AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ

ಹಾಸನದ ಬಾನು ಮುಷ್ತಾಕ್ ಅವರ "ಹಸಿನಾ ಮತ್ತು ಇತರ ಕತೆಗಳು" ಕೃತಿಯ ಇಂಗ್ಲಿಷ್ ಅನುವಾದ "ಹಾರ್ಟ್ ಲ್ಯಾಂಪ್" ಪ್ರತಿಷ್ಠಿತ ಬುಕ್ಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆದಿದೆ. ಇದು ಬುಕ್ಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸ್ಥಾನ ಪಡೆದ ಮೊದಲ ಕನ್ನಡ ಕೃತಿಯಾಗಿದೆ. ಮೇ 21 ರಂದು ಲಂಡನ್ನಲ್ಲಿ ವಿಜೇತರನ್ನು ಘೋಷಿಸಲಾಗುವುದು.

ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ
ಬಾನು ಮುಷ್ತಾಕ್, ಹಾರ್ಟ್ ಲ್ಯಾಂಪ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 08, 2025 | 9:44 PM

Share

ಹಾಸನ, ಏಪ್ರಿಲ್​ 08: ಹಾಸನದ (Hassan) ಹಿರಿಯ ಸಾಹಿತಿ, ಖ್ಯಾತ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರ “ಹಾರ್ಟ್ ಲ್ಯಾಂಪ್” (Heart Lamp) ಕೃತಿಯು ಪ್ರತಿಷ್ಠಿತ ಬೂಕರ್ ಅವಾರ್ಡ್ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿದೆ. ಈ ಮೂಲಕ ಬೂಕರ್ ಅವಾರ್ಡ್​ನ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಅವರು ಪಾತ್ರವಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸಿನಾ ಮತ್ತು ಇತರ ಕತೆಗಳು’ ಕಥಾಸಂಕಲನವನ್ನು ಇಂಗ್ಲೀಷ್​ಗೆ ದೀಪಾ ಬಸ್ತಿ ಅವರು “ಹಾರ್ಟ್ ಲ್ಯಾಂಪ್” ಎಂದು ಅನವಾದಿಸಿದ್ದಾರೆ. ಈ ಕೃತಿ ಫೆಬ್ರವರಿ ತಿಂಗಳಲ್ಲಿ ಬೂಕರ್ ಅವಾರ್ಡ್​ನ ಲಾಂಗ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿತ್ತು. ಇದೀಗ, ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿದೆ.

ಒಟ್ಟು ಬೂಕರ್ ಅವಾರ್ಡ್​ಗೆ 153 ಕೃತಿಗಳು ನಿರ್ದೇಶಿತವಾಗಿದ್ದವು. ಇದರಲ್ಲಿ ಬಾನು ಮುಷ್ತಾಕ್​ ಅವರ ಹಾರ್ಟ್ ಲ್ಯಾಂಪ್ ಕೃತಿಯೂ ಸೇರಿತ್ತು. ಇದೀಗ ಇದೀಗ ಶಾರ್ಟ್ ಲಿಸ್ಟ್​ನಲ್ಲಿ ಆಯ್ಕೆಯಾಗುವ ಮೂಲಕ ಅನುವಾದಿತ ಕೃತಿ ಪ್ರಶಸ್ತಿಯ ಸನಿಹಕ್ಕೆ ತಲುಪಿದೆ. ಸದ್ಯ ಶಾರ್ಟ್ ಲಿಸ್ಟ್​ನಲ್ಲಿ ಆರು ಕೃತಿ ಗಳು ಸ್ಥಾನ ಪಡೆದಿವೆ.

ಮೇ 21ರಂದು ಲಂಡನ್​ನಲ್ಲಿ ವಿಜೆತ ಕೃತಿಯನ್ನು ಘೋಷಿಸಲಾಗುತ್ತದೆ. ಶಾರ್ಟ್​ ಲಿಸ್ಟ್​ನಲ್ಲಿ ಆಯ್ಕೆಯಾಗಿರುವ ಎಲ್ಲರನ್ನೂ ಲಂಡನ್​ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ. ವಿಜೇತರಿಗೆ 50 ಸಾವಿರ ಪೌಂಡ್​ ಬಹುಮಾನ ದೊರೆಯಲಿದೆ. ಈ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಲಿ ಎಂಬುವುದು ಕನ್ನಡಿಗರ ಆಶಯವಾಗಿದೆ. ಹಾರ್ಟ್​ ಲ್ಯಾಂಪ್​ ಕಳೆದ ವರ್ಷ ಪೆನ್​ ಟ್ರಾನ್ಸಲೇಟ್ಸ್​ ಪ್ರಶಸ್ತಿಯನ್ನೂ ಪಡೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್