AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ: ಸಂಗೀತ ನಿರ್ದೇಶಕ ಹಂಸಲೇಖ

ಹಾಸನ ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ರಾಷ್ಟ್ರಕವಿ ಕುವೆಂಪು 119ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ. ಭಾರತ ಒಂದು ಒಕ್ಕೂಟವಾಗಿದ್ದು ಒಂದು ಪವಾಡ. ನಮಗೆ ಕನ್ನಡ ಭಾಷೆ ಹಕ್ಕಾಗಿ ಸಿಕ್ಕಿದ್ದು ಭಾಷಾವಾರು ಪ್ರಾಂತ್ಯದಿಂದ ಎಂದು ಹೇಳಿದ್ದಾರೆ.

ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ: ಸಂಗೀತ ನಿರ್ದೇಶಕ ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
ಮಂಜುನಾಥ ಕೆಬಿ
| Edited By: |

Updated on: Dec 30, 2023 | 9:56 PM

Share

ಹಾಸನ, ಡಿಸೆಂಬರ್​ 30: ನಾವು ಇವತ್ತು ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಫೆ.28ರೊಳಗೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಹೇಳಿದ್ದಾರೆ. ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ರಾಷ್ಟ್ರಕವಿ ಕುವೆಂಪು 119ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕೆ ಒಂದು ಕರುಳು ಇದೆ, ಆ ಕರುಳಿಗೆ ಕೊರಳಿದೆ, ಅದೇ ಕರಳು ಕೂಗಿದ ಗೀತೆಯೇ ನಮ್ಮ ನಾಡಗೀತೆ ಎಂದು ಹೇಳಿದ್ದಾರೆ.

ಹಿಂದೆಂದಿಗಿಂತಲೂ ನಾವು ಒಗ್ಗಟ್ಟಾಗಿದ್ದೇವೆ, ಒಂದಾಗಿದ್ದೇವೆ. ನಮ್ಮ ನಾಡಿನ‌ ಚಹರೆ ಏನು ಎಂದು ಗೊತ್ತಾಗಿರುವುದು ನಾಡಗೀತೆಯಿಂದ. ಭಾರತ ಒಂದು ಒಕ್ಕೂಟವಾಗಿದ್ದು ಒಂದು ಪವಾಡ. ನಮಗೆ ಕನ್ನಡ ಭಾಷೆ ಹಕ್ಕಾಗಿ ಸಿಕ್ಕಿದ್ದು ಭಾಷಾವಾರು ಪ್ರಾಂತ್ಯದಿಂದ. ಈಗ ದಿಶಾವನ್ನು ಭಾರತ ಮಾಡಲು ಎಲ್ಲಾ ಪ್ರಯತ್ನ ನಡೆಯುತ್ತಿದೆ. ಉತ್ತರ ಭಾರತದಲ್ಲಿ 700 ಲೋಕಸಭಾ ಕ್ಷೇತ್ರಗಳು ಆಗುತ್ತವೆ. ದಕ್ಷಿಣ ಭಾರತದಲ್ಲಿ ಕೇವಲ 117 ಕ್ಷೇತ್ರಗಳು ಮಾತ್ರ ಆಗುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ‘ಗೆಲೋರ್​ ಆಫ್​ ಮಿಸ್ಟ್ರಿಸ್​’ ಕೃತಿ ಬಿಡುಗಡೆ ಮಾಡಿದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಗಡೆ

ದಿಶಾ ಭಾರತ ಅಂದರೆ ಕನ್ನಡ, ತಮಿಳು, ತೆಲುಗು, ಮಲಯಾಳಂ ದಿಕ್ಕಿಲ್ಲದವರಾಗುತ್ತೇವೆ ನೆನಪಿಟ್ಟುಕೊಳ್ಳಿ.  ಒಕ್ಕೂಟ ಕೊಟ್ಟ ಕನ್ನಡದ ಹಕ್ಕಿನ ಪತ್ರವನ್ನು ಜೋಪಾನ ಮಾಡಬೇಕು. ಈ ಸಂಸ್ಥಾನ ಅತ್ಯಂತ ದೊಡ್ಡ ಸಂಸ್ಥಾನ ಧೈರ್ಯವಾಗಿ ಹೇಳುತ್ತೇನೆ. ಈ ಕ್ಷೇತ್ರದಿಂದ ಒಂದೇ ಒಂದು ವಿನಂತಿ ಮಾಡುತ್ತೇನೆ. ಆ ಸತ್ಪುರುಷನ ಅಭಯ ಎನ್ನುವ ಹೃದಯದ ಕಕ್ಷೆ ಕನ್ನಡಕ್ಕೆ ಬೇಕಾಗಿದೆ. ಈಗ ಭಾಷೆಯಿಂದ ನಮಗೆ ರಾಜ್ಯವಿರಬಹುದು ಮುಂದೆ ಬದಲಾಗಬಹುದು.

ರಾಷ್ಟ್ರಕವಿ ಕುವೆಂಪು ಅವರು ನಮ್ಮ ಚಹರೆ. ಮುಂದೆ ನಮ್ಮ‌ ನಾಡಗೀತೆ ಚಿಕ್ಕ ಚೊಕ್ಕದಾಗಿ ಕಚೇರಿಗಳಲ್ಲಿ ಸಂಗೀತಮಯವಾಗಿ, ಕೇಳುಗರಿಗೆ ಇಂಪಾಗಿ ಕರುಳಿನ ಕೊರಳಿನ ತಿರುಳು ನಾಡಿಗೆ ಪ್ರಸಿದ್ಧಿಯಾಗಲಿ. ಆ ಕವಿಯ ಮುಂದಿನ ಕೆಲಸಗಳನ್ನು ಮಾಡೋಣ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?