Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ

ಹಾಸನದ ಬಾನು ಮುಷ್ತಾಕ್ ಅವರ "ಹಸಿನಾ ಮತ್ತು ಇತರ ಕತೆಗಳು" ಕೃತಿಯ ಇಂಗ್ಲಿಷ್ ಅನುವಾದ "ಹಾರ್ಟ್ ಲ್ಯಾಂಪ್" ಪ್ರತಿಷ್ಠಿತ ಬುಕ್ಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆದಿದೆ. ಇದು ಬುಕ್ಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆದ ಮೊದಲ ಕನ್ನಡ ಕೃತಿಯಾಗಿದೆ. ಮೇ 21 ರಂದು ಲಂಡನ್ನಲ್ಲಿ ವಿಜೇತರನ್ನು ಘೋಷಿಸಲಾಗುವುದು.

ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ
ಬಾನು ಮುಷ್ತಾಕ್, ಹಾರ್ಟ್ ಲ್ಯಾಂಪ್
Follow us
ವಿವೇಕ ಬಿರಾದಾರ
|

Updated on: Apr 08, 2025 | 9:44 PM

ಹಾಸನ, ಏಪ್ರಿಲ್​ 08: ಹಾಸನದ (Hassan) ಹಿರಿಯ ಸಾಹಿತಿ, ಖ್ಯಾತ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರ “ಹಾರ್ಟ್ ಲ್ಯಾಂಪ್” (Heart Lamp) ಕೃತಿಯು ಪ್ರತಿಷ್ಠಿತ ಬೂಕರ್ ಅವಾರ್ಡ್ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿದೆ. ಈ ಮೂಲಕ ಬೂಕರ್ ಅವಾರ್ಡ್​ನ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಅವರು ಪಾತ್ರವಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸಿನಾ ಮತ್ತು ಇತರ ಕತೆಗಳು’ ಕಥಾಸಂಕಲನವನ್ನು ಇಂಗ್ಲೀಷ್​ಗೆ ದೀಪಾ ಬಸ್ತಿ ಅವರು “ಹಾರ್ಟ್ ಲ್ಯಾಂಪ್” ಎಂದು ಅನವಾದಿಸಿದ್ದಾರೆ. ಈ ಕೃತಿ ಫೆಬ್ರವರಿ ತಿಂಗಳಲ್ಲಿ ಬೂಕರ್ ಅವಾರ್ಡ್​ನ ಲಾಂಗ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿತ್ತು. ಇದೀಗ, ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿದೆ.

ಒಟ್ಟು ಬೂಕರ್ ಅವಾರ್ಡ್​ಗೆ 153 ಕೃತಿಗಳು ನಿರ್ದೇಶಿತವಾಗಿದ್ದವು. ಇದರಲ್ಲಿ ಬಾನು ಮುಷ್ತಾಕ್​ ಅವರ ಹಾರ್ಟ್ ಲ್ಯಾಂಪ್ ಕೃತಿಯೂ ಸೇರಿತ್ತು. ಇದೀಗ ಇದೀಗ ಶಾರ್ಟ್ ಲಿಸ್ಟ್​ನಲ್ಲಿ ಆಯ್ಕೆಯಾಗುವ ಮೂಲಕ ಅನುವಾದಿತ ಕೃತಿ ಪ್ರಶಸ್ತಿಯ ಸನಿಹಕ್ಕೆ ತಲುಪಿದೆ. ಸದ್ಯ ಶಾರ್ಟ್ ಲಿಸ್ಟ್​ನಲ್ಲಿ ಆರು ಕೃತಿ ಗಳು ಸ್ಥಾನ ಪಡೆದಿವೆ.

ಮೇ 21ರಂದು ಲಂಡನ್​ನಲ್ಲಿ ವಿಜೆತ ಕೃತಿಯನ್ನು ಘೋಷಿಸಲಾಗುತ್ತದೆ. ಶಾರ್ಟ್​ ಲಿಸ್ಟ್​ನಲ್ಲಿ ಆಯ್ಕೆಯಾಗಿರುವ ಎಲ್ಲರನ್ನೂ ಲಂಡನ್​ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ. ವಿಜೇತರಿಗೆ 50 ಸಾವಿರ ಪೌಂಡ್​ ಬಹುಮಾನ ದೊರೆಯಲಿದೆ. ಈ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಲಿ ಎಂಬುವುದು ಕನ್ನಡಿಗರ ಆಶಯವಾಗಿದೆ. ಹಾರ್ಟ್​ ಲ್ಯಾಂಪ್​ ಕಳೆದ ವರ್ಷ ಪೆನ್​ ಟ್ರಾನ್ಸಲೇಟ್ಸ್​ ಪ್ರಶಸ್ತಿಯನ್ನೂ ಪಡೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ