AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಿತ್ತಾಡಿಕೊಂಡ ಶಿವಲಿಂಗೇಗೌಡ, ಹೆಚ್​​ಕೆ ಸುರೇಶ್

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಮತ್ತು ಹೆಚ್​.ಕೆ.ಸುರೇಶ್ ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆಎನ್​ ರಾಜಣ್ಣ ಅವರು ಕಕ್ಕಾಬಿಕ್ಕಿಯಾದರು. ಬಳಿಕ ಮಧ್ಯಪ್ರವೇಶಿಸಿದ ಅಧಿಕಾರಿಗಳು ಶಾಸಕರನ್ನು ಸಮಾಧಾನಪಡಿಸಿದರು.

ಮಂಜುನಾಥ ಕೆಬಿ
| Edited By: Rakesh Nayak Manchi|

Updated on:Oct 16, 2023 | 3:03 PM

Share

ಹಾಸನ, ಅ.16: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ (K. M. Shivalinge Gowda) ಮತ್ತು ಬಿಜೆಪಿ ಶಾಸಕ ಹೆಚ್​.ಕೆ.ಸುರೇಶ್ (H.K. Suresh) ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆ.ಎನ್.​ ರಾಜಣ್ಣ (K.N.Rajanna) ಅವರು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಶಾಸಕ ಸುರೇಶ್ ಅವರು, ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು‌ ಹದಿನೈದು ಜನ ಕರೆದುಕೊಂಡು ಬಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿವಕುಮಾರ್ ರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವರೇ? ಕೆಎಂ ಶಿವಲಿಂಗೇಗೌಡ

ಈ ವೇಳೆ ಸಿಟ್ಟಾದ ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತದೆ, ನನಗೂ ಹಕ್ಕಿದೆ ಎಂದು ಹೇಳಿದ ಸುರೇಶ್, ಮದ್ಯದಂಗಡಿ ತೆರೆದಿರುವವನು ಶಿವಲಿಂಗೇಗೌಡರ ಸ್ನೇಹಿತ ಎಂದು ಮೈಕ್​ ಹಿಡಿದು ಆರೋಪಿಸಿದ್ದಾರೆ. ಇದರಿಂದ ಕೆರಳಿದ ಶಿವಲಿಂಗೇಗೌಡ ಅವರು, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ‌ ಅನುಮತಿ ನೀಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆರೆದಿದ್ದಾರೆ ಎಂದು ಆರೋಪಿಸಿದರು.

ಇಷ್ಟು ಹೇಳಿದ್ದೇ ತಡ, ಹರ್ಷಗೊಂಡ ಕೈ ಕಾರ್ಯಕರ್ರತರು ಶಿವಲಿಂಗೇಗೌಡರ ಪರ ಜೈಕಾರ ಕೂಗಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಸುರೇಶ್ ಪರ ಜೈಕಾರ ಕೂಗಿದ್ದಾರೆ. ಶಾಸಕರ ನಡುವಿನ ಕಿತ್ತಾಟ ನೋಡಿ ಸಚಿವ ರಾಜಣ್ಣ ಅವರು ಕಕ್ಕಾಬಿಕ್ಕಿಯಾಗಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಸಕರನ್ನು ಸಮಾಧಾನಪಡಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 16 October 23

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು