AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲೂರು ದೇವಸ್ಥಾನವನ್ನು ಯುನೆಸ್ಕೋ ಶಾಶ್ವತ ಪಟ್ಟಿಗೆ ಸೇರಿಸಲು ದಾಖಲೆ ಸಲ್ಲಿಸಿದ ಕರ್ನಾಟಕ ಸರ್ಕಾರ: ಸಿಎಂ ಬೊಮ್ಮಾಯಿ ಮಾಹಿತಿ

ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಸ್ಥಾನ ಯುನೆಸ್ಕೋ ತಾತ್ಕಾಲಿಕ ಪಟ್ಟಿ ಸೇರಿದೆ. ಇದನ್ನು ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಇದಕ್ಕೆ ಬೇಕಾದ ಇತಿಹಾಸದ ಎಲ್ಲ ದಾಖಲೆಗಳನ್ನು ಕರ್ನಾಟಕ ಸರ್ಕಾರ ಸಲ್ಲಿಸಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.

ಬೇಲೂರು ದೇವಸ್ಥಾನವನ್ನು ಯುನೆಸ್ಕೋ ಶಾಶ್ವತ ಪಟ್ಟಿಗೆ ಸೇರಿಸಲು ದಾಖಲೆ ಸಲ್ಲಿಸಿದ ಕರ್ನಾಟಕ ಸರ್ಕಾರ: ಸಿಎಂ ಬೊಮ್ಮಾಯಿ ಮಾಹಿತಿ
ಬೇಲೂರು ಚೆನ್ನಕೇಶವ ದೇವಸ್ಥಾನ
Rakesh Nayak Manchi
|

Updated on:Feb 21, 2023 | 5:34 PM

Share

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಸ್ಥಾನ (Belur Temple) ಯುನೆಸ್ಕೋ (UNESCO) ತಾತ್ಕಾಲಿಕ ಪಟ್ಟಿ ಸೇರಿದೆ. ಇದನ್ನು ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಇದಕ್ಕೆ ಬೇಕಾದ ಇತಿಹಾಸದ ಎಲ್ಲ ದಾಖಲೆಗಳನ್ನು ಕರ್ನಾಟಕ ಸರ್ಕಾರ (Karnataka Govt) ಸಲ್ಲಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮಾಹಿತಿ ನೀಡಿದ್ದಾರೆ. ಬೇಲೂರಿನಲ್ಲಿ ಚನ್ನಕೇಶವ ದೇವರ (Belur Chennakeshava Temple) ದರ್ಶನದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೂರಿನ ದೇವಸ್ಥಾನ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿದೆ. ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಬೇಕಾದ ಇತಿಹಾಸದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದರು.

ಬೇಲೂರು ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿದ್ದು, ಇಲ್ಲಿನ ಕಲೆ ಎಲ್ಲಾ ಕಡೆಗಳಲ್ಲಿ ಪ್ರಸಿದ್ಧಿ ಪಡೆದಿದೆ. ಅಧಿಕೃತವಾಗಿ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದರೆ ವಿದೇಶದಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಾರೆ. ದೇಶ-ವಿದೇಶಗಳಿಂದ ಪ್ರವಾಸಿಗರು ಬರಲು ಅನುಕೂಲವಾಗುತ್ತದೆ. ಇದರಿಂದ ಅಭಿವೃದ್ಧಿಗೆ ಹೆಚ್ಚಿನ ದುಡ್ಡು ಬರುತ್ತದೆ ಎಂದರು. ಹಂಪಿ ಬಳಿಕ ಯುನೆಸ್ಕೋ ಪಟ್ಟಿಗೆ ಸೇರುತ್ತಿರುವ ಎರಡನೇ ಕ್ಷೇತ್ರ ಬೇಲೂರಿನ ದೇಗುಲವಾಗಿದೆ. ಬೇಲೂರು ಹಾಗೂ ಹಳೇಬೀಡು ಅಭಿವೃದ್ಧಿಯಿಂದ ಪ್ರವಾಸೋದ್ಯಮ ವೃದ್ಧಿಯಾಗಿದ್ದು, ಭವಿಷ್ಯದ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಈ‌ ನಾಡಿನ ಬೆಳವಣಿಗೆಯಿಂದ, ಬೇಲೂರು, ಹಳೇಬೀಡು ಬೆಳವಣಿಗೆಯಿಂದ ಬಹಳ ದೊಡ್ಡಮಟ್ಟದಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಆಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Tue, 21 February 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ