Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ: ಸಂಗೀತ ನಿರ್ದೇಶಕ ಹಂಸಲೇಖ

ಹಾಸನ ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ರಾಷ್ಟ್ರಕವಿ ಕುವೆಂಪು 119ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ. ಭಾರತ ಒಂದು ಒಕ್ಕೂಟವಾಗಿದ್ದು ಒಂದು ಪವಾಡ. ನಮಗೆ ಕನ್ನಡ ಭಾಷೆ ಹಕ್ಕಾಗಿ ಸಿಕ್ಕಿದ್ದು ಭಾಷಾವಾರು ಪ್ರಾಂತ್ಯದಿಂದ ಎಂದು ಹೇಳಿದ್ದಾರೆ.

ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ: ಸಂಗೀತ ನಿರ್ದೇಶಕ ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2023 | 9:56 PM

ಹಾಸನ, ಡಿಸೆಂಬರ್​ 30: ನಾವು ಇವತ್ತು ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಫೆ.28ರೊಳಗೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕನ್ನಡಕ್ಕೆ ಒಂದು ರೀತಿಯಲ್ಲಿ ಅಪಾಯ ಬಂದಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಹೇಳಿದ್ದಾರೆ. ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ರಾಷ್ಟ್ರಕವಿ ಕುವೆಂಪು 119ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕೆ ಒಂದು ಕರುಳು ಇದೆ, ಆ ಕರುಳಿಗೆ ಕೊರಳಿದೆ, ಅದೇ ಕರಳು ಕೂಗಿದ ಗೀತೆಯೇ ನಮ್ಮ ನಾಡಗೀತೆ ಎಂದು ಹೇಳಿದ್ದಾರೆ.

ಹಿಂದೆಂದಿಗಿಂತಲೂ ನಾವು ಒಗ್ಗಟ್ಟಾಗಿದ್ದೇವೆ, ಒಂದಾಗಿದ್ದೇವೆ. ನಮ್ಮ ನಾಡಿನ‌ ಚಹರೆ ಏನು ಎಂದು ಗೊತ್ತಾಗಿರುವುದು ನಾಡಗೀತೆಯಿಂದ. ಭಾರತ ಒಂದು ಒಕ್ಕೂಟವಾಗಿದ್ದು ಒಂದು ಪವಾಡ. ನಮಗೆ ಕನ್ನಡ ಭಾಷೆ ಹಕ್ಕಾಗಿ ಸಿಕ್ಕಿದ್ದು ಭಾಷಾವಾರು ಪ್ರಾಂತ್ಯದಿಂದ. ಈಗ ದಿಶಾವನ್ನು ಭಾರತ ಮಾಡಲು ಎಲ್ಲಾ ಪ್ರಯತ್ನ ನಡೆಯುತ್ತಿದೆ. ಉತ್ತರ ಭಾರತದಲ್ಲಿ 700 ಲೋಕಸಭಾ ಕ್ಷೇತ್ರಗಳು ಆಗುತ್ತವೆ. ದಕ್ಷಿಣ ಭಾರತದಲ್ಲಿ ಕೇವಲ 117 ಕ್ಷೇತ್ರಗಳು ಮಾತ್ರ ಆಗುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ‘ಗೆಲೋರ್​ ಆಫ್​ ಮಿಸ್ಟ್ರಿಸ್​’ ಕೃತಿ ಬಿಡುಗಡೆ ಮಾಡಿದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಗಡೆ

ದಿಶಾ ಭಾರತ ಅಂದರೆ ಕನ್ನಡ, ತಮಿಳು, ತೆಲುಗು, ಮಲಯಾಳಂ ದಿಕ್ಕಿಲ್ಲದವರಾಗುತ್ತೇವೆ ನೆನಪಿಟ್ಟುಕೊಳ್ಳಿ.  ಒಕ್ಕೂಟ ಕೊಟ್ಟ ಕನ್ನಡದ ಹಕ್ಕಿನ ಪತ್ರವನ್ನು ಜೋಪಾನ ಮಾಡಬೇಕು. ಈ ಸಂಸ್ಥಾನ ಅತ್ಯಂತ ದೊಡ್ಡ ಸಂಸ್ಥಾನ ಧೈರ್ಯವಾಗಿ ಹೇಳುತ್ತೇನೆ. ಈ ಕ್ಷೇತ್ರದಿಂದ ಒಂದೇ ಒಂದು ವಿನಂತಿ ಮಾಡುತ್ತೇನೆ. ಆ ಸತ್ಪುರುಷನ ಅಭಯ ಎನ್ನುವ ಹೃದಯದ ಕಕ್ಷೆ ಕನ್ನಡಕ್ಕೆ ಬೇಕಾಗಿದೆ. ಈಗ ಭಾಷೆಯಿಂದ ನಮಗೆ ರಾಜ್ಯವಿರಬಹುದು ಮುಂದೆ ಬದಲಾಗಬಹುದು.

ರಾಷ್ಟ್ರಕವಿ ಕುವೆಂಪು ಅವರು ನಮ್ಮ ಚಹರೆ. ಮುಂದೆ ನಮ್ಮ‌ ನಾಡಗೀತೆ ಚಿಕ್ಕ ಚೊಕ್ಕದಾಗಿ ಕಚೇರಿಗಳಲ್ಲಿ ಸಂಗೀತಮಯವಾಗಿ, ಕೇಳುಗರಿಗೆ ಇಂಪಾಗಿ ಕರುಳಿನ ಕೊರಳಿನ ತಿರುಳು ನಾಡಿಗೆ ಪ್ರಸಿದ್ಧಿಯಾಗಲಿ. ಆ ಕವಿಯ ಮುಂದಿನ ಕೆಲಸಗಳನ್ನು ಮಾಡೋಣ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ