AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಹಾಸನದಲ್ಲಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ

ಮಾ.16 ರಿಂದ ಏ.6 ರವರೆಗೆ ಹಾಸನ ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 944 ಪ್ರಕರಣಗಳು ದಾಖಲು ಮಾಡಿಕೊಂಡಿದ್ದಾರೆ. ಇದರಲ್ಲಿ 3,488.185 ಲೀಟರ್ ಮದ್ಯ, 5,64,362 ಲೀಟರ್ ಬಿಯರ್, 34 ಲೀಟರ್ ವೈನ್, 14 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ 2024: ಹಾಸನದಲ್ಲಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ
ಮದ್ಯ ಜಪ್ತಿ ಮಾಡಿದ ಅಧಿಕಾರಿಗಳು
ಮಂಜುನಾಥ ಕೆಬಿ
| Edited By: |

Updated on:Apr 08, 2024 | 8:22 AM

Share

ಹಾಸನ, ಏಪ್ರಿಲ್​ 08: ಲೋಕಸಭಾ ಚುನಾವಣೆ (Lok Sabha Election) ಹಿನ್ನಲೆಯಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು (Excise Department) ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್​ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. ತಪಾಸಣೆ ವೇಳೆ ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ 9,54,08,422 ಕೋಟಿ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. 56,236 ಬಾಕ್ಸ್‌ಗಳಲ್ಲಿದ್ದ (5,63,756.88 ಲೀಟರ್) ಪವರ್ ಕೂಲ್, ಲೆಜೆಂಡ್, ಬ್ಲಾಕ್‌ಫೋರ್ಟ್, ವುಡ್‌ಪೆಕರ್ ಬ್ರ್ಯಾಂಡ್​ ಬಿಯರ್​ ಅನ್ನು ವಶಪಡಿಸಿಕೊಂಡಿದ್ದಾರೆ. ರೂಗಳ ಬಿಯರ್ ವಶಕ್ಕೆ ವುಡ್‌ಪೆಕರ್ ಡಿಸ್ಟಿಲರಿಸ್ ಸನ್ನದುದಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ 20 ದಿನಗಳಲ್ಲಿ ಜಪ್ತಿಯಾದ ಮದ್ಯ

ಮಾ.16 ರಿಂದ ಏ.6 ರವರೆಗೆ ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 944 ಪ್ರಕರಣಗಳು ದಾಖಲು ಮಾಡಿಕೊಂಡಿದ್ದಾರೆ. ಇದರಲ್ಲಿ 3,488.185 ಲೀಟರ್ ಮದ್ಯ, 5,64,362 ಲೀಟರ್ ಬಿಯರ್, 34 ಲೀಟರ್ ವೈನ್, 14 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ

ಇದರ ಜೊತೆಗೆ ಅಬಕಾರಿ ಇಲಾಖೆ ಅಧಿಕಾರಿಗಳು 51 ವಿವಿಧ ರೀತಿಯ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 10,48,76,148 ರೂ ಮೌಲ್ಯದ ಮದ್ಯ ಜಪ್ತಿಮಾಡಲಾಗಿದೆ. 970 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

14.88 ಲಕ್ಷ ಹಣ ಜಪ್ತಿ

ಬಾಗಲಕೋಟೆ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14.88 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ನಾಯನೇಗಲಿ ಚೆಕ್​ಪೋಸ್ಟ್ ಬಳಿ ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಲಾರಿಯಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸಲಾಗುತ್ತಿತ್ತು. ತಪಾಸಣೆ ವೇಳೆ ಲಾರಿಯಲ್ಲಿ 14.88 ಲಕ್ಷ ರೂ. ಹಣ ಪತ್ತೆಯಾಗಿದೆ.

ಕೋಟಿಗಟ್ಟಲೆ ಹಣ, ಮೂಟೆಗಟ್ಟಲೆ ಚಿನ್ನ, ಬೆಳ್ಳಿ ಜಪ್ತಿ

ಬಳ್ಳಾರಿ: ನಗರದ ಕಂಬಳಿ ಬಜಾರ್‌ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 5.60 ಲಕ್ಷ ನಗದು, 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿ ಗಟ್ಟಿ, 103 ಕೆ.ಜಿ ಬೆಳ್ಳಿ ಆಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಣ, ಚಿನ್ನ ಮತ್ತು ಬೆಳ್ಳಿ ಹೇಮಾ ಜ್ಯುವೆಲರ್ಸ್‌ ಮಾಲೀಕ ನರೇಶ್ ಸೋನಿ ಎಂಬುವರಿಗೆ ಸೇರಿದೆ. ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Mon, 8 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?