AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ.

8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
TV9 Web
| Edited By: |

Updated on: Jun 01, 2022 | 6:17 PM

Share

ಹಾಸನ: ಮದುವೆ ನಿರಾಕಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದ್ದು ಪ್ರೇಮಿಯ ದುರಂತ ಅಂತ್ಯ ಕಂಡ ಲವ್‌ಸ್ಟೋರಿ ವಿಷಯ ವೈರಲ್ ಆಗಿದೆ. ಮೃತನ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿಸಿ ಯುವತಿ ಹಾಗೂ ಆಕೆಯ ಪೋಷಕರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದಲ್ಲಿ ಅನಿಲ್ (24) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಈತನ ಸ್ನೇಹಿತರು ಅನಿಲ್ ಪ್ರೇಯಸಿಯ ಕುಟುಂಬಸ್ಥರ ಫೋಟೋಗಳನ್ನು ವೈರಲ್ ಮಾಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ನಿವಾಸಿ ಅನಿಲ್, ಅದೇ ಊರಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಸುಮಾರು 8ವರ್ಷಗಳ ಕಾಲ ಇಬ್ಬರು ಓಡಾಡಿಕೊಂಡಿದ್ರು. ಈ ವಿಚಾರ ಹುಡುಗಿಯ ಪೋಷಕರಿಗೆ ಗೊತ್ತಾಗುತ್ತಿದ್ದಂತೆ, ಹೊರಗೆ ಹೋಗದಂತೆ ಸ್ಟ್ರಿಕ್ಟ್ ಮಾಡಿದ್ದಾರೆ. ಹುಡುಗ ಮನೆ ಬಳಿ ಹೋದ್ರು, ಹುಡುಗಿ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಅನಿಲ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ತಿರುಮಲದಲ್ಲಿ ಭಕ್ತರು ಇನ್ನು ಮುಂದೆ ಇದನ್ನು ಬಳಸುವಂತಿಲ್ಲ; ಸಂಪೂರ್ಣ ನಿಷೇಧ ಹೇರಿದ TTD

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ. ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅನಿಲ್ ಸಾವನ್ನಪ್ಪಿದ್ದಾರೆ. ಅನಿಲ್ ಸಾವಿಗೆ ಭಾವನಾ ಹಾಗೂ ಪೋಷಕರೇ ಕಾರಣ ಎಂದು ಅನಿಲ್ ಸ್ನೇಹಿತರು ಪೋಸ್ಟರ್ ಹಾಕಿದ್ದಾರೆ. ಭಾವನಾ ಆಕೆಯ ಪೋಷಕರು ಹಾಗೂ ಅನಿಲ್ ಭಾವಚಿತ್ರ ಹಾಕಿ‌ ನೋವು, ಆಕ್ರೋಶ ಹೊರಹಾಕಿದ್ದಾರೆ. ಆತ್ಮಹತ್ಯೆ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ