
ಹಾಸನ, ಡಿಸೆಂಬರ್ 30: ಜೆಡಿಎಸ್ (JDS) ಭದ್ರಕೋಟೆ ಹೊಳೆನರಸೀಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವಿಕುಮಾರ್ ವಿರುದ್ಧ ಕಾಂಗ್ರೆಸ್ನ ಭೈರಶೆಟ್ಟಿಗೆ ವಿಜಯಶಾಲಿಯಾಗಿದ್ದಾರೆ. ಹೊಳೆನರಸೀಪುರ ಪುರಸಭೆಯ 23 ವಾರ್ಡ್ಗಳ ಪೈಕಿ 23 ರಲ್ಲೂ ಜೆಡಿಎಸ್ ಗೆದ್ದಿತ್ತು. ಆದರೆ 11ನೇ ವಾರ್ಡ್ ಸದಸ್ಯ ಅಕಾಲಿಕ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 235, ಜೆಡಿಎಸ್ 219, ಪಕ್ಷೇತರ ಅಭ್ಯರ್ಥಿ ಸುರೇಶ್ಗೆ 63 ಮತಗಳು ಬಂದಿವೆ. ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಭೈರಶೆಟ್ಟಿ ಗೆದ್ದಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ 10 ವರ್ಷಗಳ ಬಳಿಕ ಗೆದ್ದು ಬೀಗಿದೆ.
ಮೈಸೂರು: ನಂಜನಗೂಡು ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಗೆದ್ದು ಬೀಗಿದ್ದಾರೆ. ನಂಜನಗೂಡು ನಗರಸಭೆಯ 20ನೇ ವಾರ್ಡ್ಗೆ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಅವರು 231 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದೊರೆಸ್ವಾಮಿ 186 ಮತಗಳು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿಗೆ ಸುಬ್ರಹ್ಮಣ್ಯಗೆ 144 ಮತಗಳು ಬಿದ್ದಿವೆ.
ಮಂಡ್ಯ: ಪಾಂಡವಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಜೆಡಿಎಸ್ ಅಭ್ಯರ್ಥಿಗಳು ಭರ್ಜರಿ ಜಯಬೇರಿ ಬಾರಿಸಿದ್ದಾರೆ. ಪುರಸಭೆ 2, 9ನೇ ವಾರ್ಡ್ಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಜೆಡಿಎಸ್ನ ಯಶವಂತ್ ಹಾಗೂ ಜ್ಯೋತಿ ಅವರು ಕಾಂಗ್ರೆಸ್ ಮತ್ತು ರೈತಸಂಘದ ಮೈತ್ರಿ ಅಭ್ಯರ್ಥಿಗಳ ಎದುರು ಗೆದ್ದಿದ್ದಾರೆ.
ಇದನ್ನೂ ಓದಿ: ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ; ಧರಣಿ ನಡೆಸಿದ ಕೌನ್ಸಿಲರ್ಗಳು
ರಾಮನಗರ: ಕನಕಪುರ ಪುರಸಭೆ ವಾರ್ಡ್ ಸಂಖ್ಯೆ 5ರಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚಾಮರಾಜ್ ವಿರುದ್ಧ 50 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಲೋಕೇಶ್ಗೆ ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರುದ್ರ ಕೊನೇ ಹಂತದಲ್ಲಿ ಚುನಾವಣೆಯಿಂದ ಹಿಂದೆ ಸರಿದಿದರು. ಕಾಂಗ್ರೆಸ್ ಸದಸ್ಯ ಕೃಷ್ಣಪ್ಪ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದೆ.
ಯಾದಗಿರಿ: ಹುಣಸಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಿದೆ. 16 ಸ್ಥಾನಗಳ ಪೈಕಿ 14 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಕೇವಲ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ.
ಹುಣಸಗಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಕ್ಷೇತ್ರ ಸುರಪುರ ವ್ಯಾಪ್ತಿಗೆ ಬರುತ್ತದೆ. ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯಾ ಉಪಾಧ್ಯಕ್ಷ ರಾಜುಗೌಡಗೆ ಭಾರಿ ಹಿನ್ನಡೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ