಾರಸ್ವಾಮಿ

ಬಿಜೆಪಿ ಶಾಸಕ ಪ್ರೀತಂ ಗೌಡ ಸೋಲಿಸಲು ಪಣತೊಟ್ಟಿದ್ದ ರೇವಣ್ಣ, ಪ್ರೀತಂ ವಿರುದ್ಧ ಪತ್ನಿ ಭವಾನಿ ಕಣಕ್ಕಿಲಿಸಲು ಪ್ಲ್ಯಾನ್ ಮಾಡಿದ್ರು. ಆದ್ರೆ ಭವಾನಿಗೆ ಕುಮಾರಸ್ವಾಮಿ ಟಿಕೆಟ್ ನೀಡಲು ಒಪ್ಪಲಿಲ್ಲ. ಪತ್ನಿಗೆ ಟಿಕೆಟ್​ ಕೊಡಿಸಲು ದೇವೇಗೌಡರ ಮೂಲಕ ಒತ್ತಡ ಹಾಕಿದ್ರು. ಆದ್ರೆ ರೇವಣ್ಣರ ಒತ್ತಡಕ್ಕ ದೇವೇಗೌಡರು ಮಣಿಯಲಿಲ್ಲವಂತೆ. ಹೀಗಾಗಿ ರೇವಣ್ಣ ಪ್ಲ್ಯಾನ್ ಉಲ್ಟಾ ಆಗಿ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಗುತ್ತೆ ಅಂತಾ ಅಲರ್ಟ್ ಆದವರೇ, ತಾವೇ ಕಟ್ಟಿದ ಆಟಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.

ಇನ್ನೂ ಟಿಕೆಟ್ ವಿಚಾರವಾಗಿ ಹೆಚ್‌ಡಿಕೆ ವಿರುದ್ಧ ಬಹಿರಂಗವಾಗಿಯೇ ಮತಾನಾಡಿದ್ದ ಎಂಎಲ್‌ಸಿ ಸೂರಜ್ ರೇವಣ್ಣ ಸಹ ಡ್ಯಾಮೇಜ್ ಕಂಟ್ರೋಲ್​​ಗೆ ಮುಂದಾಗಿದ್ರು. ಭಾವನಾತ್ಮಕವಾಗಿ ಟ್ವೀಟ್ ಮಾಡಿ, ನನ್ನ ಹೇಳಿಕೆಯನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ ಅಂತಾ ಸಮಜಾಯಿಸಿ ಕೊಡೋ ಪ್ರಯತ್ನಕ್ಕೆ ಕೈ ಹಾಕಿದ್ರು. ಭವಾನಿ ರೇವಣ್ಣ ಬಣ, ಸ್ವರೂಪ್ ಬಣ ಅಂತಾ ಎರಡು ಬಣ ಸೃಷ್ಟಿಯಾಗಿದ್ದು, ಚುನಾವಣೆಗೆ ಎಫೆಕ್ಟ್ ಆಗುತ್ತಾ ಅನ್ನೋ ಆತಂಕ ಹಾಸನ ಜೆಡಿಎಸ್‌ನಲ್ಲಿ ಕಾಡ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:19 am, Wed, 1 February 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?