AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯರು ವಾಪಸ್ ಕಳುಹಿಸಿದ್ರೂ ಮತ್ತೆ ಬಂದು ದುರಂತ ಅಂತ್ಯ ಕಂಡ ನಾಲ್ಕು ಮಕ್ಕಳು

ಇಂದು(ಮೇ.16) ಬೆಳಿಗ್ಗೆ ಹಾಸನ ಜಿಲ್ಲೆಯ ಆಲೂರು(Alur) ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು(Four Childrens) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆ ಆಲೂರು ತಾಲ್ಲೂಕು ಆಸ್ಪತ್ರೆಗೆ ಮಾಜಿ ಶಾಸಕ ಎಚ್ಕೆ ಕುಮಾರಸ್ವಾಮಿ ಭೇಟಿ ನೀಡಿ, ಮೃತ ಕುಟುಂಬ ಸದಸ್ಯರ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು.

ಸ್ಥಳೀಯರು ವಾಪಸ್ ಕಳುಹಿಸಿದ್ರೂ ಮತ್ತೆ ಬಂದು ದುರಂತ ಅಂತ್ಯ ಕಂಡ ನಾಲ್ಕು ಮಕ್ಕಳು
ಮೃತ ಮಕ್ಕಳು
ಮಂಜುನಾಥ ಕೆಬಿ
| Edited By: |

Updated on: May 16, 2024 | 5:09 PM

Share

ಹಾಸನ, ಮೇ 16: ಜಿಲ್ಲೆಯ ಆಲೂರು(Alur) ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಇಂದು(ಮೇ.16) ಬೆಳಿಗ್ಗೆ ದುರಂತವೊಂದು ಸಂಭವಿಸಿದೆ. ಈಜಲು ತೆರಳಿದ್ದ ನಾಲ್ವರು ಮಕ್ಕಳು(Four Childrens) ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು ಮೂಲದ ಸಾತ್ವಿಕ್ ನೀರುಪಾಲಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಆಲೂರು ತಾಲ್ಲೂಕು ಆಸ್ಪತ್ರೆ ಎದುರು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು, ಮಕ್ಕಳ‌ನ್ನು ಕಳೆದುಕೊಂಡು ಹೆತ್ತವರು ಕಣ್ಣೀರಿಡುತ್ತಿದ್ದಾರೆ.

ಕೆರೆ ಬಳಿ ಮಕ್ಕಳನ್ನು ಕಂಡು ವಾಪಸ್ ಕಳಿಸಿದ್ದ ಸ್ಥಳೀಯರು

ಇಂದು ಬೆಳಿಗ್ಗೆ ತಿಂಡಿ ತಿಂದು ಐವರು ಬಾಲಕರು ಕೆರೆಯ ಬಳಿ ಒಟ್ಟಿಗೇ ಬಂದಿದ್ದರು. ಕೆರೆ ಬಳಿ ಮಕ್ಕಳನ್ನು ಕಂಡ ಸ್ಥಳೀಯರು ವಾಪಸ್ ಕಳಿಸಿದ್ದರು. ಆದರೆ, ಒಮ್ಮೆ ವಾಪಸ್ ಹೋಗಿದ್ದ ಬಾಲಕರು, ಮತ್ತೆ ಬಂದು ಕೆರೆಗಿಳಿದಿದ್ದಾರೆ. ಇದೀಗ ಬಿರು ಬಿಸಿಲಿಗೆ ನೀರಿಲ್ಲದೆ ಬತ್ತಿಹೋಗಿದ್ದ ಕೆಸರು ನೀರಿನಲ್ಲಿ ಸಿಲುಕಿ ನಾಲ್ವರು ಬಾಲಕರು ಧಾರುಣ ಸಾವು ಕಂಡಿದ್ದಾರೆ. ಸತತ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಆಲೂರು ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ತಾಲ್ಲೂಕು ಆಸ್ಪತ್ರೆಗೆ ಮಾಜಿ ಶಾಸಕ ಎಚ್ಕೆ ಕುಮಾರಸ್ವಾಮಿ ಬೇಟಿ

ಇನ್ನು ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾದ ಹಿನ್ನಲೆ ತಾಲ್ಲೂಕು ಆಸ್ಪತ್ರೆಗೆ ಮಾಜಿ ಶಾಸಕ ಎಚ್ಕೆ ಕುಮಾರಸ್ವಾಮಿ ಭೇಟಿ ನೀಡಿ, ಮೃತ ಕುಟುಂಬ ಸದಸ್ಯರ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ, ‘ ಸರ್ಕಾರ ಕೂಡಲೇ ಮೃತ ಮಕ್ಕಳ‌ ಕುಟುಂಬಕ್ಕೆ ಪರಿಹಾರ ನೀಡಲಿ. ಮೃತ ಮಕ್ಕಳೆಲ್ಲ ಬಡ ಕುಟುಂಬದ ಮಕ್ಕಳಾಗಿದ್ದು ಸಿಎಂ ಪರಿಹಾರ ನಿದಿಯಿಂದ ಹೆಚ್ಚಿನ ಪರಿಹಾರ ನೀಡಿ ಎಂದು ಒತ್ತಾಯಿಸಿದರು. ಜೊತೆಗೆ ಡಿಸಿ ಅವರು ಸ್ಥಳ ಕ್ಕೆ ಬಂದು ಹೋಗಿದ್ದಾರೆ. ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ದುರಂತ ಸಂಭವಿಸಿದೆ. ಈ ಪ್ರಕರಣದಲ್ಲಿ ಯಾವುದೇ ಕಾನೂನು ತೊಡಕು ಇದ್ದರೂ ಅದನ್ನ ಪರಿಗಣಿಸಬಾರದು. ಕೂಡಲೇ ಸರ್ಕಾರ ಪರಿಹಾರ ಘೋಷಣೆ ಮಾಡಲಿ, ಶಿಕ್ಷಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಈ ಬಗ್ಗೆ ಕ್ರಮ ವಹಿಸಲಿ ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು