AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಿತ್ತಾಡಿಕೊಂಡ ಶಿವಲಿಂಗೇಗೌಡ, ಹೆಚ್​​ಕೆ ಸುರೇಶ್

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಮತ್ತು ಹೆಚ್​.ಕೆ.ಸುರೇಶ್ ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆಎನ್​ ರಾಜಣ್ಣ ಅವರು ಕಕ್ಕಾಬಿಕ್ಕಿಯಾದರು. ಬಳಿಕ ಮಧ್ಯಪ್ರವೇಶಿಸಿದ ಅಧಿಕಾರಿಗಳು ಶಾಸಕರನ್ನು ಸಮಾಧಾನಪಡಿಸಿದರು.

ಮಂಜುನಾಥ ಕೆಬಿ
| Edited By: |

Updated on:Oct 16, 2023 | 3:03 PM

Share

ಹಾಸನ, ಅ.16: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ (K. M. Shivalinge Gowda) ಮತ್ತು ಬಿಜೆಪಿ ಶಾಸಕ ಹೆಚ್​.ಕೆ.ಸುರೇಶ್ (H.K. Suresh) ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆ.ಎನ್.​ ರಾಜಣ್ಣ (K.N.Rajanna) ಅವರು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಶಾಸಕ ಸುರೇಶ್ ಅವರು, ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು‌ ಹದಿನೈದು ಜನ ಕರೆದುಕೊಂಡು ಬಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿವಕುಮಾರ್ ರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವರೇ? ಕೆಎಂ ಶಿವಲಿಂಗೇಗೌಡ

ಈ ವೇಳೆ ಸಿಟ್ಟಾದ ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತದೆ, ನನಗೂ ಹಕ್ಕಿದೆ ಎಂದು ಹೇಳಿದ ಸುರೇಶ್, ಮದ್ಯದಂಗಡಿ ತೆರೆದಿರುವವನು ಶಿವಲಿಂಗೇಗೌಡರ ಸ್ನೇಹಿತ ಎಂದು ಮೈಕ್​ ಹಿಡಿದು ಆರೋಪಿಸಿದ್ದಾರೆ. ಇದರಿಂದ ಕೆರಳಿದ ಶಿವಲಿಂಗೇಗೌಡ ಅವರು, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ‌ ಅನುಮತಿ ನೀಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆರೆದಿದ್ದಾರೆ ಎಂದು ಆರೋಪಿಸಿದರು.

ಇಷ್ಟು ಹೇಳಿದ್ದೇ ತಡ, ಹರ್ಷಗೊಂಡ ಕೈ ಕಾರ್ಯಕರ್ರತರು ಶಿವಲಿಂಗೇಗೌಡರ ಪರ ಜೈಕಾರ ಕೂಗಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಸುರೇಶ್ ಪರ ಜೈಕಾರ ಕೂಗಿದ್ದಾರೆ. ಶಾಸಕರ ನಡುವಿನ ಕಿತ್ತಾಟ ನೋಡಿ ಸಚಿವ ರಾಜಣ್ಣ ಅವರು ಕಕ್ಕಾಬಿಕ್ಕಿಯಾಗಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಸಕರನ್ನು ಸಮಾಧಾನಪಡಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 16 October 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್