AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿಘಾಟ್​​ನಲ್ಲಿ ಸುರಂಗ​ ಮಾರ್ಗ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ಚಿಂತನೆ ಮಾಡಿದ್ದೇವೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ಹಾಸನ-ಶಿರಾಡಿಘಾಟ್​​ನಲ್ಲಿ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಶಿರಾಡಿಘಾಟ್​​ನಲ್ಲಿ ಸುರಂಗ​ ಮಾರ್ಗ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಶಿರಡಿಘಾಟ್​ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಮಾಡಲು ಸೋಮವಾರ ದೆಹಲಿಗೆ ತೆರಳಲಿರುವ ಸತೀಶ್ ಜಾರಕಿಹೊಳಿ
Rakesh Nayak Manchi
|

Updated on:Jun 24, 2023 | 8:58 PM

Share

ಹಾಸನ: ಶಿರಾಡಿಘಾಟ್​​ನಲ್ಲಿ ಸುರಂಗ​ ನಿರ್ಮಿಸುವ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸುಳಿವು ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಮಾತನಾಡಿದ ಅವರು, ಶಿರಾಡಿಘಾಟ್‌ನಲ್ಲಿ (ShiradiGhat) ಪರ್ಯಾಯ ಮಾರ್ಗ ಚಿಂತನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಜೊತೆ ಮಾತನಾಡಲು ಸೋಮವಾರ ದೆಹಲಿಗೆ ಹೋಗುತ್ತಿದ್ದೇನೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದರೆ ದೇಶದಲ್ಲೇ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು.

ಸಕಲೇಶಪುರ ತಾಲ್ಲೂಕಿನ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ವ್ಯವಸ್ಥೆಗೆ ಎನ್​ಹೆಚ್​ಎಐ ಅಧಿಕಾರಿಗಳು ನೀಲನಕ್ಷೆ ತೋರಿಸಿದ್ದಾರೆ. ಇದು 30 ಕಿ.ಮಿ‌ ರಸ್ತೆಯಾಗಿದ್ದು, ಮೂರು ಕಡೆ ಟನಲ್ ನಿರ್ಮಾಣವಾಗುತ್ತದೆ. ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಗಮನಕ್ಕೆ ತರುತ್ತೇವೆ. ಸೋಮವಾರ ನಾನು ದೆಹಲಿಗೆ ಹೋಗಿ ಕೇಂದ್ರ ಸಚಿವರನ್ನ ಭೇಟಿ ಮಾಡಿ ವಿಷಯ ಪ್ರಸ್ತಾಪ‌ ಮಾಡುತ್ತೇನೆ. ಕೇಂದ್ರ ಸಚಿವರು ಒಪ್ಪಿಗೆ ಕೊಟ್ಟರೆ ದೇಶದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು.

ಇದನ್ನೂ ಓದಿ: Satish Jarkiholi: ಸರ್ವರ್ ಹ್ಯಾಕ್ ಅಂತ ಸುಳ್ಳು ಆರೋಪ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ತಪ್ಪನ್ನು ಸಮರ್ಥಿಸಿಕೊಂಡ ಬಗೆ ಆಘಾತಕಾರಿ!

ಪರ್ಯಾಯ ಮಾರ್ಗ ಮತ್ತು ಸುರಂಗ ಮಾರ್ಗದ ಬಗ್ಗೆ ಕೇಂದ್ರ ತೀರ್ಮಾನ ಮಾಡಬೇಕು. ಈ ಯೋಜನೆಗೆ ಸಂಪೂರ್ಣ ‌ದುಡ್ಡು ಕೊಡುವುದು ರಾಷ್ಟ್ರೀಯ ರಸ್ತೆ ಪ್ರಾಧಿಕಾರ. ನಾವು ಪರಿಸರಕ್ಕೆ ಯಾವುದೇ ತೊಂದರೆ ಮಾಡದೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.

ಇದಕ್ಕೂ ಮುನ್ನ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ಮಾಡಿದ ಸತೀಶ್ ಜಾರಕಿಹೊಳಿ, ನವೆಂಬರ್ 1 ರ ಒಳಗೆ ಹಾಸನದಿಂದ ಸಕಲೇಶಪುರದ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಆದರೆ 2024ರ ಮಾರ್ಚ್ ವರೆಗೆ ಸಂಪೂರ್ಣ ಕಾಮಗಾರಿ ಮುಗಿಸಲು ಕಾಲಾವಕಾಶ ಕೋರಿದ್ದಾರೆ. ಪ್ರತಿ ತಿಂಗಳೂ ಈ ಬಗ್ಗೆ ಸಭೆ ಕರೆದು ಕಾಮಗಾರಿ ಬಗ್ಗೆ ಗಮನ ಕೊಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Sat, 24 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ