AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಲ್ಲ ಭವಾನಿ ರೇವಣ್ಣ: ವಿಚಾರಣೆಗೆ ತೆರಳಿದ ಎಸ್​​​ಐಟಿ ಅಧಿಕಾರಿಗಳಿಗೆ ನಿರಾಸೆ

ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಸಿಗದೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. 15 ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿಲ್ಲ ಭವಾನಿ ರೇವಣ್ಣ: ವಿಚಾರಣೆಗೆ ತೆರಳಿದ ಎಸ್​​​ಐಟಿ ಅಧಿಕಾರಿಗಳಿಗೆ ನಿರಾಸೆ
ಭವಾನಿ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: Jun 01, 2024 | 1:55 PM

Share

ಹಾಸನ, ಜೂನ್ 1: ಅಪಹರಣ ಪ್ರಕರಣದಲ್ಲಿ ಹೆಚ್​​ಡಿ ರೇವಣ್ಣ (HD Revanna) ಕುಟುಂಬಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳಿಲ್ಲ. ಆದರೆ ಭವಾನಿ ರೇವಣ್ಣ (Bhavani Revanna) ಇದೀಗ ತಲೆಮರೆಸಿಕೊಂಡಿರುವುದು ಎಸ್​ಐಟಿಯ ತಲೆನೋವಿಗೆ ಕಾರಣವಾಗಿದೆ. 34 ದಿನಗಳ ಕಾಲ ಕಣ್ಣಾಮುಚ್ಚಾಲೆ ಆಡಿದ್ದ ಪ್ರಜ್ವಲ್ ಎಸ್​ಐಟಿ ಖೆಡ್ಡಾಕ್ಕೆ ಬಿದ್ದಾಗಿದೆ. ಪೆನ್​ಡ್ರೈವ್ ಕೇಸ್​ಗೆ ಅಂಟಿಕೊಂಡಿರುವ ಮಹಿಳೆಯ ಕಿಡ್ನ್ಯಾಪ್ ಪ್ರಕರಣ ಭವಾನಿ ರೇವಣ್ಣಗೆ ಮುಳುವಾಗಿದೆ.

ಅಶ್ಲೀಲ ವಿಡಿಯೋಗಳು ಹರಿದಾಡ್ತಿದ್ದಂತೆಯೇ ಹೆಚ್​​ಡಿ ರೇವಣ್ಣ ಮನೆಯ ಕೆಲಸದಾಕೆ ನಾಪತ್ತೆಯಾಗಿದ್ದರು. ಕೆಲಸದಾಕೆ ಮಗ ಕೆಆರ್ ನಗರ ಪೊಲೀಸ್ ಠಾಣೆಗೆ ಅಪಹರಣದ ಕೇಸ್ ಕೊಟ್ಟಿದ್ದರು. ರೇವಣ್ಣ ಹಾಗೂ ಮತ್ತೊಬ್ಬ ಆಪ್ತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಕೇಸ್ ಈಗ ಭವಾನಿ ರೇವಣ್ಣಗೆ ಉರುಳಾಗಿ ಪರಿಣಮಿಸಿದೆ. ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ನೋಟಿಸ್ ಕೊಟ್ಟಿದ್ದರು. ಹೀಗಾಗಿ ಬಂಧನ ಭೀತಿಯಲ್ಲಿದ್ದ ಭವಾನಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಿನ್ನೆ ಅರ್ಜಿ ವಜಾಗೊಳಿಸಿದೆ. ಈ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಭವಾನಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.

ಭವಾನಿ ರೇವಣ್ಣಗೆ ಎಸ್​ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿದೆ. ಭವಾನಿ ರೇವಣ್ಣ ಮನೆಯಲ್ಲಿದ್ದ ಇರದ ಕಾರಣ, ಸಂಜೆ 5ವರೆಗೆ ಕಾಯಲಿದ್ದಾರೆ.

15 ದಿನಗಳ ಹಿಂದೆಯೇ ಮನೆ ತೊರೆದಿರುವ ಭವಾನಿ ರೇವಣ್ಣ

ಹೊಳೆನರಸೀಪುರದಲ್ಲಿರುವ ಭವಾನಿ ರೇವಣ್ಣ ನಿವಾಸ ಖಾಲಿಯಾಗಿದೆ. ಬಂಧನದ ಭೀತಿಯಿಂದ ಭವಾನಿ 15 ದಿನಗಳ ಹಿಂದೆಯೇ ಮನೆ ತೊರೆದಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಕೆಲಸದವರು ಮಾತ್ರ ಇದ್ದಾರೆ. ಹೀಗಾಗಿ ಭವಾನಿ ಮೊಬೈಲ್ ಲೊಕೇಶನ್ ಮೇಲೆ ಎಸ್​ಐಟಿ ಕಣ್ಣಿಟ್ಟಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನ ಸಂಪರ್ಕಿಸಲು ಯತ್ನಿಸುತ್ತಿದೆ. ಭವಾನಿ ವಿಚಾರಣೆಗೆ ಹಾಜರಾದ್ರೆ ಎಸ್​ಐಟಿ ವಶಕ್ಕೆ ಪಡೆಯಲಿದೆ.

ಭವಾನಿ ಕಾರು ಚಾಲಕ ಅಜಿತ್​ಗಾಗಿ ಹುಡುಕಾಟ

ಕಿಡ್ನ್ಯಾಪ್ ಆಗಿದ್ದ ಮಹಿಳೆ ಅಪಹರಣದ ಬಳಿಕ ವಿಡಿಯೋ ಹೇಳಿಕೆ ಹೊರಬಂದಿತ್ತು. ಭವಾನಿ ಕಾರು ಚಾಲಕ ಅಜಿತ್ ಬೆದರಿಸಿ ವಿಡಿಯೋ ಮಾಡಿಸಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಜಿತ್ ನಾಪತ್ತೆಯಾಗಿದ್ದು, ರಾಜ್ಯದ ಮೂಲೆ ಮೂಲೆಯಲ್ಲೂ ಎಸ್​ಐಟಿ ಶೋಧ ನಡೆಸಿದೆ. ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರೋ ಅವರ ಮಾವನ ಮನೆಯಲ್ಲೂ ತಲಾಶ್ ನಡೆಸಿದೆ.

ಇದನ್ನೂ ಓದಿ: ಪ್ರಜ್ವಲ್ ಬಂದಾಯ್ತು ಈಗ ಭವಾನಿ ಎಲ್ಲಿ? ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ರೇವಣ್ಣ ಪತ್ನಿ

ಒಟ್ಟಿನಲ್ಲಿ ರೇವಣ್ಣ ಕುಟುಂಬಕ್ಕೆ ಕಾನೂನು ಕಂಟಕ ಎದುರಾಗಿದೆ. ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗೆ ಇದ್ರೆ, ಪುತ್ರ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಇನ್ನು ಭವಾನಿ ರೇವಣ್ಣ ಬಂಧನ ಭೀತಿಯಲ್ಲಿ ಮನೆ ತೊರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ