AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಹಣದ ವಿಚಾರವಾಗಿ ಗ್ರಾ.ಪಂ ಸದಸ್ಯೆಯ ಪತಿಗೆ ಧಮ್ಕಿ: ಸ್ಪಷ್ಟನೆ ನೀಡಿದ ಶಾಸಕ ಕೆ.ಎಂ.ಶಿವಲಿಂಗೇಗೌಡ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಾಸು ಎಂಬವರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಣಕ್ಕಾಗಿ ಧಮ್ಕಿ ಹಾಕಿರುವ ಆಡಿಯೋ ವೈರಲ್​ ಆಗಿದ್ದು, ಇದಕ್ಕೆ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ.

Hassan News: ಹಣದ ವಿಚಾರವಾಗಿ ಗ್ರಾ.ಪಂ ಸದಸ್ಯೆಯ ಪತಿಗೆ ಧಮ್ಕಿ: ಸ್ಪಷ್ಟನೆ ನೀಡಿದ ಶಾಸಕ ಕೆ.ಎಂ.ಶಿವಲಿಂಗೇಗೌಡ
ಶಾಸಕ ಕೆಎಂ ಶಿವಲಿಂಗೇಗೌಡ (ಸಂಗ್ರಹ ಚಿತ್ರ)
TV9 Web
| Edited By: ವಿವೇಕ ಬಿರಾದಾರ|

Updated on: Jan 25, 2023 | 2:37 PM

Share

ಹಾಸನ: ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಾಸು ಎಂಬವರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ (K. M. Shivalingegowda) ಹಣಕ್ಕಾಗಿ ಧಮ್ಕಿ ಹಾಕಿರುವ ಆಡಿಯೋ ವೈರಲ್​ ಆಗಿದ್ದು, ಇದಕ್ಕೆ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ನನಗೆ ಸಹಕಾರ ಕೊಡಬೇಕು ಅಂತ ವಾಸುಗೆ ಫೋನ್​ ಮಾಡಿದ್ದೆ. ಆದರೆ ಅವನು ರೆಕಾರ್ಡ್​ ಮಾಡಿಕೊಳ್ಳುತ್ತಾನೆ ಅಂತ ನನಗೆ ಗೊತ್ತಿರಲಿಲ್ಲ. ಮೊದಲು ಆತ ಮಾತನಾಡಿದ್ದನ್ನು ಬಿಟ್ಟಿದ್ದಾನೆ ಎಂದು ಹೇಳಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹ್ಯಾಂಡ್‌ಪೋಸ್ಟ್​​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಏನೋ ಸ್ವಲ್ಪ ಕಷ್ಟದಲ್ಲಿ ಇದ್ದಾನೆ ಸಹಾಯ ಮಾಡಿ ಎಂದು ವಾಸು ಹೇಳಿದ್ದರು. ಕಷ್ಟ, ಸುಖಕ್ಕೆ ಇರುತ್ತಾನೆ ಅಂತ ನಾನೇ ಅವನಿಗೆ 50 ಸಾವಿರ ರೂ. ಕೊಟ್ಟೆ. ಹಣ ಕೊಟ್ಟ ಮರುದಿನ ಚುನಾವಣೆಯಲ್ಲಿ ಬೆಂಬಲ ಕೊಡುತ್ತೇನೆ ಎಂದ್ದಿದ್ದ. ವಿಧಾನಸಭೆಯ ಚುನಾವಣೆಯಲ್ಲಿ ನಿನಗೆ ಬೆಂಬಲ ನೀಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಬೇರೆಯವರಿಗೆ ಬೆಂಬಲ ನೀಡುತ್ತೇನೆ ಎಂದಿದ್ದ. ಪಕ್ಷಕ್ಕೆ ದ್ರೋಹ ಮಾಡಬಾರದು, ಆಮೇಲೆ ನೋಡೋಣ ನಡಿ ಎಂದಿದ್ದೆ. ಆತನಿಗೆ ಯಾರೋ ಪಕ್ಕದಲ್ಲಿ ಹೇಳಿ ಕೊಡುತ್ತಿದ್ದಾರೆ ಎಂದರು.

ಶಿವಲಿಂಗೇಗೌಡ ಸ್ಪಷ್ಟನೆ

ಇವನು (ವಾಸು) ಮೂರು ದಿವಸ ಬಂದು ನಮ್ಮ ತೋಟದಲ್ಲಿ ಕೂತ. ರಾಮಚಂದ್ರು ಇವರೆಲ್ಲಾ ಹೇಳಿದರು ಇವನಿಗೆ ಉಪಾಧ್ಯಕ್ಷ ತಪ್ಪಿದೆ, ಏನೋ ಸ್ವಲ್ಪ ಕಷ್ಟದಲ್ಲಿ ಇದ್ದಾನೆ ಸಹಾಯ ಮಾಡಿ ಅಂದರು. ನಾನು ಮೂರು ದಿವಸ ಗಮನಕ್ಕೆ ಹಾಕಿಕೊಂಡಿರಲಿಲ್ಲ. ಆಮೇಲೆ‌ ಕರೆದು ಕಷ್ಟ, ಸುಖ ಇರುತ್ತೇವೆ ಅಂತ ಹೇಳಿ ತಗಳಪ್ಪಾ, ಎಲ್ಲಾ ಹೇಳ್ತಾ ಇದ್ದಾರೆ ಅಂತ ಹೇಳಿ ನಾನೇ ಅವನಿಗೆ 50 ಸಾವಿರ ದುಡ್ಡು ಕೊಟ್ಟೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಷ್ಟದಲ್ಲಿರುವೆ ಅಂತ ಅವಲತ್ತುಕೊಂಡು ಅವನು ನಮ್ಮ ತೋಟದಲ್ಲಿ 3 ದಿನ ಕೂತಿದ್ದಕ್ಕೆ ಹಣ ನೀಡಿದೆ: ಕೆ ಎಮ್ ಶಿವಲಿಂಗೇಗೌಡ, ಶಾಸಕ

ದುಡ್ಡು ಕೊಟ್ಟ ಮಾರನೇ ದಿನ ಬೆಳಿಗ್ಗೆ ಬಂದು ಅಣ್ಣಾ ಎಂಎಲ್‌ಎಗೆ ನಿನಗೆ ಹಾಕುತ್ತೇವೆ, ಎಂಪಿಗೆ ಬೇರೆಯವರಿಗೆ ಹಾಕುತ್ತೇವೆ ಅಂದ. ನಾನು ಹೇಳಿದೆ ಹಂಗೆಲ್ಲ ಪಾರ್ಟಿಗೆ ದ್ರೋಹ ಮಾಡಬಾರದು ಕಣಯ್ಯ. ಒಂದು ಪಾರ್ಟಿ ಅಂದ ಮೇಲೆ ಒಂದೆ ಕಡೆ ಇರಬೇಕು ಅಂತ. ಈಗ ಯಾಕೆ ಮೊದಲು ಎಂಎಲ್‌ಎ ಮುಗ್ಸಣ ನಡಿ ಆಮೇಲೆ ಇವೆಲ್ಲಾ ನೋಡೋಣ ನಡಿ ಅಂತ ಹೇಳ್ದೆ. ಹೇಳಿ ಆದ್ಮೇಲೆ ಅವರ ಮನೆಗೆ ಕರ್ಕಂಡು ಹೋಗಿ ಊಟನು ಹಾಕ್ದಾ, ಚೆನ್ನಾಗೇ ಇದ್ದ. ಈಗ್ಲೂ ಏನು ಆಗಿಲ್ಲ. ಚೆನ್ನಾಗಿದ್ದಾನೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ