AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodi Sri: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದ ಕೋಡಿಮಠ ಶ್ರೀ

Kodi Mutt Seer Sri Shivananda Shivayogi Rajendra Swamiji: ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ ಕೋಡಿಮಠ ಶ್ರೀ.

Kodi Sri: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದ ಕೋಡಿಮಠ ಶ್ರೀ
ಕೋಡಿಮಠ ಶ್ರೀ
TV9 Web
| Edited By: |

Updated on:Apr 05, 2022 | 3:55 PM

Share

ಹಾಸನ: ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ (Prediction). ಈ ವರ್ಷದ ಮಳೆ ಕೆಂಡಮಂಡಲ. ಈ ಬಾರಿ ಮುಂಗಾರು ಚೆನ್ನಾಗಿ ಆಗುತ್ತದೆ, ಹಿಂಗಾರು ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆ, ದೊಂಬಿಗಳು, ಸಾವು, ಕೊಲೆ ನೋವುಗಳು ಹೆಚ್ಚಾಗಲಿವೆ. ವಿಶೇಷವಾಗಿ ಎಲಕ್ಟ್ರಿಕ್‌ನಿಂದ ಹೆಚ್ಚು ಅಪಾಯವಿದೆ ಎಂದು ಮಾರ್ಮಿಕವಾಗಿ ಕೋಡಿಮಠ ಶ್ರೀ ನುಡಿದಿದ್ದಾರೆ

ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದಿರುವ ಕೋಡಿಮಠ ಶ್ರೀ ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಭಾರತದಲ್ಲಿ ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ಜಗತ್ತಿನ ಸಾಮ್ರಾಟರುಗಳು ತಲ್ಲಣಗೊಳ್ಳುತ್ತಾರೆ. ಸಾವು ನೋವುಗಳು ಹೆಚ್ಚಾಗುತ್ತವೆ ಎಂದು ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.

ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ ಕೋಡಿಮಠ ಶ್ರೀ.

ಈ ವರ್ಷಾರಂಭದಲ್ಲಿ ಚಿಕ್ಕಬಳ್ಳಾಪುರದಲ್ಲಿ ಹೀಗೆ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ: ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಬರ ಹೆಚ್ಚಾಗಲಿದೆ. ಪ್ರಕೃತಿ ಅವಾಂತರಗಳು ಹೆಚ್ಚಾಗಿ ಮನುಷ್ಯರಿಗೆ ತೊಂದೆಯಾಗಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗ್ತಿದೆ. ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ (ಫೆಬ್ರವರಿ 11) ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಕಳವಳ ವ್ಯಕ್ತಪಡಿಸಿದ್ದರು.

ಈ ಮೊದಲು ಕೊರೊನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ. ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದರು.

ಭವಿಷ್ಯ ಎಂಬ ವಿಚಾರವನ್ನು ಒಪ್ಪುವ ಬಹುತೇಕರು ಕೋಡಿಮಠದ ಶ್ರೀಗಳ ಭವಿಷ್ಯದ ಬಗ್ಗೆ ಬಹಳಷ್ಟು ನಂಬಿಕೆ ಇಟ್ಟುಕೊಂಡಿರುತ್ತಾರೆ. ಕೋಡಿಮಠದ ಸ್ವಾಮೀಜಿ ಭವಿಷ್ಯ ಈ ಮೊದಲು ನಿಜವಾದ ಬಗ್ಗೆ ಉದಾಹರಣೆಗಳಿವೆ. ದೇಶದಲ್ಲಿ ಬಹಳ ದೊಡ್ಡ ಗಂಡಾಂತರ ಆಗಲಿದೆ ಎಂಬ ಬಗ್ಗೆ ಈ ಮೊದಲು ಹೇಳಿದ್ದರು. ಬಳಿಕ ಸೇನಾ ವಿಮಾನ ಪತನ ಆಗಿದ್ದನ್ನು ಉಲ್ಲೇಖಿಸಿ ತಮ್ಮ ಭವಿಷ್ಯದ ಬಗ್ಗೆ ಕೋಡಿಶ್ರೀಗಳು ಹೇಳಿದ್ದರು.

ಕೊರೊನಾ ಹೆಚ್ಚಾಗಲಿದೆ ಎಂಬ ಭವಿಷ್ಯವನ್ನು ಮೂರನೇ ಅಲೆಗೂ ಮೊದಲು ನೀಡಿದ್ದರು. ಅಲ್ಲದೇ, ಮಳೆ ಹೆಚ್ಚಾಗಿ, ಅತಿವೃಷ್ಟಿ, ಪ್ರಕೃತಿ ವಿಕೋಪ ಸಂಭವಿಸಲಿರುವ ಬಗ್ಗೆಯೂ ಈ ಮೊದಲು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು.

Also Read: ಗೃಹ ಬಳಕೆ ವಿದ್ಯುತ್​ ದರ ಏರಿಕೆಯಾಯ್ತು! ಏಪ್ರಿಲ್​ 1ರಿಂದಲೇ ಯೂನಿಟ್​​ಗೆ 35 ಪೈಸೆ ಹೆಚ್ಚಳ, ಲೆಕ್ಕಾಚಾರ ಇಲ್ಲಿದೆ

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು

Published On - 1:25 pm, Tue, 5 April 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ