AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಆಸ್ಪತ್ರೆಯಲ್ಲಿ ವ್ಯಕ್ತಿ ಹಠಾತ್ ಸಾವು, ಕರ್ತವ್ಯ ಲೋಪ ಎಸಗಿದ ವೈದ್ಯ ಅಮಾನತು

ಎದೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಹಠಾತ್ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ವೈದ್ಯರು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ, ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಅರವಳಿಕೆ ತಜ್ಞರನ್ನು ಅಮಾನತುಗೊಳಿಸಲಾಗಿದೆ.

ಹಾಸನ: ಆಸ್ಪತ್ರೆಯಲ್ಲಿ ವ್ಯಕ್ತಿ ಹಠಾತ್ ಸಾವು, ಕರ್ತವ್ಯ ಲೋಪ ಎಸಗಿದ ವೈದ್ಯ ಅಮಾನತು
ಮೃತ ವ್ಯಕ್ತಿಯ ಸಂಬಂಧಿಕರ ಜೊತೆ ಮಾತನಾಡುತ್ತಿರುವ ಹಾಸನ ಡಿಹೆಚ್​ಒ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on: Sep 18, 2023 | 4:12 PM

Share

ಹಾಸನ, ಸೆ.18: ಎದೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಹಠಾತ್ ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ವೈದ್ಯರು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ, ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಅರವಳಿಕೆ ತಜ್ಞರನ್ನು ಅಮಾನತುಗೊಳಿಸಲಾಗಿದೆ.

ಹೆಬ್ಬಾಳು ಗ್ರಾಮದ ಶಿವಣ್ಣ (60) ಎದೆ ನೋವು ಹಿನ್ನೆಲೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಗೆ ಬಂದಾಗ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಎಸಗಿದ ಆರೋಪ ವೈದ್ಯರ ವಿರುದ್ಧ ಕೇಳಿಬಂದಿದೆ. ಪರಿಣಾ, ಶಿವಣ್ಣ ಅವರು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ಅನರ್ಹಕ್ಕೆ ಯಾವ್ಯಾವ ಕೇಸ್​ಗಳು ಗೊತ್ತಾ? ವಕೀಲರು ಹೇಳಿದ್ದಿಷ್ಟು

ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ಹೋರಾಟ ನಿರತರ ಪರ ನಿಂತು ವೈದ್ಯರ ನಿರ್ಲಕ್ಷದ ಬಗ್ಗೆ ಬೇಲೂರು ಶಾಸಕ ಎಚ್.ಕೆ.ಸುರೇಶ್ ಅಸಮದಾನ ಹೊರ ಹಾಕಿದರು. ಮುಂದೆ ಇಂತಹ ಘಟನೆ ಮರುಕಳಿಸದಂತೆ ವೈದ್ಯರಿಗೆ ಸೂಚಿಸಿದರಲ್ಲದೆ, ಹೋರಾಟ ಹಿಂಪಡೆಯಲು ಮೃತರ ಸಂಬಂಧಿಕರಿಗೆ ಮನವಿ ಮಾಡಿದರು.

ಇತ್ತ, ಸ್ಥಳಕ್ಕೆ ದೌಡಾಯಿಸಿದ ಡಿಹೆಚ್​ಒ ಡಾ.ಶಿವಸ್ವಾಮಿ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ ವೈದ್ಯನ ಕರ್ತವ್ಯ ಲೋಪ ಸಾಬೀತಾಗಿದೆ. ಹೀಗಾಗಿ ಅರವಳಿಕೆ ತಜ್ಞ ಡಾ.ಹರ್ಷ ಅವರನ್ನು ಅಮಾನತುಗೊಳಿಸಿದ ಡಿಹೆಚ್​ಒ, ತಾಲ್ಲೂಕು ವೈದ್ಯಾಧಿಕಾರಿ ಹಾಗೂ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ನೋಟೀಸ್ ನೀಡಲು ಮುಂದಾಗಿದ್ದಾರೆ. ವೈದ್ಯರನ್ನು ಅಮಾನತು ಮಾಡುತ್ತಿದ್ದಂತೆ ಪ್ರತಿಭಟನೆ ಹಿಂಪಡೆದ ಸಂಬಂಧಿಕರು ಶವವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Manjunath KB
Manjunath KB
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ