AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ.

8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
TV9 Web
| Edited By: |

Updated on: Jun 01, 2022 | 6:17 PM

Share

ಹಾಸನ: ಮದುವೆ ನಿರಾಕಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದ್ದು ಪ್ರೇಮಿಯ ದುರಂತ ಅಂತ್ಯ ಕಂಡ ಲವ್‌ಸ್ಟೋರಿ ವಿಷಯ ವೈರಲ್ ಆಗಿದೆ. ಮೃತನ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿಸಿ ಯುವತಿ ಹಾಗೂ ಆಕೆಯ ಪೋಷಕರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದಲ್ಲಿ ಅನಿಲ್ (24) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಈತನ ಸ್ನೇಹಿತರು ಅನಿಲ್ ಪ್ರೇಯಸಿಯ ಕುಟುಂಬಸ್ಥರ ಫೋಟೋಗಳನ್ನು ವೈರಲ್ ಮಾಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ನಿವಾಸಿ ಅನಿಲ್, ಅದೇ ಊರಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಸುಮಾರು 8ವರ್ಷಗಳ ಕಾಲ ಇಬ್ಬರು ಓಡಾಡಿಕೊಂಡಿದ್ರು. ಈ ವಿಚಾರ ಹುಡುಗಿಯ ಪೋಷಕರಿಗೆ ಗೊತ್ತಾಗುತ್ತಿದ್ದಂತೆ, ಹೊರಗೆ ಹೋಗದಂತೆ ಸ್ಟ್ರಿಕ್ಟ್ ಮಾಡಿದ್ದಾರೆ. ಹುಡುಗ ಮನೆ ಬಳಿ ಹೋದ್ರು, ಹುಡುಗಿ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಅನಿಲ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ತಿರುಮಲದಲ್ಲಿ ಭಕ್ತರು ಇನ್ನು ಮುಂದೆ ಇದನ್ನು ಬಳಸುವಂತಿಲ್ಲ; ಸಂಪೂರ್ಣ ನಿಷೇಧ ಹೇರಿದ TTD

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ. ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅನಿಲ್ ಸಾವನ್ನಪ್ಪಿದ್ದಾರೆ. ಅನಿಲ್ ಸಾವಿಗೆ ಭಾವನಾ ಹಾಗೂ ಪೋಷಕರೇ ಕಾರಣ ಎಂದು ಅನಿಲ್ ಸ್ನೇಹಿತರು ಪೋಸ್ಟರ್ ಹಾಕಿದ್ದಾರೆ. ಭಾವನಾ ಆಕೆಯ ಪೋಷಕರು ಹಾಗೂ ಅನಿಲ್ ಭಾವಚಿತ್ರ ಹಾಕಿ‌ ನೋವು, ಆಕ್ರೋಶ ಹೊರಹಾಕಿದ್ದಾರೆ. ಆತ್ಮಹತ್ಯೆ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್